AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ

ಮೇ 3ರ ಎಪಿಸೋಡ್​ನಲ್ಲಿ ಸುದೀಪ್​ ಧ್ವನಿ ಬಿಗ್​ ಬಾಸ್​ ಮನೆಯವರಿಗೆ ಕೇಳಿದೆ. ಎಲ್ಲರಿಗೂ ಸುದೀಪ್​ ಕಿವಿಮಾತು ಹೇಳಿದ್ದಾರೆ.,

ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ
ಸುದೀಪ್​-ವೈಷ್ಣವಿ
ರಾಜೇಶ್ ದುಗ್ಗುಮನೆ
| Edited By: |

Updated on: May 04, 2021 | 12:33 PM

Share

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ತುಂಬಾನೇ ಸೈಲೆಂಟ್​. ಅನೇಕ ಸಂದರ್ಭಗಳಲ್ಲಿ ಅವರು ಮಾತನ್ನೇ ಆಡುವುದಿಲ್ಲ. ಇದು ಕೆಲವೊಮ್ಮೆ ಅವರಿಗೆ ಪ್ಲಸ್​ ಆಗಿದೆ. ಇನ್ನೂ ಕೆಲವೊಮ್ಮೆ ಮೈನಸ್​ ಆಗಿದೆ. ಈ ಬಗ್ಗೆ ಸುದೀಪ್​ ಮಾತನಾಡಿದ್ದಾರೆ! ಅಷ್ಟೇ ಅಲ್ಲ, ವೈಷ್ಣವಿಗೆ ಕಿವಿಮಾತು ಕೂಡ ಹೇಳಿದ್ದಾರೆ.

ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವರು ಎರಡು ವಾರ ಮನೆಯಲ್ಲೇ ರೆಸ್ಟ್​ ಮಾಡಿದ್ದರು. ಕರ್ನಾಟಕದಲ್ಲಿ ಕೊರೊನಾ ಹೆಚ್ಚಿದ್ದರಿಂದ ಶೂಟಿಂಗ್ಗೆ​ ಬ್ರೇಕ್​ ಹಾಕಲಾಗಿದೆ. ಹೀಗಾಗಿ, ವೀಕೆಂಡ್​ ಶೂಟ್​ ಮಾಡೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೇ 3ರ ಎಪಿಸೋಡ್​ನಲ್ಲಿ ಸುದೀಪ್​ ಧ್ವನಿ ಬಿಗ್​ ಬಾಸ್​ ಮನೆಯವರಿಗೆ ಕೇಳಿದೆ.

ಬೆಳಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಕೇಳಿಸಿಕೊಳ್ಳಿ ಎಂಬ ಪತ್ರ ಸಂದೇಶ ಬಂದಿತ್ತು. ಎರಡನೇ ಪತ್ರದಲ್ಲಿ ಚೆನ್ನಾಗಿ ಕೇಳಿಸಿಕೊಳ್ಳಿ ಎಂದಿತ್ತು. ಅದರ ಅರ್ಥ ಏನು ಎಂದು ಸ್ಪರ್ಧಿಗಳೆಲ್ಲ ಆಲೋಚನೆ ಮಾಡುತ್ತಿರುವಾಗಲೇ ಸುದೀಪ್ ಅವರ ಧ್ವನಿ ಕೇಳಿಸಿದೆ. ಎಲ್ಲಾ ಸ್ಪರ್ಧಿಗಳಿಗೂ ಸುದೀಪ್​ ಕಿವಿಮಾತು ಹೇಳಿದ್ದಾರೆ.

ಮೊದಲು ವೈಷ್ಣವಿ ಅವರಿಗೆ ಸುದೀಪ್​ ಧ್ವನಿ ಬಂತು. ವೈಷ್ಣವಿ ನೀವು ನಿಮ್ಮ ಅಭಿಪ್ರಾಯ ಹೇಳ್ತೀರಾ. ಆ ಬಗ್ಗೆ ಖುಷಿ ಇದೆ. ಆದರೆ, ಹೀಟೆಡ್​ ಚರ್ಚೆ ಆದಾಗ ನಿಮ್ಮ ಮನಸ್ಸಿನಲ್ಲಿ ಏನಿರುತ್ತದೆಯೋ ಅದನ್ನು ಹೇಳಿ. ಇಲ್ಲ ಅಂದ್ರೆ ಇದೆಲ್ಲ ಹೆಪ್ಪುಗಟ್ಟಿ ಸರ್ಜರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ವೈಷ್ಣವಿ ಸಾಕಷ್ಟು ವಿಚಾರಗಳನ್ನು ತಮ್ಮ ಮನಸ್ಸಿನಲ್ಲೇ ಇಟ್ಟುಕೊಳ್ಳುತ್ತಾರೆ. 9ನೇ ವಾರ ಕ್ಯಾಪ್ಟನ್ಸಿ ಟಾಸ್ಕ್​ ವೇಳೆ ಜಗಳವಾಗಿತ್ತು. ಈ ಜಗಳ ನಡೆಯುವಾಗ ವೈಷ್ಣವಿ ಸೈಲೆಂಟ್​ ಆಗಿದ್ದರು. ಇದರಿಂದ ಸಾಕಷ್ಟು ತೊಂದರೆಗಳು ಸೃಷ್ಟಿ ಆದವು. ಆ ರೀತಿ ಮಾಡಬೇಡಿ. ಅದರಿಂದ ನಿಮಗೇ ತೊಂದರೆ ಎಂದು ಸುದೀಪ್​ ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

Kichcha Sudeep: ಸುದೀಪ್​ ಇಲ್ಲದೇ 3 ವಾರ ಮೈ ಮರೆತಿದ್ದ ಬಿಗ್​ ಬಾಸ್​ ಮಂದಿಗೆ ಛಾಟಿ ಬೀಸಿದ ಕಿಚ್ಚನ ವಾಯ್ಸ್​ ಮೆಸೇಜ್​

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ