ಮಾಡಿದ ತಪ್ಪನ್ನು ಜಾಸ್ತಿ ದಿನ ಮುಚ್ಚಿಡೋಕಾಗಲ್ಲ ಅಲ್ವಾ?; ಸುದೀಪ್​ ನೇರ ಪ್ರಶ್ನೆಗೆ ಶಮಂತ್​ ತಬ್ಬಿಬ್ಬು

ಈ ಬಾರಿಯ ಎಲಿಮಿನೇಷನ್ ಪ್ರಕ್ರಿಯೆಯ ಕೊನೆಯಲ್ಲಿ ಉಳಿದುಕೊಂಡಿದ್ದು ಶಮಂತ್​ ಮತ್ತು ಶಂಕರ್​ ಅಶ್ವತ್ಥ್​. ಶಮಂತ್​ ಕೊನೆಯ ಕ್ಷಣದಲ್ಲಿ ಬಚಾವ್​ ಆಗಿದ್ದು, ಶಂಕರ್​ ಅಶ್ವತ್ಥ್​ ಎಲಿಮಿನೇಟ್​ ಆಗಿದ್ದಾರೆ.

ಮಾಡಿದ ತಪ್ಪನ್ನು ಜಾಸ್ತಿ ದಿನ ಮುಚ್ಚಿಡೋಕಾಗಲ್ಲ ಅಲ್ವಾ?; ಸುದೀಪ್​ ನೇರ ಪ್ರಶ್ನೆಗೆ ಶಮಂತ್​ ತಬ್ಬಿಬ್ಬು
ಶಮಂತ್-ಕಿಚ್ಚ ಸುದೀಪ್​
Follow us
| Updated By: ಮದನ್​ ಕುಮಾರ್​

Updated on: Apr 05, 2021 | 4:57 PM

ಬಿಗ್​ ಬಾಸ್​ ಮನೆಯಲ್ಲಿರುವ ಶಮಂತ್​ ಬ್ರೋ ಗೌಡ ತುಂಬಾನೇ ವೀಕ್​ ಸ್ಪರ್ಧಿ ಎಂಬುದು ಮನೆಯವರೆಲ್ಲರ ನಂಬಿಕೆ. ಇದಕ್ಕಾಗಿಯೇ ಸಮಯ ಸಿಕ್ಕಾಗೆಲ್ಲ ಮನೆಯ ಬಹುತೇಕ ಸ್ಪರ್ಧಿಗಳು ಶಮಂತ್​ ಮೈನಸ್​ ಪಾಯಿಂಟ್​ ಬಗ್ಗೆ ಹೇಳುತ್ತಲೇ ಇರುತ್ತಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ಗೆ ಸುದೀಪ್​ ನೇರ ಪ್ರಶ್ನೆ ಕೇಳಿದ್ದಾರೆ. ಈ ಬಾರಿಯ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಕೊನೆಯಲ್ಲಿ ಉಳಿದುಕೊಂಡಿದ್ದು ಶಮಂತ್​ ಮತ್ತು ಶಂಕರ್​ ಅಶ್ವತ್ಥ್​. ಶಮಂತ್​ ಕೊನೆಯ ಕ್ಷಣದಲ್ಲಿ ಬಚಾವ್​ ಆಗಿದ್ದು, ಶಂಕರ್​ ಅಶ್ವತ್ಥ್​ ಎಲಿಮಿನೇಟ್​ ಆಗಿದ್ದಾರೆ. ವೇದಿಕೆ ಮೇಲೆ ಬಂದ ಶಂಕರ್​, ಆರನೇ ವಾರ ಎಲಿಮಿನೇಟ್​ ಆಗೋದು ಶಮಂತ್​ ಎಂದು ಭವಿಷ್ಯ ನುಡಿದರು.

ಇದಕ್ಕೂ ಮೊದಲು ಶಮಂತ್​ ಮಾಡಿದ ತಪ್ಪೊಂದು ಜಗತ್​ ಜಾಹೀರಾಗಿದೆ. ಅದು ಕಿಚ್ಚ ಸುದೀಪ್​ ಎದುರೇ ಅನ್ನೋದು ವಿಶೇಷ. ಕಿಚ್ಚ ಸುದೀಪ್​ ಮನೆಯ ಸದಸ್ಯರಿಗೆ ಪ್ರಶ್ನೆ ಒಂದನ್ನು ಕೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಚೆನ್ನಾಗಿ ಅಡುಗೆ ಮಾಡುತ್ತಾರೆ. ಇದಕ್ಕೆ ಹೌದು ಅಥವಾ ಇಲ್ಲ ಎನ್ನುವ ಉತ್ತರವನ್ನು ಸ್ಪರ್ಧಿಗಳು ನೀಡಬೇಕು.

ಬಹುತೇಕರು ಹೌದು ಎಂದು ಉತ್ತರಿಸಿದರೆ, ಕೆಲವೇ ಕೆಲವು ಮಂದಿ ಮಾತ್ರ ಇಲ್ಲ ಎನ್ನುವ ಉತ್ತರ ನೀಡಿದರು. ಶಮಂತ್​ ಅವರು ವೈಷ್ಣವಿ ಚೆನ್ನಾಗಿ ಅಡುಗೆ ಮಾಡುತ್ತಾರೆ ಎಂದು ಬಾಯ್ತುಂಬ ಹೊಗಳಿದರು. ವೈಷ್ಣವಿ ಅವರು ತುಂಬಾನೇ ಚೆನ್ನಾಗಿ ಅಡುಗೆ ಮಾಡುತ್ತಾರೆ. ಊಟ ವಿಳಂಬವಾಗುತ್ತದೆ ಎಂದಾಗ ಮಧ್ಯೆ ಹೊಟ್ಟೆ ಹಸಿಯದಂತೆ ನೋಡಿಕೊಳ್ಳಲು ಸಣ್ಣ-ಪುಟ್ಟ ಅಡುಗೆ ಮಾಡಿ ಕೊಡ್ತಾರೆ. ಮೊನ್ನೆ ಕದ್ದು ತಿಂದ.. ಎಂದು ಹೇಳುವಾಗ ಶಮಂತ್​ಗೆ ತಪ್ಪಿನ ಅರಿವಾಗಿ ಮಾತನ್ನು ನುಂಗಿದ್ದಾರೆ.

ಐದನೇ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್, ವೈಷ್ಣವಿ ಮೊದಲಾದವರು ನಿಪ್ಪಟ್ಟಿಗೆ ಟೊಮ್ಯಾಟೋ ಹಾಕಿಕೊಂಡು ಅದನ್ನು ಕದ್ದು ತಿಂದಿದ್ದರು. ಇದು ಮನೆಯಲ್ಲಿ ಅನೇಕರಿಗೆ ಗೊತ್ತಿಲ್ಲ. ಅದು ವೀಕೆಂಡ್​ನಲ್ಲಿ ಶಮಂತ್ ಬಾಯಿಯಿಂದಲೇ ಹೊರ ಬಿದ್ದಿದೆ. ಈ ವೇಳೆ ಸುದೀಪ್​, ‘ಮಾಡಿದ ತಪ್ಪನ್ನು ಜಾಸ್ತಿ ದಿನ ಮುಚ್ಚಿಡೋಕೆ ಆಗಲ್ಲ ಅಲ್ವಾ’ ಎಂದು ಕೇಳಿದ್ದಾರೆ. ಈ ಪ್ರಶ್ನೆಗೆ ಶಮಂತ್ ತಬ್ಬಿಬ್ಬಾಗಿದ್ದಾರೆ.

ಇದನ್ನೂ ಓದಿ: ಇಲ್ಲಿದ್ದವರೆಲ್ಲಾ​ ಬುಕ್​ ಆಗಿದಾರೆ, ನನಗೆ ಯಾರೂ ಇಲ್ಲ; ಸುದೀಪ್​ ಮುಂದೆ ಶಮಂತ್​ ಬೇಸರ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ