AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!

ಮಂಜು ಬಳಿ ಕಿಚ್ಚ ಸುದೀಪ್​ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

Bigg Boss: ಇದೊಂದು ನಡೆಸಿಕೊಡಿ; ಮಂಜು ಬಳಿ ಹೊಸ ಬೇಡಿಕೆ ಇಟ್ಟ ಕಿಚ್ಚ ಸುದೀಪ್​!
ಬಿಗ್ ಬಾಸ್ ಕನ್ನಡ ಸೀಸನ್​ 8
ರಾಜೇಶ್ ದುಗ್ಗುಮನೆ
| Edited By: |

Updated on: Mar 28, 2021 | 7:18 AM

Share

ಬಿಗ್​ ಬಾಸ್​ ಮನೆಯ ಸದಸ್ಯರು ಕಿಚ್ಚ ಸುದೀಪ್​ ಬಳಿ ಮತ್ತು ಬಿಗ್​ ಬಾಸ್​ ಬಳಿ ಹೊಸ ಬೇಡಿಕೆ ಇಡೋದು ಕಾಮನ್​. ಇದು ತುಂಬಾ ಮೊದಲಿನಿಂದ ನಡೆದುಕೊಂಡು ಬಂದಿದೆ. ಅಚ್ಚರಿ ಎಂದರೆ, ಈಗ ಸುದೀಪ್​ ಅವರೇ ಮಂಜು ಬಳಿ ಹೊಸ ಬೇಡಿಕೆ ಇಟ್ಟಿದ್ದಾರೆ. ವೀಕೆಂಡ್​ನಲ್ಲಿ ಮನೆಯ ಸದಸ್ಯರ ಜತೆ ಮಾತನಾಡುವಾಗ ಈ ಬೇಡಿಕೆ ಬಗ್ಗೆ ಹೇಳಿದ್ದಾರೆ. ಅಷ್ಟಕ್ಕೂ ಸುದೀಪ್​ ಹೇಳಿದ್ದು ಏನು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ. ಶಮಂತ್​ ಬ್ರೋ ಗೌಡ ಬಿಗ್​ ಬಾಸ್​ ಸೀಸನ್​ 8ರ ವೇದಿಕೆ ಏರಿದಾಗ ಅವರ ಕೂದಲನ್ನು ನೋಡಿ ಕಿಚ್ಚ ಸುದೀಪ್​ ಅಚ್ಚರಿ ವ್ಯಕ್ತಪಡಿಸಿದ್ದರು. ಬಿಗ್​ ಬಾಸ್​ ಮನೆ ಸೇರಿದ ನಂತರವೂ ಶಮಂತ್​ ತಮ್ಮ ಕೂದಲು ಹಾಗೂ ಗಡ್ಡದ ಮೂಲಕವೇ ಎಲ್ಲರ ಗಮನ ಸೆಳೆದಿದ್ದರು. ಇನ್ನು ಶಮಂತ್​ಗೆ ಕೂಡ ಕೂದಲು ಎಂದರೆ ತುಂಬಾನೇ ಪ್ರೀತಿ ಎಂದಿದ್ದರು. ಅಷ್ಟೇ ಅಲ್ಲ, ನಾನು ಅಧಿಕವಾಗಿ ಪ್ರೀತಿಸೋ ಕೂದಲನ್ನು ನಿನಗೆ ಕೊಡ್ತಾ ಇದಿನೀ ಎಂದು ಮಂಜುಗೆ ಹೇಳಿದ್ದರು. ಅಂತೆಯೇ, ಮಂಜು ಅದ್ಭುತವಾಗಿ ಶಮಂತ್​ ಕೂದಲನ್ನು ಕಟ್​ ಮಾಡಿದ್ದರು.

ಈ ವಿಚಾರ ವಾರಾಂತ್ಯದಲ್ಲಿ ಚರ್ಚೆಗೆ ಬಂದಿದೆ. ಶಮಂತ್​ ಬಳಿ ಸುದೀಪ್​, ಕೂದಲು ಕಟ್​ ಮಾಡಿದ್ದು ಹೇಗನ್ನಿಸಿತು ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿರುವ ಅವರು, ಅದ್ಭುತವಾಗಿತ್ತು. ನಿಜಕ್ಕೂ ಮಂಜು ಅದ್ಭುತವಾಗಿ ಕಟ್​ ಮಾಡಿದ್ದಾರೆ ಎಂದು ಹೇಳಿದ್ದರು. ಆಗ ಮಂಜುಗೆ ಸುದೀಪ್ ಹೊಸ ಮನವಿ ಇಟ್ಟಿದ್ದಾರೆ.

ಮಂಜು ಈ ಬಾರಿ ಅದ್ಭುತವಾಗಿ ಕೂದಲು ಕತ್ತರಿಸಿದ್ದೀರಾ. ಇದರಿಂದ ಒಂದಷ್ಟು ಮಂದಿಗೆ ನಿಮ್ಮ ಮೇಲೆ ಭರವಸೆ ಬಂದಿದೆ ಎಂದು ಭಾವಿಸುತ್ತೇನೆ ಎಂದು ಶ್ಲಾಘಿಸಿದರು. ಜತೆಗೆ, ರಾಜೀವ್​ ಕೂದಲಿಗೆ ಕತ್ತರಿ ಹಾಕಿ, ಅವರಿಗೆ ಬೇರೆಯದೇ ಲುಕ್​ ಕೊಡಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಮಂಜು ಕೂಡ ಒಪ್ಪಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: BBK8 Elimination: 14 ಸ್ಪರ್ಧಿಗಳ ಪೈಕಿ ಈ ವಾರ ಬಿಗ್​ ಬಾಸ್​ ಮನೆಯಿಂದ ಹೊರ ಹೋಗುವವರು ಇವರೇನಾ?

ಸ್ಪರ್ಧಿಗಳ ವಿರುದ್ಧ ಸಿಟ್ಟಿಗೆದ್ದ ಪ್ರಶಾಂತ್​; ಬಿಗ್​ ಬಾಸ್​ ಜೈಲಿನಲ್ಲಿ ಉಪವಾಸ ಸತ್ಯಾಗ್ರಹ!

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್