AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!

ಮಂಜು ಬಳಿ ಕಿಚ್ಚ ಸುದೀಪ್​ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!
ಬಿಗ್ ಬಾಸ್ ಕನ್ನಡ ಸೀಸನ್​ 8
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Mar 28, 2021 | 7:18 AM

ಬಿಗ್​ ಬಾಸ್​ ಮನೆಯ ಸದಸ್ಯರು ಕಿಚ್ಚ ಸುದೀಪ್​ ಬಳಿ ಮತ್ತು ಬಿಗ್​ ಬಾಸ್​ ಬಳಿ ಹೊಸ ಬೇಡಿಕೆ ಇಡೋದು ಕಾಮನ್​. ಇದು ತುಂಬಾ ಮೊದಲಿನಿಂದ ನಡೆದುಕೊಂಡು ಬಂದಿದೆ. ಅಚ್ಚರಿ ಎಂದರೆ, ಈಗ ಸುದೀಪ್​ ಅವರೇ ಮಂಜು ಬಳಿ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆಯ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಇನ್ನು ಶಮಂತ್​ಗೆ ಕೂಡ ಕೂದಲು ಎಂದರೆ ತುಂಬಾನೇ ಪ್ರೀತಿ ಎಂದಿದ್ದರು. ಅಷ್ಟೇ ಅಲ್ಲ, ನಾನು ಅಧಿಕವಾಗಿ ಪ್ರೀತಿಸೋ ಕೂದಲನ್ನು ನಿನಗೆ ಕೊಡ್ತಾ ಇದಿನೀ ಎಂದು ಮಂಜುಗೆ ಹೇಳಿದ್ದರು. ಅಂತೆಯೇ, ಮಂಜು ಅದ್ಭುತವಾಗಿ ಶಮಂತ್​ ಕೂದಲನ್ನು ಕಟ್​ ಮಾಡಿದ್ದರು.

ಈ ವಿಚಾರ ವಾರಾಂತ್ಯದಲ್ಲಿ ಚರ್ಚೆಗೆ ಬಂದಿದೆ. ಶಮಂತ್​ ಬಳಿ ಸುದೀಪ್​, ಕೂದಲು ಕಟ್​ ಮಾಡಿದ್ದು ಹೇಗನ್ನಿಸಿತು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅವರು, ಅದ್ಭುತವಾಗಿತ್ತು. ನಿಜಕ್ಕೂ ಮಂಜು ಅದ್ಭುತವಾಗಿ ಕಟ್​ ಮಾಡಿದ್ದಾರೆ ಎಂದು ಹೇಳಿದ್ದರು. ಆಗ ಮಂಜುಗೆ ಸುದೀಪ್ ಹೊಸ ಮನವಿ ಇಟ್ಟಿದ್ದಾರೆ.

ಮಂಜು ಈ ಬಾರಿ ಅದ್ಭುತವಾಗಿ ಕೂದಲು ಕತ್ತರಿಸಿದ್ದೀರಾ. ಇದರಿಂದ ಒಂದಷ್ಟು ಮಂದಿಗೆ ನಿಮ್ಮ ಮೇಲೆ ಭರವಸೆ ಬಂದಿದೆ ಎಂದು ಭಾವಿಸುತ್ತೇನೆ ಎಂದು ಶ್ಲಾಘಿಸಿದರು. ಜತೆಗೆ, ರಾಜೀವ್​ ಕೂದಲಿಗೆ ಕತ್ತರಿ ಹಾಕಿ, ಅವರಿಗೆ ಬೇರೆಯದೇ ಲುಕ್​ ಕೊಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಮಂಜು ಕೂಡ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: BBK8 Elimination: 14 ಸ್ಪರ್ಧಿಗಳ ಪೈಕಿ ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ