AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!

ಮಂಜು ಬಳಿ ಕಿಚ್ಚ ಸುದೀಪ್​ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: Mar 28, 2021 | 7:18 AM

Share

ಬಿಗ್​ ಬಾಸ್​ ಮನೆಯ ಸದಸ್ಯರು ಕಿಚ್ಚ ಸುದೀಪ್​ ಬಳಿ ಮತ್ತು ಬಿಗ್​ ಬಾಸ್​ ಬಳಿ ಹೊಸ ಬೇಡಿಕೆ ಇಡೋದು ಕಾಮನ್​. ಇದು ತುಂಬಾ ಮೊದಲಿನಿಂದ ನಡೆದುಕೊಂಡು ಬಂದಿದೆ. ಅಚ್ಚರಿ ಎಂದರೆ, ಈಗ ಸುದೀಪ್​ ಅವರೇ ಮಂಜು ಬಳಿ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆಯ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಇನ್ನು ಶಮಂತ್​ಗೆ ಕೂಡ ಕೂದಲು ಎಂದರೆ ತುಂಬಾನೇ ಪ್ರೀತಿ ಎಂದಿದ್ದರು. ಅಷ್ಟೇ ಅಲ್ಲ, ನಾನು ಅಧಿಕವಾಗಿ ಪ್ರೀತಿಸೋ ಕೂದಲನ್ನು ನಿನಗೆ ಕೊಡ್ತಾ ಇದಿನೀ ಎಂದು ಮಂಜುಗೆ ಹೇಳಿದ್ದರು. ಅಂತೆಯೇ, ಮಂಜು ಅದ್ಭುತವಾಗಿ ಶಮಂತ್​ ಕೂದಲನ್ನು ಕಟ್​ ಮಾಡಿದ್ದರು.

ಈ ವಿಚಾರ ವಾರಾಂತ್ಯದಲ್ಲಿ ಚರ್ಚೆಗೆ ಬಂದಿದೆ. ಶಮಂತ್​ ಬಳಿ ಸುದೀಪ್​, ಕೂದಲು ಕಟ್​ ಮಾಡಿದ್ದು ಹೇಗನ್ನಿಸಿತು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅವರು, ಅದ್ಭುತವಾಗಿತ್ತು. ನಿಜಕ್ಕೂ ಮಂಜು ಅದ್ಭುತವಾಗಿ ಕಟ್​ ಮಾಡಿದ್ದಾರೆ ಎಂದು ಹೇಳಿದ್ದರು. ಆಗ ಮಂಜುಗೆ ಸುದೀಪ್ ಹೊಸ ಮನವಿ ಇಟ್ಟಿದ್ದಾರೆ.

ಮಂಜು ಈ ಬಾರಿ ಅದ್ಭುತವಾಗಿ ಕೂದಲು ಕತ್ತರಿಸಿದ್ದೀರಾ. ಇದರಿಂದ ಒಂದಷ್ಟು ಮಂದಿಗೆ ನಿಮ್ಮ ಮೇಲೆ ಭರವಸೆ ಬಂದಿದೆ ಎಂದು ಭಾವಿಸುತ್ತೇನೆ ಎಂದು ಶ್ಲಾಘಿಸಿದರು. ಜತೆಗೆ, ರಾಜೀವ್​ ಕೂದಲಿಗೆ ಕತ್ತರಿ ಹಾಕಿ, ಅವರಿಗೆ ಬೇರೆಯದೇ ಲುಕ್​ ಕೊಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಮಂಜು ಕೂಡ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: BBK8 Elimination: 14 ಸ್ಪರ್ಧಿಗಳ ಪೈಕಿ ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ