AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ.

‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ
ಸಂತೋಷ್-ರಕ್ಷಕ್
ರಾಜೇಶ್ ದುಗ್ಗುಮನೆ
|

Updated on: Oct 22, 2023 | 12:34 PM

Share

‘ತುಕಾಲಿ’ ಸಂತೋಷ್ ಅವರು ‘ಬಿಗ್ ಬಾಸ್ (Bigg Boss)​ ಮನೆಯಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕಳೆದ ವಾರ ಅವರು ಮಾಡಿಕೊಂಡ ಎಡವಟ್ಟಿನಿಂದ ಸಾಕಷ್ಟು ತೊಂದರೆ ಆಗಿದೆ. ಅವರು ಡ್ರೋನ್ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು. ಸಂತೋಷ್ ಅವರು ಈ ವಿಚಾರದಲ್ಲಿ ಬೇಸರ ಮಾಡಿಕೊಂಡಿದ್ದರು. ಈಗ ಈ ವಾರವೂ ಅವರಿಗೆ ನೆಮ್ಮದಿ ಇಲ್ಲ. ಸುದೀಪ್ ಅವರು ಸಂತೋಷ್ ಅವರ ಕಾಲೆಳೆದಿದ್ದಾರೆ. ಸದ್ಯ ಈ ಪ್ರೋಮೋ ಗಮನ ಸೆಳೆಯುತ್ತಿದೆ.

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ. ರಕ್ಷಕ್, ಇಬ್ಬರು ಸಂತೋಷ್ ಅವರು ಕುಳಿತು ಏನು ಮಾತನಾಡುತ್ತಾರೆ ಎಂದು ನಮ್ರತಾಗೆ ಸುದೀಪ್ ಕೇಳಿದರು. ‘ಹಸ, ಕರ ಅಂತ ಮಾತನಾಡ್ತಾರೆ’ ಎಂದರು ನಮ್ರತಾ. ಇದಕ್ಕೆ ಸುದೀಪ್ ಅವರು ‘ಇಲ್ಲಿ ಹಸು ಯಾರು, ಕರು ಯಾರು’ ಎಂದು ಕೇಳಿದರು. ಈ ಮೂಲಕ ಅವರು ಮನೆಯವರ ಬಗ್ಗೆಯೇ ಚರ್ಚೆ ಮಾತನಾಡುತ್ತಾರೆ ಎಂದು ಪರೋಕ್ಷವಾಗಿ ಹೇಳಿದರು.

ಸುದೀಪ್ ಅವರು ಈ ಮಾತನ್ನು ಹೇಳುತ್ತಿದ್ದಂತೆ ತುಕಾಲಿ ಸಂತೋಷ್ ಅವರು ಚಿಂತೆಗೆ ಒಳಗಾದರು. ‘ಸರ್ ಈ ವಾರವೂ ನೆಮ್ಮದಿಯಿಂದ ಇರೋಕೆ ಬಿಡುತ್ತಿಲ್ಲವಲ್ಲ’ ಎಂದರು ಸಂತೋಷ್. ಇದನ್ನು ಕೇಳಿ ಸುದೀಪ್ ನಕ್ಕರು. ಸದ್ಯ ಕಲರ್ಸ್ ಕನ್ನಡದಲ್ಲಿ ಈ ಪ್ರೋಮೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: ‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ 

ಈ ಪ್ರೋಮೋದಲ್ಲಿ ಧನಂಜಯ್ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರ ನಿರ್ಮಾಣದ ‘ಟಗರು ಪಲ್ಯ’ ಶೀಘ್ರವೇ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ಭಾಗಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು