AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ.

‘ಈ ವಾರವೂ ನೆಮ್ಮದಿ ಇಲ್ಲ’; ಸುದೀಪ್ ಕೊಟ್ಟ ಮಾತಿನ ಪೆಟ್ಟಿಗೆ ತುಕಾಲಿ ಸಂತೋಷ್​ಗೆ ನಡುಕ
ಸಂತೋಷ್-ರಕ್ಷಕ್
ರಾಜೇಶ್ ದುಗ್ಗುಮನೆ
|

Updated on: Oct 22, 2023 | 12:34 PM

Share

‘ತುಕಾಲಿ’ ಸಂತೋಷ್ ಅವರು ‘ಬಿಗ್ ಬಾಸ್ (Bigg Boss)​ ಮನೆಯಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಕಳೆದ ವಾರ ಅವರು ಮಾಡಿಕೊಂಡ ಎಡವಟ್ಟಿನಿಂದ ಸಾಕಷ್ಟು ತೊಂದರೆ ಆಗಿದೆ. ಅವರು ಡ್ರೋನ್ ಪ್ರತಾಪ್ ಅವರನ್ನು ಟಾರ್ಗೆಟ್ ಮಾಡಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಕ್ಲಾಸ್ ತೆಗೆದುಕೊಂಡಿದ್ದರು. ಸಂತೋಷ್ ಅವರು ಈ ವಿಚಾರದಲ್ಲಿ ಬೇಸರ ಮಾಡಿಕೊಂಡಿದ್ದರು. ಈಗ ಈ ವಾರವೂ ಅವರಿಗೆ ನೆಮ್ಮದಿ ಇಲ್ಲ. ಸುದೀಪ್ ಅವರು ಸಂತೋಷ್ ಅವರ ಕಾಲೆಳೆದಿದ್ದಾರೆ. ಸದ್ಯ ಈ ಪ್ರೋಮೋ ಗಮನ ಸೆಳೆಯುತ್ತಿದೆ.

‘ತುಕಾಲಿ’ ಸಂತೋಷ್, ವರ್ತೂರ್ ಸಂತೋಷ್ ಹಾಗೂ ರಕ್ಷಕ್ ಬುಲೆಟ್ ಮನೆಯಲ್ಲಿ ಯಾವಾಗಲೂ ಒಟ್ಟಾಗಿ ಇರುತ್ತಾರೆ. ಮನೆಯವರ ವಿಚಾರ ಇಟ್ಟುಕೊಂಡು ಅವರು ಚರ್ಚೆ ಮಾಡುತ್ತಾರೆ. ಈ ಬಗ್ಗೆ ಸುದೀಪ್ ಅವರು ಚರ್ಚಿಸಿದ್ದಾರೆ. ರಕ್ಷಕ್, ಇಬ್ಬರು ಸಂತೋಷ್ ಅವರು ಕುಳಿತು ಏನು ಮಾತನಾಡುತ್ತಾರೆ ಎಂದು ನಮ್ರತಾಗೆ ಸುದೀಪ್ ಕೇಳಿದರು. ‘ಹಸ, ಕರ ಅಂತ ಮಾತನಾಡ್ತಾರೆ’ ಎಂದರು ನಮ್ರತಾ. ಇದಕ್ಕೆ ಸುದೀಪ್ ಅವರು ‘ಇಲ್ಲಿ ಹಸು ಯಾರು, ಕರು ಯಾರು’ ಎಂದು ಕೇಳಿದರು. ಈ ಮೂಲಕ ಅವರು ಮನೆಯವರ ಬಗ್ಗೆಯೇ ಚರ್ಚೆ ಮಾತನಾಡುತ್ತಾರೆ ಎಂದು ಪರೋಕ್ಷವಾಗಿ ಹೇಳಿದರು.

ಸುದೀಪ್ ಅವರು ಈ ಮಾತನ್ನು ಹೇಳುತ್ತಿದ್ದಂತೆ ತುಕಾಲಿ ಸಂತೋಷ್ ಅವರು ಚಿಂತೆಗೆ ಒಳಗಾದರು. ‘ಸರ್ ಈ ವಾರವೂ ನೆಮ್ಮದಿಯಿಂದ ಇರೋಕೆ ಬಿಡುತ್ತಿಲ್ಲವಲ್ಲ’ ಎಂದರು ಸಂತೋಷ್. ಇದನ್ನು ಕೇಳಿ ಸುದೀಪ್ ನಕ್ಕರು. ಸದ್ಯ ಕಲರ್ಸ್ ಕನ್ನಡದಲ್ಲಿ ಈ ಪ್ರೋಮೋ ವೈರಲ್ ಆಗುತ್ತಿದೆ.

ಇದನ್ನೂ ಓದಿ: ‘ಅತೀ ಸುರಕ್ಷಿತ ಮನೆ ಬಿಗ್ ಬಾಸ್’; ಸ್ಪರ್ಧಿಗಳಿಗೆ ಸುದೀಪ್ ಎಚ್ಚರಿಕೆ 

ಈ ಪ್ರೋಮೋದಲ್ಲಿ ಧನಂಜಯ್ ಕೂಡ ಕಾಣಿಸಿಕೊಂಡಿದ್ದಾರೆ. ಅವರು ಬಿಗ್ ಬಾಸ್ ವೇದಿಕೆ ಏರಿದ್ದಾರೆ. ಅವರ ನಿರ್ಮಾಣದ ‘ಟಗರು ಪಲ್ಯ’ ಶೀಘ್ರವೇ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ಭಾಗಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ