AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!

ಮಂಜು ಬಳಿ ಕಿಚ್ಚ ಸುದೀಪ್​ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Mar 28, 2021 | 7:18 AM

Share

ಬಿಗ್​ ಬಾಸ್​ ಮನೆಯ ಸದಸ್ಯರು ಕಿಚ್ಚ ಸುದೀಪ್​ ಬಳಿ ಮತ್ತು ಬಿಗ್​ ಬಾಸ್​ ಬಳಿ ಹೊಸ ಬೇಡಿಕೆ ಇಡೋದು ಕಾಮನ್​. ಇದು ತುಂಬಾ ಮೊದಲಿನಿಂದ ನಡೆದುಕೊಂಡು ಬಂದಿದೆ. ಅಚ್ಚರಿ ಎಂದರೆ, ಈಗ ಸುದೀಪ್​ ಅವರೇ ಮಂಜು ಬಳಿ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆಯ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಇನ್ನು ಶಮಂತ್​ಗೆ ಕೂಡ ಕೂದಲು ಎಂದರೆ ತುಂಬಾನೇ ಪ್ರೀತಿ ಎಂದಿದ್ದರು. ಅಷ್ಟೇ ಅಲ್ಲ, ನಾನು ಅಧಿಕವಾಗಿ ಪ್ರೀತಿಸೋ ಕೂದಲನ್ನು ನಿನಗೆ ಕೊಡ್ತಾ ಇದಿನೀ ಎಂದು ಮಂಜುಗೆ ಹೇಳಿದ್ದರು. ಅಂತೆಯೇ, ಮಂಜು ಅದ್ಭುತವಾಗಿ ಶಮಂತ್​ ಕೂದಲನ್ನು ಕಟ್​ ಮಾಡಿದ್ದರು.

ಈ ವಿಚಾರ ವಾರಾಂತ್ಯದಲ್ಲಿ ಚರ್ಚೆಗೆ ಬಂದಿದೆ. ಶಮಂತ್​ ಬಳಿ ಸುದೀಪ್​, ಕೂದಲು ಕಟ್​ ಮಾಡಿದ್ದು ಹೇಗನ್ನಿಸಿತು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅವರು, ಅದ್ಭುತವಾಗಿತ್ತು. ನಿಜಕ್ಕೂ ಮಂಜು ಅದ್ಭುತವಾಗಿ ಕಟ್​ ಮಾಡಿದ್ದಾರೆ ಎಂದು ಹೇಳಿದ್ದರು. ಆಗ ಮಂಜುಗೆ ಸುದೀಪ್ ಹೊಸ ಮನವಿ ಇಟ್ಟಿದ್ದಾರೆ.

ಮಂಜು ಈ ಬಾರಿ ಅದ್ಭುತವಾಗಿ ಕೂದಲು ಕತ್ತರಿಸಿದ್ದೀರಾ. ಇದರಿಂದ ಒಂದಷ್ಟು ಮಂದಿಗೆ ನಿಮ್ಮ ಮೇಲೆ ಭರವಸೆ ಬಂದಿದೆ ಎಂದು ಭಾವಿಸುತ್ತೇನೆ ಎಂದು ಶ್ಲಾಘಿಸಿದರು. ಜತೆಗೆ, ರಾಜೀವ್​ ಕೂದಲಿಗೆ ಕತ್ತರಿ ಹಾಕಿ, ಅವರಿಗೆ ಬೇರೆಯದೇ ಲುಕ್​ ಕೊಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಮಂಜು ಕೂಡ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: BBK8 Elimination: 14 ಸ್ಪರ್ಧಿಗಳ ಪೈಕಿ ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ