AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ಬರಲಿದೆ ಯೋಗಿ ಬಾಬು ನಟನೆಯ ‘ಬೋಟ್​’ ಸಿನಿಮಾ; ಟೀಸರ್​ ನೋಡಿ ಮೆಚ್ಚಿದ ಸುದೀಪ್

ಯೋಗಿ ಬಾಬು ಅಭಿನಯದ ‘ಬೋಟ್’ ಸಿನಿಮಾ ಕನ್ನಡದಲ್ಲೂ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಟೀಸರ್​ ರಿಲೀಸ್​ ಆಗಿದ್ದು, ಕಿಚ್ಚ ಸುದೀಪ್​ ಅವರು ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಅಚ್ಚರಿ ಏನೆಂದರೆ, ಈ ಸಿನಿಮಾ ಸಂಪೂರ್ಣವಾಗಿ ಸಮುದ್ರದಲ್ಲಿಯೇ ಚಿತ್ರೀಕರಣಗೊಂಡಿದೆ. ‘ಬೋಟ್’ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ಕನ್ನಡದಲ್ಲೂ ಬರಲಿದೆ ಯೋಗಿ ಬಾಬು ನಟನೆಯ ‘ಬೋಟ್​’ ಸಿನಿಮಾ; ಟೀಸರ್​ ನೋಡಿ ಮೆಚ್ಚಿದ ಸುದೀಪ್
ಯೋಗಿ ಬಾಬು
ಮದನ್​ ಕುಮಾರ್​
|

Updated on:Dec 17, 2023 | 7:16 AM

Share

ಕಾಲಿವುಡ್​ನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು (Yogi Babu) ಅವರು ಈಗಾಗಲೇ ಮುಖ್ಯ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದಾರೆ. ಈಗ ಮತ್ತೆ ಹೀರೋ ಆಗಿ ಅವರು ಎಂಟ್ರಿ ನೀಡುತ್ತಿದ್ದಾರೆ. ಕಾಮಿಡಿ ಕಲಾವಿದನಾಗಿ ಮಿಂಚುತ್ತಿದ್ದ ಯೋಗಿ ಬಾಬು ಎಲ್ಲ ರೀತಿಯ ಪಾತ್ರಕ್ಕೂ ನ್ಯಾಯ ಒದಗಿಸುತ್ತಾರೆ. ಅವರು ನಟಿಸಿರುವ ‘ಬೋಟ್’ (Boat) ಸಿನಿಮಾದ ಟೀಸರ್ ಈಗ ಬಿಡುಗಡೆ ಆಗಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ಈ ತಂಡಕ್ಕೆ ಕಿಚ್ಚ ಸುದೀಪ್ (Kichcha Sudeep) ಅವರು ಸಾಥ್​ ನೀಡಿದ್ದಾರೆ.

ಯೋಗಿ ಬಾಬು ನಟನೆಯ ‘ಬೋಟ್’ ಸಿನಿಮಾ ಕನ್ನಡದ ಜೊತೆ ದಕ್ಷಿಣ ಭಾರತದ ಎಲ್ಲ ಭಾಷೆಯಲ್ಲೂ ಬಿಡುಗಡೆ ಆಗಲಿದೆ. ಈ ಮೂಲಕ ಯೋಗಿ ಬಾಬು ಅವರು ಸ್ಯಾಂಡಲ್​ವುಡ್​ಗೆ ಕಾಲಿಟ್ಟಂತಾಗುತ್ತಿದೆ. ಅವರಿಗೆ ಕಿಚ್ಚ ಸುದೀಪ್​ ಅವರು ಸ್ವಾಗತ ಕೋರಿದ್ದಾರೆ. ‘ಬೋಟ್’ ಸಿನಿಮಾದ ಟೀಸರ್ ಹಂಚಿಕೊಂಡಿರುವ ಸುದೀಪ್​ ಅವರು ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿಂಬು ದೇವನ್ ಅವರ ನಿರ್ದೇಶನದಲ್ಲಿ ‘ಬೋಟ್’ ಸಿನಿಮಾ ಮೂಡಿಬಂದಿದೆ. ದೇವನ್ ದಳಪತಿ ವಿಜಯ್ ಅಭಿನಯದ ‘ಪುಲಿ’ ಹಾಗೂ ಇತರೆ ಸಿನಿ‌ಮಾಗಳನ್ನು ನೀಡಿದ ಖ್ಯಾತಿ ಚಿಂಬು ಅವರಿಗೆ ಇದೆ. ಈಗ ಅವರು ಯೋಗಿ ಬಾಬು ಜೊತೆ ಸಿನಿಮಾ ಮಾಡಿದ್ದಾರೆ. ಅಚ್ಚರಿ ಏನೆಂದರೆ, ಈ ಸಿನಿಮಾ ಸಂಪೂರ್ಣವಾಗಿ ಸಮುದ್ರದಲ್ಲಿಯೇ ಚಿತ್ರೀಕರಣಗೊಂಡಿದೆ.

‘ಬೋಟ್​’ ಸಿನಿಮಾದಲ್ಲಿ ಯೋಗಿ ಬಾಬು, ಗೌರಿ ಜಿ. ಕಿಶನ್ ಮುಂತಾದವರು ನಟಿಸಿದ್ದಾರೆ. ಗಿಬ್ರಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಮಾದೇಶ್ ಮಾಣಿಕ್ಕಂ ಛಾಯಾಗ್ರಹಣ ಮಾಡಿದ್ದಾರೆ. ದಿನೇಶ್ ಅವರ ಸಂಕಲನ ಹಾಗೂ ಟಿ ಸಂತಾನಂ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ. ಈ ಸಿನಿಮಾವನ್ನು ‘ಮಾಲಿ ಮತ್ತು ಮಾನ್ವಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ಪ್ರಭಾ ಪ್ರೇಮಕುಮಾರ್ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಫೆಬ್ರವರಿಯಲ್ಲಿ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಅಬ್ಬಬ್ಬಾ.. ಖ್ಯಾತ ಕಾಮಿಡಿಯನ್ ಯೋಗಿ ಬಾಬು ದಿನ ಒಂದಕ್ಕೆ ಪಡೆಯುವ ಸಂಭಾವನೆ ಇಷ್ಟೊಂದಾ?

ಚೆನ್ನೈ ಮೇಲೆ ಜಪಾನ್​ನವರು ಬಾಂಬ್ ದಾಳಿ ಮಾಡಿದಾಗ ಹತ್ತು ಜನರು ಚಿಕ್ಕ ಬೋಟ್ ಏರಿ ಪರಾರಿ ಆಗುತ್ತಾರೆ. ಆ ಬೋಟ್​ನಲ್ಲಿ ಒಂದು ರಂಧ್ರ ಆಗುತ್ತದೆ. ಆ ಬಳಿಕ ಹತ್ತು ಜನರು ಏನೆಲ್ಲ ಸಮಸ್ಯೆ ಎದುರಿಸುತ್ತಾರೆ? ಸಮುದ್ರದಿಂದ ಹೇಗೆ ದಡ ಸೇರುತ್ತಾರೆ ಎಂಬುದೇ ಈ ಸಿನಿಮಾ ತಿರುಳು. ‘ಬೋಟ್​’ ಟೀಸರ್​ಗೆ ಖ್ಯಾತ ನಿರ್ದೇಶಕ ಗೌತಮ್ ಮೆನನ್ ಅವರು ನಿರೂಪಣೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:06 am, Sun, 17 December 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ