AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳು ಅನೇಕರಿಗೆ ಬೇಸರ ತರಿಸಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jul 01, 2021 | 7:20 AM

Share

ಬಿಗ್​ ಬಾಸ್​ ಸೀಸನ್​ 8 ಮೊದಲ ಇನ್ನಿಂಗ್ಸ್​ ಆರಂಭದಲ್ಲಿ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ವೈರಸ್​ ಮತ್ತು ಮನುಷ್ಯರ ಟಾಸ್ಕ್​ನಲ್ಲಿ ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದರು. ಪ್ರೀತಿಯಿಂದ ಆಡಬಹುದಾದ ಗೇಮ್​ನಲ್ಲಿ ದ್ವೇಷ ಕಾರಿಕೊಂಡಿದ್ದರು. ಎರಡನೇ ಇನ್ನಿಂಗ್ಸ್​ ಆರಂಭದಲ್ಲೂ ಇದು ಪುನರಾವರ್ತನೆ ಆಗಿದೆ. ಈ ವಿಚಾರದಲ್ಲಿ ಸ್ಪರ್ಧಿಗಳಿಗೆ ಸುದೀಪ್​ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಲಕ್ಷಣ ಕಾಣುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿಗಳು ನಡೆದುಕೊಂಡಿದ್ದ ರೀತಿ ಸುದೀಪ್​ಗೆ ಇಷ್ಟವಾಗಿಲ್ಲ. ಖುಷಿಯಿಂದ ನಡೆಯಬೇಕಿದ್ದ ಟಾಸ್ಕ್​ ರಣರಂಗವಾಗಿದ್ದಕ್ಕೆ ಸುದೀಪ್​ ಛೀಮಾರಿ ಹಾಕಿದ್ದರು. ಇದಾದ ನಂತರ ಮನೆಯವರು ಪಾಠ ಕಲಿತಿದ್ದರು. ಎಲ್ಲರೂ ಒಂದಾಗಿದ್ದರು. ಈಗ ಮತ್ತದೇ ರಿಪೀಟ್​ ಆಗಿದೆ.

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳಿಂದ ಈ ದ್ವೇಷ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ. ಮಂಜು-ದಿವ್ಯಾ ಜತೆ ಪ್ರಶಾಂತ್​-ಚಕ್ರವರ್ತಿ ಜಗಳ ಆಡಿದ್ದಾರೆ. ನಿಧಿ ಸುಬ್ಬಯ್ಯ ಹಾಗೂ ಅರವಿಂದ್ ಕೆಪಿ ಕಿತ್ತಾಡಿಕೊಂಡಿದ್ದಾರೆ. ಕ್ಲೋಸ್​ ಫ್ರೆಂಡ್ಸ್​ ಆಗಿರುವ ನಿಧಿ-ಶುಭಾ ನಡುವೆಯೂ ಮಾತಿನ ಚಕಮಕಿ ನಡೆದಿದೆ. ರಘು-ವೈಷ್ಣವಿ ನಡುವೆ ಉಂಟಾದ ಮಿಸ್​ ಅಂಡರ್​​ಸ್ಟ್ಯಾಂಡಿಗ್​ನಿಂದ ಇಬ್ಬರೂ ಬೇಸರ ಮಾಡಿಕೊಂಡರು.

ಒಟ್ಟಿನಲ್ಲಿ ಎರಡನೇ ಇನ್ನಿಂಗ್ಸ್​ನ ಎರಡನೇ ವಾರ ಮನೆ ಸಂಪೂರ್ಣವಾಗಿ ರಣರಂಗವಾಗಿದೆ. ಶಮಂತ್​ ಹಾಗೂ ಶುಭಾ ಪೂಂಜಾ ಎಲ್ಲವನ್ನೂ ಸರಿ ಮಾಡೋಕೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಭಿನ್ನಾಭಿಪ್ರಾಯಗಳು ಶಮನವಾಗುತ್ತಿಲ್ಲ. ಹೀಗಾಗಿ, ಈ ವಾರ​ ಸ್ಪರ್ಧಿಗಳಿಗೆ ಸುದೀಪ್ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.

ಇದನ್ನೂ ಓದಿ:

 ‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

Divya Uruduga: ಪದೇಪದೇ ಅರವಿಂದ್ ವಹಿಸಿಕೊಂಡು ಬರುವ ದಿವ್ಯಾಗೆ ಮಾತಿನಲ್ಲೇ ತಿವಿದ ಸುದೀಪ್

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?