AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡಿದ ತಪ್ಪನ್ನು ಜಾಸ್ತಿ ದಿನ ಮುಚ್ಚಿಡೋಕಾಗಲ್ಲ ಅಲ್ವಾ?; ಸುದೀಪ್​ ನೇರ ಪ್ರಶ್ನೆಗೆ ಶಮಂತ್​ ತಬ್ಬಿಬ್ಬು

ಈ ಬಾರಿಯ ಎಲಿಮಿನೇಷನ್ ಪ್ರಕ್ರಿಯೆಯ ಕೊನೆಯಲ್ಲಿ ಉಳಿದುಕೊಂಡಿದ್ದು ಶಮಂತ್​ ಮತ್ತು ಶಂಕರ್​ ಅಶ್ವತ್ಥ್​. ಶಮಂತ್​ ಕೊನೆಯ ಕ್ಷಣದಲ್ಲಿ ಬಚಾವ್​ ಆಗಿದ್ದು, ಶಂಕರ್​ ಅಶ್ವತ್ಥ್​ ಎಲಿಮಿನೇಟ್​ ಆಗಿದ್ದಾರೆ.

ಮಾಡಿದ ತಪ್ಪನ್ನು ಜಾಸ್ತಿ ದಿನ ಮುಚ್ಚಿಡೋಕಾಗಲ್ಲ ಅಲ್ವಾ?; ಸುದೀಪ್​ ನೇರ ಪ್ರಶ್ನೆಗೆ ಶಮಂತ್​ ತಬ್ಬಿಬ್ಬು
ಶಮಂತ್-ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 05, 2021 | 4:57 PM

Share

ಬಿಗ್​ ಬಾಸ್​ ಮನೆಯಲ್ಲಿರುವ ಶಮಂತ್​ ಬ್ರೋ ಗೌಡ ತುಂಬಾನೇ ವೀಕ್​ ಸ್ಪರ್ಧಿ ಎಂಬುದು ಮನೆಯವರೆಲ್ಲರ ನಂಬಿಕೆ. ಇದಕ್ಕಾಗಿಯೇ ಸಮಯ ಸಿಕ್ಕಾಗೆಲ್ಲ ಮನೆಯ ಬಹುತೇಕ ಸ್ಪರ್ಧಿಗಳು ಶಮಂತ್​ ಮೈನಸ್​ ಪಾಯಿಂಟ್​ ಬಗ್ಗೆ ಹೇಳುತ್ತಲೇ ಇರುತ್ತಾರೆ. ಈಗ ಬಿಗ್​ ಬಾಸ್​ ಮನೆಯಲ್ಲಿ ಶಮಂತ್​ಗೆ ಸುದೀಪ್​ ನೇರ ಪ್ರಶ್ನೆ ಕೇಳಿದ್ದಾರೆ. ಈ ಬಾರಿಯ ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಕೊನೆಯಲ್ಲಿ ಉಳಿದುಕೊಂಡಿದ್ದು ಶಮಂತ್​ ಮತ್ತು ಶಂಕರ್​ ಅಶ್ವತ್ಥ್​. ಶಮಂತ್​ ಕೊನೆಯ ಕ್ಷಣದಲ್ಲಿ ಬಚಾವ್​ ಆಗಿದ್ದು, ಶಂಕರ್​ ಅಶ್ವತ್ಥ್​ ಎಲಿಮಿನೇಟ್​ ಆಗಿದ್ದಾರೆ. ವೇದಿಕೆ ಮೇಲೆ ಬಂದ ಶಂಕರ್​, ಆರನೇ ವಾರ ಎಲಿಮಿನೇಟ್​ ಆಗೋದು ಶಮಂತ್​ ಎಂದು ಭವಿಷ್ಯ ನುಡಿದರು.

ಇದಕ್ಕೂ ಮೊದಲು ಶಮಂತ್​ ಮಾಡಿದ ತಪ್ಪೊಂದು ಜಗತ್​ ಜಾಹೀರಾಗಿದೆ. ಅದು ಕಿಚ್ಚ ಸುದೀಪ್​ ಎದುರೇ ಅನ್ನೋದು ವಿಶೇಷ. ಕಿಚ್ಚ ಸುದೀಪ್​ ಮನೆಯ ಸದಸ್ಯರಿಗೆ ಪ್ರಶ್ನೆ ಒಂದನ್ನು ಕೇಳಿದ್ದರು. ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಚೆನ್ನಾಗಿ ಅಡುಗೆ ಮಾಡುತ್ತಾರೆ. ಇದಕ್ಕೆ ಹೌದು ಅಥವಾ ಇಲ್ಲ ಎನ್ನುವ ಉತ್ತರವನ್ನು ಸ್ಪರ್ಧಿಗಳು ನೀಡಬೇಕು.

ಬಹುತೇಕರು ಹೌದು ಎಂದು ಉತ್ತರಿಸಿದರೆ, ಕೆಲವೇ ಕೆಲವು ಮಂದಿ ಮಾತ್ರ ಇಲ್ಲ ಎನ್ನುವ ಉತ್ತರ ನೀಡಿದರು. ಶಮಂತ್​ ಅವರು ವೈಷ್ಣವಿ ಚೆನ್ನಾಗಿ ಅಡುಗೆ ಮಾಡುತ್ತಾರೆ ಎಂದು ಬಾಯ್ತುಂಬ ಹೊಗಳಿದರು. ವೈಷ್ಣವಿ ಅವರು ತುಂಬಾನೇ ಚೆನ್ನಾಗಿ ಅಡುಗೆ ಮಾಡುತ್ತಾರೆ. ಊಟ ವಿಳಂಬವಾಗುತ್ತದೆ ಎಂದಾಗ ಮಧ್ಯೆ ಹೊಟ್ಟೆ ಹಸಿಯದಂತೆ ನೋಡಿಕೊಳ್ಳಲು ಸಣ್ಣ-ಪುಟ್ಟ ಅಡುಗೆ ಮಾಡಿ ಕೊಡ್ತಾರೆ. ಮೊನ್ನೆ ಕದ್ದು ತಿಂದ.. ಎಂದು ಹೇಳುವಾಗ ಶಮಂತ್​ಗೆ ತಪ್ಪಿನ ಅರಿವಾಗಿ ಮಾತನ್ನು ನುಂಗಿದ್ದಾರೆ.

ಐದನೇ ವಾರ ಬಿಗ್​ ಬಾಸ್​ ಮನೆಯಲ್ಲಿ ಶಮಂತ್, ವೈಷ್ಣವಿ ಮೊದಲಾದವರು ನಿಪ್ಪಟ್ಟಿಗೆ ಟೊಮ್ಯಾಟೋ ಹಾಕಿಕೊಂಡು ಅದನ್ನು ಕದ್ದು ತಿಂದಿದ್ದರು. ಇದು ಮನೆಯಲ್ಲಿ ಅನೇಕರಿಗೆ ಗೊತ್ತಿಲ್ಲ. ಅದು ವೀಕೆಂಡ್​ನಲ್ಲಿ ಶಮಂತ್ ಬಾಯಿಯಿಂದಲೇ ಹೊರ ಬಿದ್ದಿದೆ. ಈ ವೇಳೆ ಸುದೀಪ್​, ‘ಮಾಡಿದ ತಪ್ಪನ್ನು ಜಾಸ್ತಿ ದಿನ ಮುಚ್ಚಿಡೋಕೆ ಆಗಲ್ಲ ಅಲ್ವಾ’ ಎಂದು ಕೇಳಿದ್ದಾರೆ. ಈ ಪ್ರಶ್ನೆಗೆ ಶಮಂತ್ ತಬ್ಬಿಬ್ಬಾಗಿದ್ದಾರೆ.

ಇದನ್ನೂ ಓದಿ: ಇಲ್ಲಿದ್ದವರೆಲ್ಲಾ​ ಬುಕ್​ ಆಗಿದಾರೆ, ನನಗೆ ಯಾರೂ ಇಲ್ಲ; ಸುದೀಪ್​ ಮುಂದೆ ಶಮಂತ್​ ಬೇಸರ

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?