AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳು ಅನೇಕರಿಗೆ ಬೇಸರ ತರಿಸಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?
ಸುದೀಪ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jul 01, 2021 | 7:20 AM

Share

ಬಿಗ್​ ಬಾಸ್​ ಸೀಸನ್​ 8 ಮೊದಲ ಇನ್ನಿಂಗ್ಸ್​ ಆರಂಭದಲ್ಲಿ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ವೈರಸ್​ ಮತ್ತು ಮನುಷ್ಯರ ಟಾಸ್ಕ್​ನಲ್ಲಿ ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದರು. ಪ್ರೀತಿಯಿಂದ ಆಡಬಹುದಾದ ಗೇಮ್​ನಲ್ಲಿ ದ್ವೇಷ ಕಾರಿಕೊಂಡಿದ್ದರು. ಎರಡನೇ ಇನ್ನಿಂಗ್ಸ್​ ಆರಂಭದಲ್ಲೂ ಇದು ಪುನರಾವರ್ತನೆ ಆಗಿದೆ. ಈ ವಿಚಾರದಲ್ಲಿ ಸ್ಪರ್ಧಿಗಳಿಗೆ ಸುದೀಪ್​ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಲಕ್ಷಣ ಕಾಣುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿಗಳು ನಡೆದುಕೊಂಡಿದ್ದ ರೀತಿ ಸುದೀಪ್​ಗೆ ಇಷ್ಟವಾಗಿಲ್ಲ. ಖುಷಿಯಿಂದ ನಡೆಯಬೇಕಿದ್ದ ಟಾಸ್ಕ್​ ರಣರಂಗವಾಗಿದ್ದಕ್ಕೆ ಸುದೀಪ್​ ಛೀಮಾರಿ ಹಾಕಿದ್ದರು. ಇದಾದ ನಂತರ ಮನೆಯವರು ಪಾಠ ಕಲಿತಿದ್ದರು. ಎಲ್ಲರೂ ಒಂದಾಗಿದ್ದರು. ಈಗ ಮತ್ತದೇ ರಿಪೀಟ್​ ಆಗಿದೆ.

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳಿಂದ ಈ ದ್ವೇಷ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ. ಮಂಜು-ದಿವ್ಯಾ ಜತೆ ಪ್ರಶಾಂತ್​-ಚಕ್ರವರ್ತಿ ಜಗಳ ಆಡಿದ್ದಾರೆ. ನಿಧಿ ಸುಬ್ಬಯ್ಯ ಹಾಗೂ ಅರವಿಂದ್ ಕೆಪಿ ಕಿತ್ತಾಡಿಕೊಂಡಿದ್ದಾರೆ. ಕ್ಲೋಸ್​ ಫ್ರೆಂಡ್ಸ್​ ಆಗಿರುವ ನಿಧಿ-ಶುಭಾ ನಡುವೆಯೂ ಮಾತಿನ ಚಕಮಕಿ ನಡೆದಿದೆ. ರಘು-ವೈಷ್ಣವಿ ನಡುವೆ ಉಂಟಾದ ಮಿಸ್​ ಅಂಡರ್​​ಸ್ಟ್ಯಾಂಡಿಗ್​ನಿಂದ ಇಬ್ಬರೂ ಬೇಸರ ಮಾಡಿಕೊಂಡರು.

ಒಟ್ಟಿನಲ್ಲಿ ಎರಡನೇ ಇನ್ನಿಂಗ್ಸ್​ನ ಎರಡನೇ ವಾರ ಮನೆ ಸಂಪೂರ್ಣವಾಗಿ ರಣರಂಗವಾಗಿದೆ. ಶಮಂತ್​ ಹಾಗೂ ಶುಭಾ ಪೂಂಜಾ ಎಲ್ಲವನ್ನೂ ಸರಿ ಮಾಡೋಕೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಭಿನ್ನಾಭಿಪ್ರಾಯಗಳು ಶಮನವಾಗುತ್ತಿಲ್ಲ. ಹೀಗಾಗಿ, ಈ ವಾರ​ ಸ್ಪರ್ಧಿಗಳಿಗೆ ಸುದೀಪ್ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.

ಇದನ್ನೂ ಓದಿ:

 ‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

Divya Uruduga: ಪದೇಪದೇ ಅರವಿಂದ್ ವಹಿಸಿಕೊಂಡು ಬರುವ ದಿವ್ಯಾಗೆ ಮಾತಿನಲ್ಲೇ ತಿವಿದ ಸುದೀಪ್

ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..