AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!

ಅಂತೆಯೇ ಈ ವಾರ ಸಂಪೂರ್ಣ ಭಿನ್ನವಾಗಿ ಮೂಡಿ ಬಂದಿತ್ತು. ಅಲ್ಲದೆ, ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಸುದೀಪ್​ ಧ್ವನಿ ಕೇಳಿದೆ.

Kichcha Sudeep: ಬಿಗ್​ ಬಾಸ್​ ಸ್ಪರ್ಧಿಗಳಿಗೆ ಸರ್​ಪ್ರೈಸ್​; ಮನೆಯಲ್ಲಿ ಕೊನೆಗೂ ಕೇಳ್ತು ಸುದೀಪ್​ ಧ್ವನಿ!
ಬಿಗ್ ಬಾಸ್ ಕನ್ನಡ
ರಾಜೇಶ್ ದುಗ್ಗುಮನೆ
|

Updated on:Apr 18, 2021 | 11:21 PM

Share

ಕನ್ನಡ ಬಿಗ್​ ಬಾಸ್​ನ 7 ಸೀಸನ್​ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಕಿಚ್ಚ ಸುದೀಪ್​ 8ನೇ ಸೀಸನ್​ಗೆ ಕಾಲಿಟ್ಟಿದ್ದಾರೆ. ಅದನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಕೂಡ. ಒಂದೇ ಒಂದು ವಾರ ಕೂಡ ಅವರು ಬಿಗ್​ ಬಾಸ್​ ತಪ್ಪಿಸಿರಲಿಲ್ಲ. ಆದರೆ,ಎಂಟನೇ ಸೀಸನ್​ನ ಏಳನೆವಾರ ಬಿಗ್​ ಬಾಸ್​ನಿಂದ ದೂರ ಉಳಿದಿದ್ದಾರೆ. ಆದಾಗ್ಯೂ ಬಿಗ್​ ಬಾಸ್​ ಮನೆಯಲ್ಲಿ ಸುದೀಪ್​ ಧ್ವನಿ ಕೇಳಿದೆ! ಈ ಮೂಲಕ ಸ್ಪರ್ಧಿಗಳಿಗೆ ಸರ್​ಪ್ರೈಸ್​ ಸಿಕ್ಕಿದೆ. ಈ ವಾರ ಬಿಗ್​ ಬಾಸ್​ ನಡೆಸಿಕೊಡುವುದಿಲ್ಲ ಎಂದು ಹೇಳಿದ್ದ ಸುದೀಪ್​, ನನಗೆ ಅನಾರೋಗ್ಯ ಕಾಡುತ್ತಿದೆ. ಈ ವಾರಾಂತ್ಯಕ್ಕೆ ನಾನು ಗುಣಮುಖನಾಗುವ ನಿರೀಕ್ಷೆ ಇದೆ. ಆದರೆ, ವೈದ್ಯರ ಸೂಚನೆಯಂತೆ ನಾನು ಕೆಲ ದಿನ ರೆಸ್ಟ್​ ಮಾಡುತ್ತಿದ್ದೇನೆ. ಹೀಗಾಗಿ, ಈ ವಾರದ ಬಿಗ್​ ಬಾಸ್​ ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ಈ ವಾರದ ಎಲಿಮಿನೇಷನ್​ಗೆ ಯಾವ ಪ್ಲ್ಯಾನ್​ ಮೂಲಕ ತಂಡ ಬರುತ್ತದೆ ಎನ್ನುವ ಕುತೂಹಲ ನನ್ನದು ಎಂದು ಸುದೀಪ್ ಹೇಳಿದ್ದರು.

ಅಂತೆಯೇ ಈ ವಾರ ಸಂಪೂರ್ಣ ಭಿನ್ನವಾಗಿ ಮೂಡಿ ಬಂದಿತ್ತು. ಅಲ್ಲದೆ, ಬಿಗ್​ ಬಾಸ್​ ಮನೆಯಲ್ಲಿ ಸ್ಪರ್ಧಿಗಳಿಗೆ ಸುದೀಪ್​ ಧ್ವನಿ ಕೇಳಿದೆ. ನೀವು ಬರೆದ ಲೆಟರ್​ ಓದಿದೆ. ಎಲ್ಲಾ ಶಬ್ದಗಳು ಮನಸ್ಸಿಗೆ ಮುಟ್ಟುವಂತಿದೆ. ಚೇತರಿಸಿಕೊಂಡು ಬೇಗ ಬರ್ತೀನಿ. ನೀವು ಮಾಡಿ ಕಳಿಸಿದ ಅಡುಗೆಯನ್ನು ಸವಿದೆ. ನೀವು ನನ್ನ ಮೇಲಿಟ್ಟಿರುವ ಪ್ರೀತಿ ಬಗ್ಗೆ ಖುಷಿ ಇದೆ. ನಾನು ಮಾಡಿದ್ದು ಸಾರ್ಥಕ ಅನಿಸುತ್ತದೆ ಎಂದು ಸುದೀಪ್​ ಹೇಳಿದರು.

ವೀಕೆಂಡ್​ ಮಿಸ್​ ಮಾಡಿಕೊಳ್ಳೋಕೆ ಇಷ್ಟ ಎಂದಿರುವ ಸುದೀಪ್​, ವೀಕೆಂಡ್​ನ ಮಿಸ್​ ಮಾಡಿಕೊಳ್ಳುವುದಕ್ಕೆ ನನಗೂ ಇಷ್ಟ ಇಲ್ಲ. ವೈದ್ಯರ ಸಲಹೆಯಂತೆ ನಾನು ರೆಸ್ಟ್​ ಮಾಡುತ್ತಿದ್ದೇನೆ. ನೀವು ಬರೆದ ಪತ್ರ ಹಾಗೂ ಕಳುಹಿಸಿದ ಊಟಕ್ಕೆ ಥ್ಯಾಂಕ್ಸ್ ಎಂದರು ಸುದೀಪ್​.

ಇದನ್ನೂ ಒದಿ: Kichcha Sudeep: ಬಿಗ್​ ಬಾಸ್​ ನಿರೂಪಣೆ ಬಗ್ಗೆ ಹರಡಿದ ಅಂತೆಕಂತೆಗೆ ಸುದೀಪ್​ ಸ್ಪಷ್ಟನೆ

Kichcha Sudeep: ಕಿಚ್ಚ ಸುದೀಪ್ ಇಲ್ಲದೇ ಬಿಗ್ ಬಾಸ್ ವೀಕೆಂಡ್ ಶೋ ನಡೆಸಿಕೊಡುವ ಸ್ಟಾರ್ ಯಾರು?

Published On - 10:25 pm, Sun, 18 April 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ