‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ.

‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ
ಸಂತೋಷ್-ರಕ್ಷಕ್
Follow us
|

Updated on: Oct 22, 2023 | 12:34 PM

‘ತುಕಾಲಿ’ ಸಂತೋಷ್ ಅವರು ‘ಬಿಗ್ ಬಾಸ್ (Bigg Boss)​ ಮನೆಯಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕಳೆದ ವಾರ ಅವರು ಮಾಡಿಕೊಂಡ ಎಡವಟ್ಟಿನಿಂದ ಸಾಕಷ್ಟು ತೊಂದರೆ ಆಗಿದೆ. ಅವರು ಡ್ರೋನ್ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು. ಸಂತೋಷ್ ಅವರು ಈ ವಿಚಾರದಲ್ಲಿ ಬೇಸರ ಮಾಡಿಕೊಂಡಿದ್ದರು. ಈಗ ಈ ವಾರವೂ ಅವರಿಗೆ ನೆಮ್ಮದಿ ಇಲ್ಲ. ಸುದೀಪ್ ಅವರು ಸಂತೋಷ್ ಅವರ ಕಾಲೆಳೆದಿದ್ದಾರೆ. ಸದ್ಯ ಈ ಪ್ರೋಮೋ ಗಮನ ಸೆಳೆಯುತ್ತಿದೆ.

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ. ರಕ್ಷಕ್, ಇಬ್ಬರು ಸಂತೋಷ್ ಅವರು ಕುಳಿತು ಏನು ಮಾತನಾಡುತ್ತಾರೆ ಎಂದು ನಮ್ರತಾಗೆ ಸುದೀಪ್ ಕೇಳಿದರು. ‘ಹಸ, ಕರ ಅಂತ ಮಾತನಾಡ್ತಾರೆ’ ಎಂದರು ನಮ್ರತಾ. ಇದಕ್ಕೆ ಸುದೀಪ್ ಅವರು ‘ಇಲ್ಲಿ ಹಸು ಯಾರು, ಕರು ಯಾರು’ ಎಂದು ಕೇಳಿದರು. ಈ ಮೂಲಕ ಅವರು ಮನೆಯವರ ಬಗ್ಗೆಯೇ ಚರ್ಚೆ ಮಾತನಾಡುತ್ತಾರೆ ಎಂದು ಪರೋಕ್ಷವಾಗಿ ಹೇಳಿದರು.

ಸುದೀಪ್ ಅವರು ಈ ಮಾತನ್ನು ಹೇಳುತ್ತಿದ್ದಂತೆ ತುಕಾಲಿ ಸಂತೋಷ್ ಅವರು ಚಿಂತೆಗೆ ಒಳಗಾದರು. ‘ಸರ್ ಈ ವಾರವೂ ನೆಮ್ಮದಿಯಿಂದ ಇರೋಕೆ ಬಿಡುತ್ತಿಲ್ಲವಲ್ಲ’ ಎಂದರು ಸಂತೋಷ್. ಇದನ್ನು ಕೇಳಿ ಸುದೀಪ್ ನಕ್ಕರು. ಸದ್ಯ ಕಲರ್ಸ್ ಕನ್ನಡದಲ್ಲಿ ಈ ಪ್ರೋಮೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: ‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ 

ಈ ಪ್ರೋಮೋದಲ್ಲಿ ಧನಂಜಯ್ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರ ನಿರ್ಮಾಣದ ‘ಟಗರು ಪಲ್ಯ’ ಶೀಘ್ರವೇ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ಭಾಗಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!