AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್​ ಇಲ್ಲದೇ 3 ವಾರ ಮೈ ಮರೆತಿದ್ದ ಬಿಗ್​ ಬಾಸ್​ ಮಂದಿಗೆ ಛಾಟಿ ಬೀಸಿದ ಕಿಚ್ಚನ ವಾಯ್ಸ್​ ಮೆಸೇಜ್​

Bigg Boss Kannada: ಈ ವಾಯ್ಸ್​ ನೋಟ್​ ಮೂಲಕ ಎಲ್ಲರಿಗೂ ಒಂದೊಂದು ಕಿವಿಮಾತು ಹೇಳುತ್ತೇನೆ ಎಂದು ಸುದೀಪ್​ ಮಾತು ಆರಂಭಿಸಿದ್ದಾರೆ. ಇದರ ಪೂರ್ತಿ ಎಪಿಸೋಡ್​ ಮೇ 3ರ ಸಂಚಿಕೆಯಲ್ಲಿ ಪ್ರಸಾರ ಆಗಲಿದೆ.

Kichcha Sudeep: ಸುದೀಪ್​ ಇಲ್ಲದೇ 3 ವಾರ ಮೈ ಮರೆತಿದ್ದ ಬಿಗ್​ ಬಾಸ್​ ಮಂದಿಗೆ ಛಾಟಿ ಬೀಸಿದ ಕಿಚ್ಚನ ವಾಯ್ಸ್​ ಮೆಸೇಜ್​
ಕಿಚ್ಚ ಸುದೀಪ್
ಮದನ್​ ಕುಮಾರ್​
| Edited By: |

Updated on:May 03, 2021 | 3:40 PM

Share

ಕಳೆದ ಮೂರು ವಾರಗಳಿಂದ ಬಿಗ್​ ಬಾಸ್​ ಮನೆಯಲ್ಲಿ ಏನೋ ಒಂದು ಮಿಸ್ಸಿಂಗ್​ ಎಂಬ ಅಭಿಪ್ರಾಯ ಪ್ರೇಕ್ಷಕರದ್ದು. ಅಂಥ ಕೊರತೆಯ ಭಾವ ಕಾಡಲು ಕಾರಣವೇ ಸುದೀಪ್ ಅನುಪಸ್ಥಿತಿ. ಹೌದು, ಕಿಚ್ಚ ಇಲ್ಲದೇ ಮೂರು ವೀಕೆಂಡ್​ಗಳು ಕಳೆದಿವೆ. ವಾರದ ಪಂಚಾಯಿತಿಯನ್ನು ಪ್ರೇಕ್ಷಕರು ಕೂಡ ಮಿಸ್​ ಮಾಡಿಕೊಂಡಿದ್ದಾರೆ. ಆದರೆ ಈಗ ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಚ್ಚನ ಧ್ವನಿ ಕೇಳಿಸಿದೆ. ಅದರಲ್ಲೂ ಒಂದು ಟ್ವಿಸ್ಟ್​ ಇದೆ.

ಮೇ 3ರಂದು ಕಲರ್ಸ್​ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ಈ ವಿಚಾರ ಗೊತ್ತಾಗಿದೆ. ಬಿಗ್​ ಬಾಸ್​ ಸ್ಪರ್ಧಿಗಳಿಗೆ ಎರಡು ಪತ್ರ ಬಂದಿದೆ. ಮೊದಲ ಪತ್ರದಲ್ಲಿ ‘ಕೇಳಿಸಿಕೊಳ್ಳಿ’ ಎಂಬ ಸಂದೇಶ ಇತ್ತು. ಎರಡನೇ ಪತ್ರದಲ್ಲಿ ‘ಚೆನ್ನಾಗಿ ಕೇಳಿಸಿಕೊಳ್ಳಿ’ ಎಂದು ಬರೆಯಲಾಗಿತ್ತು. ಅದರ ಅರ್ಥ ಏನು ಎಂದು ಸ್ಪರ್ಧಿಗಳೆಲ್ಲ ಆಲೋಚನೆ ಮಾಡುತ್ತಿರುವಾಗಲೇ ಸುದೀಪ್​ ಅವರ ಧ್ವನಿ ಕೇಳಿಸಿದೆ. ಆದು ಎಲ್ಲರಿಗೂ ಅಚ್ಚರಿ ನೀಡಿದೆ.

ಈ ವಾಯ್ಸ್​ ನೋಟ್​ ಮೂಲಕ ಎಲ್ಲರಿಗೂ ಒಂದೊಂದು ಕಿವಿ ಮಾತು ಹೇಳುತ್ತೇನೆ ಎಂದು ಸುದೀಪ್​ ಮಾತು ಆರಂಭಿಸಿದ್ದಾರೆ. ಇದರ ಪೂರ್ತಿ ಎಪಿಸೋಡ್​ ಮೇ 3ರ ಸಂಚಿಕೆಯಲ್ಲಿ ಪ್ರಸಾರ ಆಗಲಿದೆ. ಪ್ರತಿ ವೀಕೆಂಡ್​ನಲ್ಲಿ ಸುದೀಪ್​ ಬಂದಾಗ ಎಲ್ಲ ಸ್ಪರ್ಧಿಗಳ ಪ್ಲಸ್​ ಮತ್ತು ಮೈನಸ್​ಗಳನ್ನು ಅವರು ಎತ್ತಿ ಹೇಳುತ್ತಿದ್ದರು. ಆದರೆ ಮೂರು ವಾರಗಳಿಂದ ಕಿಚ್ಚ ವೀಕೆಂಡ್​ನಲ್ಲಿ ಕಾಣಿಸಿಕೊಂಡಿಲ್ಲ. ಹಾಗಾಗಿ ದೊಡ್ಮನೆ ಸದಸ್ಯರ ಕಿವಿ ಹಿಂಡಲು ಯಾರೂ ಇಲ್ಲದಂತಾಗಿತ್ತು. ಆದರೆ ಈಗ ಸುದೀಪ್​ ವಾಯ್ಸ್​ ನೋಟ್​ ಮೂಲಕ ಎಲ್ಲರಿಗೂ ಕಿವಿಮಾತು ಹೇಳಿದ್ದಾರೆ.

ಹಲವು ದಿನಗಳಿಂದ ಸುದೀಪ್​ ಅವರಿಗೆ ಆರೋಗ್ಯ ಕೈಕೊಟ್ಟಿತ್ತು. ಆ ಕಾರಣದಿಂದ ಅವರ ವಿಶ್ರಾಂತಿ ಪಡೆಯುವುದು ಅನಿವಾರ್ಯ ಆಗಿತ್ತು. ಪರಿಣಾಮವಾಗಿ ಮೂರು ವಾರಗಳ ವೀಕೆಂಡ್​ ಎಪಿಸೋಡ್​ ಚಿತ್ರೀಕರಣದಲ್ಲಿ ಅವರು ಭಾಗಿಯಾಗಲು ಸಾಧ್ಯವಾಗಿಲ್ಲ. ಶೀಘ್ರದಲ್ಲೇ ನಿಮ್ಮೆಲ್ಲರ ಎದುರು ಬರುತ್ತೇನೆ ಎಂದು ಅವರು ಭರವಸೆ ನೀಡಿದ್ದರಾದರೂ ಕೊರೊನಾ ಕರ್ಫ್ಯೂ ಕಾರಣದಿಂದ ವೀಕೆಂಡ್​ ಎಪಿಸೋಡ್​ಗಳ ಶೂಟಿಂಗ್​ ಕ್ಯಾನ್ಸಲ್​ ಮಾಡಲಾಗಿದೆ.

ಇದನ್ನೂ ಓದಿ: ಶಮಂತ್​ಗೆ ಕೊನೆಗೂ ಸಿಕ್ಕಳು ಹುಡುಗಿ; ಕಣ್ಮಣಿಯ ಧ್ವನಿ ಕೇಳಿ ಬಿಗ್​ ಬಾಸ್​ ಸ್ಪರ್ಧಿಗಳು ಫಿದಾ

Bigg Boss Kannada Elimination: ಬಿಗ್​ ಬಾಸ್​ ಒಂಬತ್ತನೇ ವಾರದ ಎಲಿಮಿನೇಷನ್​ಗೆ ಹೊಸ ಟ್ವಿಸ್ಟ್​!

Published On - 3:23 pm, Mon, 3 May 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?