AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್​ ಇಲ್ಲದೇ 3 ವಾರ ಮೈ ಮರೆತಿದ್ದ ಬಿಗ್​ ಬಾಸ್​ ಮಂದಿಗೆ ಛಾಟಿ ಬೀಸಿದ ಕಿಚ್ಚನ ವಾಯ್ಸ್​ ಮೆಸೇಜ್​

Bigg Boss Kannada: ಈ ವಾಯ್ಸ್​ ನೋಟ್​ ಮೂಲಕ ಎಲ್ಲರಿಗೂ ಒಂದೊಂದು ಕಿವಿಮಾತು ಹೇಳುತ್ತೇನೆ ಎಂದು ಸುದೀಪ್​ ಮಾತು ಆರಂಭಿಸಿದ್ದಾರೆ. ಇದರ ಪೂರ್ತಿ ಎಪಿಸೋಡ್​ ಮೇ 3ರ ಸಂಚಿಕೆಯಲ್ಲಿ ಪ್ರಸಾರ ಆಗಲಿದೆ.

Kichcha Sudeep: ಸುದೀಪ್​ ಇಲ್ಲದೇ 3 ವಾರ ಮೈ ಮರೆತಿದ್ದ ಬಿಗ್​ ಬಾಸ್​ ಮಂದಿಗೆ ಛಾಟಿ ಬೀಸಿದ ಕಿಚ್ಚನ ವಾಯ್ಸ್​ ಮೆಸೇಜ್​
ಕಿಚ್ಚ ಸುದೀಪ್
ಮದನ್​ ಕುಮಾರ್​
| Edited By: |

Updated on:May 03, 2021 | 3:40 PM

Share

ಕಳೆದ ಮೂರು ವಾರಗಳಿಂದ ಬಿಗ್​ ಬಾಸ್​ ಮನೆಯಲ್ಲಿ ಏನೋ ಒಂದು ಮಿಸ್ಸಿಂಗ್​ ಎಂಬ ಅಭಿಪ್ರಾಯ ಪ್ರೇಕ್ಷಕರದ್ದು. ಅಂಥ ಕೊರತೆಯ ಭಾವ ಕಾಡಲು ಕಾರಣವೇ ಸುದೀಪ್ ಅನುಪಸ್ಥಿತಿ. ಹೌದು, ಕಿಚ್ಚ ಇಲ್ಲದೇ ಮೂರು ವೀಕೆಂಡ್​ಗಳು ಕಳೆದಿವೆ. ವಾರದ ಪಂಚಾಯಿತಿಯನ್ನು ಪ್ರೇಕ್ಷಕರು ಕೂಡ ಮಿಸ್​ ಮಾಡಿಕೊಂಡಿದ್ದಾರೆ. ಆದರೆ ಈಗ ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಚ್ಚನ ಧ್ವನಿ ಕೇಳಿಸಿದೆ. ಅದರಲ್ಲೂ ಒಂದು ಟ್ವಿಸ್ಟ್​ ಇದೆ.

ಮೇ 3ರಂದು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ಈ ವಿಚಾರ ಗೊತ್ತಾಗಿದೆ. ಬಿಗ್​ ಬಾಸ್​ ಸ್ಪರ್ಧಿಗಳಿಗೆ ಎರಡು ಪತ್ರ ಬಂದಿದೆ. ಮೊದಲ ಪತ್ರದಲ್ಲಿ ‘ಕೇಳಿಸಿಕೊಳ್ಳಿ’ ಎಂಬ ಸಂದೇಶ ಇತ್ತು. ಎರಡನೇ ಪತ್ರದಲ್ಲಿ ‘ಚೆನ್ನಾಗಿ ಕೇಳಿಸಿಕೊಳ್ಳಿ’ ಎಂದು ಬರೆಯಲಾಗಿತ್ತು. ಅದರ ಅರ್ಥ ಏನು ಎಂದು ಸ್ಪರ್ಧಿಗಳೆಲ್ಲ ಆಲೋಚನೆ ಮಾಡುತ್ತಿರುವಾಗಲೇ ಸುದೀಪ್​ ಅವರ ಧ್ವನಿ ಕೇಳಿಸಿದೆ. ಆದು ಎಲ್ಲರಿಗೂ ಅಚ್ಚರಿ ನೀಡಿದೆ.

ಈ ವಾಯ್ಸ್​ ನೋಟ್​ ಮೂಲಕ ಎಲ್ಲರಿಗೂ ಒಂದೊಂದು ಕಿವಿ ಮಾತು ಹೇಳುತ್ತೇನೆ ಎಂದು ಸುದೀಪ್​ ಮಾತು ಆರಂಭಿಸಿದ್ದಾರೆ. ಇದರ ಪೂರ್ತಿ ಎಪಿಸೋಡ್​ ಮೇ 3ರ ಸಂಚಿಕೆಯಲ್ಲಿ ಪ್ರಸಾರ ಆಗಲಿದೆ. ಪ್ರತಿ ವೀಕೆಂಡ್​ನಲ್ಲಿ ಸುದೀಪ್​ ಬಂದಾಗ ಎಲ್ಲ ಸ್ಪರ್ಧಿಗಳ ಪ್ಲಸ್​ ಮತ್ತು ಮೈನಸ್​ಗಳನ್ನು ಅವರು ಎತ್ತಿ ಹೇಳುತ್ತಿದ್ದರು. ಆದರೆ ಮೂರು ವಾರಗಳಿಂದ ಕಿಚ್ಚ ವೀಕೆಂಡ್​ನಲ್ಲಿ ಕಾಣಿಸಿಕೊಂಡಿಲ್ಲ. ಹಾಗಾಗಿ ದೊಡ್ಮನೆ ಸದಸ್ಯರ ಕಿವಿ ಹಿಂಡಲು ಯಾರೂ ಇಲ್ಲದಂತಾಗಿತ್ತು. ಆದರೆ ಈಗ ಸುದೀಪ್​ ವಾಯ್ಸ್​ ನೋಟ್​ ಮೂಲಕ ಎಲ್ಲರಿಗೂ ಕಿವಿಮಾತು ಹೇಳಿದ್ದಾರೆ.

ಹಲವು ದಿನಗಳಿಂದ ಸುದೀಪ್​ ಅವರಿಗೆ ಆರೋಗ್ಯ ಕೈಕೊಟ್ಟಿತ್ತು. ಆ ಕಾರಣದಿಂದ ಅವರ ವಿಶ್ರಾಂತಿ ಪಡೆಯುವುದು ಅನಿವಾರ್ಯ ಆಗಿತ್ತು. ಪರಿಣಾಮವಾಗಿ ಮೂರು ವಾರಗಳ ವೀಕೆಂಡ್​ ಎಪಿಸೋಡ್​ ಚಿತ್ರೀಕರಣದಲ್ಲಿ ಅವರು ಭಾಗಿಯಾಗಲು ಸಾಧ್ಯವಾಗಿಲ್ಲ. ಶೀಘ್ರದಲ್ಲೇ ನಿಮ್ಮೆಲ್ಲರ ಎದುರು ಬರುತ್ತೇನೆ ಎಂದು ಅವರು ಭರವಸೆ ನೀಡಿದ್ದರಾದರೂ ಕೊರೊನಾ ಕರ್ಫ್ಯೂ ಕಾರಣದಿಂದ ವೀಕೆಂಡ್​ ಎಪಿಸೋಡ್​ಗಳ ಶೂಟಿಂಗ್​ ಕ್ಯಾನ್ಸಲ್​ ಮಾಡಲಾಗಿದೆ.

ಇದನ್ನೂ ಓದಿ: ಶಮಂತ್​ಗೆ ಕೊನೆಗೂ ಸಿಕ್ಕಳು ಹುಡುಗಿ; ಕಣ್ಮಣಿಯ ಧ್ವನಿ ಕೇಳಿ ಬಿಗ್​ ಬಾಸ್​ ಸ್ಪರ್ಧಿಗಳು ಫಿದಾ

Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!

Published On - 3:23 pm, Mon, 3 May 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ