AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳು ಅನೇಕರಿಗೆ ಬೇಸರ ತರಿಸಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ.

ಸುದೀಪ್​ ಹೇಳಿದ ಬುದ್ಧಿವಾದ ಮರೆತ ಬಿಗ್​ ಬಾಸ್​ ಸ್ಪರ್ಧಿಗಳು; ಈ ವಾರವೂ ಇದೆ ಕಿಚ್ಚನ ಕ್ಲಾಸ್​?
ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Jul 01, 2021 | 7:20 AM

Share

ಬಿಗ್​ ಬಾಸ್​ ಸೀಸನ್​ 8 ಮೊದಲ ಇನ್ನಿಂಗ್ಸ್​ ಆರಂಭದಲ್ಲಿ ಬಿಗ್​ ಬಾಸ್​ ಮನೆ ರಣರಂಗವಾಗಿತ್ತು. ವೈರಸ್​ ಮತ್ತು ಮನುಷ್ಯರ ಟಾಸ್ಕ್​ನಲ್ಲಿ ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದರು. ಪ್ರೀತಿಯಿಂದ ಆಡಬಹುದಾದ ಗೇಮ್​ನಲ್ಲಿ ದ್ವೇಷ ಕಾರಿಕೊಂಡಿದ್ದರು. ಎರಡನೇ ಇನ್ನಿಂಗ್ಸ್​ ಆರಂಭದಲ್ಲೂ ಇದು ಪುನರಾವರ್ತನೆ ಆಗಿದೆ. ಈ ವಿಚಾರದಲ್ಲಿ ಸ್ಪರ್ಧಿಗಳಿಗೆ ಸುದೀಪ್​ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಲಕ್ಷಣ ಕಾಣುತ್ತಿದೆ. ಮೊದಲ ಇನ್ನಿಂಗ್ಸ್​ನಲ್ಲಿ ಬಿಗ್​ ಬಾಸ್​ ಸ್ಪರ್ಧಿಗಳು ನಡೆದುಕೊಂಡಿದ್ದ ರೀತಿ ಸುದೀಪ್​ಗೆ ಇಷ್ಟವಾಗಿಲ್ಲ. ಖುಷಿಯಿಂದ ನಡೆಯಬೇಕಿದ್ದ ಟಾಸ್ಕ್​ ರಣರಂಗವಾಗಿದ್ದಕ್ಕೆ ಸುದೀಪ್​ ಛೀಮಾರಿ ಹಾಕಿದ್ದರು. ಇದಾದ ನಂತರ ಮನೆಯವರು ಪಾಠ ಕಲಿತಿದ್ದರು. ಎಲ್ಲರೂ ಒಂದಾಗಿದ್ದರು. ಈಗ ಮತ್ತದೇ ರಿಪೀಟ್​ ಆಗಿದೆ.

ಬಿಗ್​ ಬಾಸ್​ ಮನೆಯ ಮೊದಲ ವಾರದ ಪಂಚಾಯ್ತಿಯಲ್ಲಿ ಕೆಲವರು ಆಡಿದ ಮಾತುಗಳಿಂದ ಈ ದ್ವೇಷ ಹುಟ್ಟಿಕೊಂಡಿದೆ. ಇದರ ಪರಿಣಾಮವಾಗಿ ಮನೆಯಲ್ಲಿ ಎರಡು ಟೀಂಗಳಾಗಿವೆ. ಸೋಮವಾರದಿಂದ ಇಲ್ಲಿಯವರೆಗೆ ಮನೆಯಲ್ಲಿ ನಿರಂತರವಾಗಿ ಜಗಳಗಳು ನಡೆಯುತ್ತಲೇ ಇವೆ. ಮಂಜು-ದಿವ್ಯಾ ಜತೆ ಪ್ರಶಾಂತ್​-ಚಕ್ರವರ್ತಿ ಜಗಳ ಆಡಿದ್ದಾರೆ. ನಿಧಿ ಸುಬ್ಬಯ್ಯ ಹಾಗೂ ಅರವಿಂದ್ ಕೆಪಿ ಕಿತ್ತಾಡಿಕೊಂಡಿದ್ದಾರೆ. ಕ್ಲೋಸ್​ ಫ್ರೆಂಡ್ಸ್​ ಆಗಿರುವ ನಿಧಿ-ಶುಭಾ ನಡುವೆಯೂ ಮಾತಿನ ಚಕಮಕಿ ನಡೆದಿದೆ. ರಘು-ವೈಷ್ಣವಿ ನಡುವೆ ಉಂಟಾದ ಮಿಸ್​ ಅಂಡರ್​​ಸ್ಟ್ಯಾಂಡಿಗ್​ನಿಂದ ಇಬ್ಬರೂ ಬೇಸರ ಮಾಡಿಕೊಂಡರು.

ಒಟ್ಟಿನಲ್ಲಿ ಎರಡನೇ ಇನ್ನಿಂಗ್ಸ್​ನ ಎರಡನೇ ವಾರ ಮನೆ ಸಂಪೂರ್ಣವಾಗಿ ರಣರಂಗವಾಗಿದೆ. ಶಮಂತ್​ ಹಾಗೂ ಶುಭಾ ಪೂಂಜಾ ಎಲ್ಲವನ್ನೂ ಸರಿ ಮಾಡೋಕೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಭಿನ್ನಾಭಿಪ್ರಾಯಗಳು ಶಮನವಾಗುತ್ತಿಲ್ಲ. ಹೀಗಾಗಿ, ಈ ವಾರ​ ಸ್ಪರ್ಧಿಗಳಿಗೆ ಸುದೀಪ್ ಕ್ಲಾಸ್​ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆ ಇದೆ.

ಇದನ್ನೂ ಓದಿ:

 ‘ಮಂಜು ಬೆಂಬಲಿಗರ ವೋಟ್​ ನಂಗೆ ಸಿಗಲ್ಲ’; ದಿವ್ಯಾ ಸುರೇಶ್​ ಲೆಕ್ಕಾಚಾರ ಉಲ್ಟಾಪಲ್ಟಾ

Divya Uruduga: ಪದೇಪದೇ ಅರವಿಂದ್ ವಹಿಸಿಕೊಂಡು ಬರುವ ದಿವ್ಯಾಗೆ ಮಾತಿನಲ್ಲೇ ತಿವಿದ ಸುದೀಪ್

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ