AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ

ಮೇ 3ರ ಎಪಿಸೋಡ್​ನಲ್ಲಿ ಸುದೀಪ್​ ಧ್ವನಿ ಬಿಗ್​ ಬಾಸ್​ ಮನೆಯವರಿಗೆ ಕೇಳಿದೆ. ಎಲ್ಲರಿಗೂ ಸುದೀಪ್​ ಕಿವಿಮಾತು ಹೇಳಿದ್ದಾರೆ.,

ಹೀಗೆ ಆದರೆ ಒಂದು ದಿನ ಸರ್ಜರಿ ಮಾಡಬೇಕಾಗುತ್ತದೆ!; ವೈಷ್ಣವಿಗೆ ಸುದೀಪ್​ ಎಚ್ಚರಿಕೆ
ಸುದೀಪ್​-ವೈಷ್ಣವಿ
ರಾಜೇಶ್ ದುಗ್ಗುಮನೆ
| Edited By: |

Updated on: May 04, 2021 | 12:33 PM

Share

ಬಿಗ್​ ಬಾಸ್​ ಮನೆಯಲ್ಲಿ ವೈಷ್ಣವಿ ಗೌಡ ತುಂಬಾನೇ ಸೈಲೆಂಟ್​. ಅನೇಕ ಸಂದರ್ಭಗಳಲ್ಲಿ ಅವರು ಮಾತನ್ನೇ ಆಡುವುದಿಲ್ಲ. ಇದು ಕೆಲವೊಮ್ಮೆ ಅವರಿಗೆ ಪ್ಲಸ್​ ಆಗಿದೆ. ಇನ್ನೂ ಕೆಲವೊಮ್ಮೆ ಮೈನಸ್​ ಆಗಿದೆ. ಈ ಬಗ್ಗೆ ಸುದೀಪ್​ ಮಾತನಾಡಿದ್ದಾರೆ! ಅಷ್ಟೇ ಅಲ್ಲ, ವೈಷ್ಣವಿಗೆ ಕಿವಿಮಾತು ಕೂಡ ಹೇಳಿದ್ದಾರೆ.

ಕಿಚ್ಚ ಸುದೀಪ್​ಗೆ ಅನಾರೋಗ್ಯ ಕಾಡಿತ್ತು. ಹೀಗಾಗಿ, ಅವರು ಎರಡು ವಾರ ಮನೆಯಲ್ಲೇ ರೆಸ್ಟ್​ ಮಾಡಿದ್ದರು. ಕರ್ನಾಟಕದಲ್ಲಿ ಕೊರೊನಾ ಹೆಚ್ಚಿದ್ದರಿಂದ ಶೂಟಿಂಗ್ಗೆ​ ಬ್ರೇಕ್​ ಹಾಕಲಾಗಿದೆ. ಹೀಗಾಗಿ, ವೀಕೆಂಡ್​ ಶೂಟ್​ ಮಾಡೋಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೇ 3ರ ಎಪಿಸೋಡ್​ನಲ್ಲಿ ಸುದೀಪ್​ ಧ್ವನಿ ಬಿಗ್​ ಬಾಸ್​ ಮನೆಯವರಿಗೆ ಕೇಳಿದೆ.

ಬೆಳಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಕೇಳಿಸಿಕೊಳ್ಳಿ ಎಂಬ ಪತ್ರ ಸಂದೇಶ ಬಂದಿತ್ತು. ಎರಡನೇ ಪತ್ರದಲ್ಲಿ ಚೆನ್ನಾಗಿ ಕೇಳಿಸಿಕೊಳ್ಳಿ ಎಂದಿತ್ತು. ಅದರ ಅರ್ಥ ಏನು ಎಂದು ಸ್ಪರ್ಧಿಗಳೆಲ್ಲ ಆಲೋಚನೆ ಮಾಡುತ್ತಿರುವಾಗಲೇ ಸುದೀಪ್ ಅವರ ಧ್ವನಿ ಕೇಳಿಸಿದೆ. ಎಲ್ಲಾ ಸ್ಪರ್ಧಿಗಳಿಗೂ ಸುದೀಪ್​ ಕಿವಿಮಾತು ಹೇಳಿದ್ದಾರೆ.

ಮೊದಲು ವೈಷ್ಣವಿ ಅವರಿಗೆ ಸುದೀಪ್​ ಧ್ವನಿ ಬಂತು. ವೈಷ್ಣವಿ ನೀವು ನಿಮ್ಮ ಅಭಿಪ್ರಾಯ ಹೇಳ್ತೀರಾ. ಆ ಬಗ್ಗೆ ಖುಷಿ ಇದೆ. ಆದರೆ, ಹೀಟೆಡ್​ ಚರ್ಚೆ ಆದಾಗ ನಿಮ್ಮ ಮನಸ್ಸಿನಲ್ಲಿ ಏನಿರುತ್ತದೆಯೋ ಅದನ್ನು ಹೇಳಿ. ಇಲ್ಲ ಅಂದ್ರೆ ಇದೆಲ್ಲ ಹೆಪ್ಪುಗಟ್ಟಿ ಸರ್ಜರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ವೈಷ್ಣವಿ ಸಾಕಷ್ಟು ವಿಚಾರಗಳನ್ನು ತಮ್ಮ ಮನಸ್ಸಿನಲ್ಲೇ ಇಟ್ಟುಕೊಳ್ಳುತ್ತಾರೆ. 9ನೇ ವಾರ ಕ್ಯಾಪ್ಟನ್ಸಿ ಟಾಸ್ಕ್​ ವೇಳೆ ಜಗಳವಾಗಿತ್ತು. ಈ ಜಗಳ ನಡೆಯುವಾಗ ವೈಷ್ಣವಿ ಸೈಲೆಂಟ್​ ಆಗಿದ್ದರು. ಇದರಿಂದ ಸಾಕಷ್ಟು ತೊಂದರೆಗಳು ಸೃಷ್ಟಿ ಆದವು. ಆ ರೀತಿ ಮಾಡಬೇಡಿ. ಅದರಿಂದ ನಿಮಗೇ ತೊಂದರೆ ಎಂದು ಸುದೀಪ್​ ಪರೋಕ್ಷವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

Kichcha Sudeep: ಸುದೀಪ್​ ಇಲ್ಲದೇ 3 ವಾರ ಮೈ ಮರೆತಿದ್ದ ಬಿಗ್​ ಬಾಸ್​ ಮಂದಿಗೆ ಛಾಟಿ ಬೀಸಿದ ಕಿಚ್ಚನ ವಾಯ್ಸ್​ ಮೆಸೇಜ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್