AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ.

‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ
ಸಂತೋಷ್-ರಕ್ಷಕ್
ರಾಜೇಶ್ ದುಗ್ಗುಮನೆ
|

Updated on: Oct 22, 2023 | 12:34 PM

Share

‘ತುಕಾಲಿ’ ಸಂತೋಷ್ ಅವರು ‘ಬಿಗ್ ಬಾಸ್ (Bigg Boss)​ ಮನೆಯಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕಳೆದ ವಾರ ಅವರು ಮಾಡಿಕೊಂಡ ಎಡವಟ್ಟಿನಿಂದ ಸಾಕಷ್ಟು ತೊಂದರೆ ಆಗಿದೆ. ಅವರು ಡ್ರೋನ್ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು. ಸಂತೋಷ್ ಅವರು ಈ ವಿಚಾರದಲ್ಲಿ ಬೇಸರ ಮಾಡಿಕೊಂಡಿದ್ದರು. ಈಗ ಈ ವಾರವೂ ಅವರಿಗೆ ನೆಮ್ಮದಿ ಇಲ್ಲ. ಸುದೀಪ್ ಅವರು ಸಂತೋಷ್ ಅವರ ಕಾಲೆಳೆದಿದ್ದಾರೆ. ಸದ್ಯ ಈ ಪ್ರೋಮೋ ಗಮನ ಸೆಳೆಯುತ್ತಿದೆ.

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ. ರಕ್ಷಕ್, ಇಬ್ಬರು ಸಂತೋಷ್ ಅವರು ಕುಳಿತು ಏನು ಮಾತನಾಡುತ್ತಾರೆ ಎಂದು ನಮ್ರತಾಗೆ ಸುದೀಪ್ ಕೇಳಿದರು. ‘ಹಸ, ಕರ ಅಂತ ಮಾತನಾಡ್ತಾರೆ’ ಎಂದರು ನಮ್ರತಾ. ಇದಕ್ಕೆ ಸುದೀಪ್ ಅವರು ‘ಇಲ್ಲಿ ಹಸು ಯಾರು, ಕರು ಯಾರು’ ಎಂದು ಕೇಳಿದರು. ಈ ಮೂಲಕ ಅವರು ಮನೆಯವರ ಬಗ್ಗೆಯೇ ಚರ್ಚೆ ಮಾತನಾಡುತ್ತಾರೆ ಎಂದು ಪರೋಕ್ಷವಾಗಿ ಹೇಳಿದರು.

ಸುದೀಪ್ ಅವರು ಈ ಮಾತನ್ನು ಹೇಳುತ್ತಿದ್ದಂತೆ ತುಕಾಲಿ ಸಂತೋಷ್ ಅವರು ಚಿಂತೆಗೆ ಒಳಗಾದರು. ‘ಸರ್ ಈ ವಾರವೂ ನೆಮ್ಮದಿಯಿಂದ ಇರೋಕೆ ಬಿಡುತ್ತಿಲ್ಲವಲ್ಲ’ ಎಂದರು ಸಂತೋಷ್. ಇದನ್ನು ಕೇಳಿ ಸುದೀಪ್ ನಕ್ಕರು. ಸದ್ಯ ಕಲರ್ಸ್ ಕನ್ನಡದಲ್ಲಿ ಈ ಪ್ರೋಮೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: ‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ 

ಈ ಪ್ರೋಮೋದಲ್ಲಿ ಧನಂಜಯ್ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರ ನಿರ್ಮಾಣದ ‘ಟಗರು ಪಲ್ಯ’ ಶೀಘ್ರವೇ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ಭಾಗಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ