AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಹಾಗೂ ಪ್ರಶಾಂತ್​ ನಡುವೆ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಈ ವೇಳೆ ಹೇಳೋಕೆ ಏನಾದ್ರೂ ಇದೆಯಾ? ಎಂದು ಅರವಿಂದ್​ಗೆ ಸುದೀಪ್​ ಕೇಳಿದರು.

‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ
ಅರವಿಂದ್ ಕೆಪಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 11, 2021 | 12:34 PM

Share

ಬಿಗ್ ಬಾಸ್​ ಮನೆಯಲ್ಲಿ ಕಿಚ್ಚ ಸುದೀಪ್​ ಜುಲೈ 10 ಎಪಿಸೋಡ್​ನಲ್ಲಿ ಎಲ್ಲಾ ಸ್ಪರ್ಧಿಗಳು ಕ್ಲಾಸ್​ ತೆಗೆದುಕೊಂಡಿದ್ದಾರೆ. ಈ ವಾರ ತಪ್ಪು ಮಾಡಿದ ಎಲ್ಲಾ ಸ್ಪರ್ಧಿಗಳಿಗೆ ಸುದೀಪ್​ ಮಾತಿನ ಏಟು ಕೊಟ್ಟಿದ್ದಾರೆ. ಈ ಮಧ್ಯೆ, ಚಕ್ರವರ್ತಿ ಜತೆ ಸೇರಿ ಅರವಿಂದ್​ ದಾರಿ ತಪ್ಪಿದ್ದಾರೆ ಎಂಬುದನ್ನು ಸುದೀಪ್​ ಪರೋಕ್ಷವಾಗಿ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಹಾಗೂ ಪ್ರಶಾಂತ್​ ನಡುವೆ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಈ ವೇಳೆ ಹೇಳೋಕೆ ಏನಾದ್ರೂ ಇದೆಯಾ? ಎಂದು ಅರವಿಂದ್​ಗೆ ಸುದೀಪ್​ ಕೇಳಿದರು. ಇದಕ್ಕೆ ಉತ್ತರಿಸಿದ ಅರವಿಂದ್​, ‘ನಾನು ಪ್ರವೋಕ್​ ಮಾಡಿದೆ ಎಂದು ನನಗೆ ಅನ್ನಿಸಿತು. ಅಷ್ಟೆಲ್ಲ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಫೀಲ್ ಆಯಿತು’ ಎಂದರು ಅರವಿಂದ್.

ಇದೇ ಪ್ರಶ್ನೆಯನ್ನು ಪ್ರಶಾಂತ್​ಗೆ ಕೇಳಿದರು ಸುದೀಪ್​. ‘ಹಿಂದಿನ ರಾತ್ರಿ ದಿವ್ಯಾ ಉರುಡಗ ಬಳಿ ಹೋಗಿ ನಾನು ಕ್ಷಮೆ ಕೇಳಿದ್ದೆ. ಅವಾಗಲೇ ಚಾಪ್ಟರ್​ ಕ್ಲೋಸ್​ ಆಗಿತ್ತು. ಕ್ಷಮಿಸಿ ಎಂದು ಅವರ ಬಳಿ ಹೇಳಿದ್ದೆ. ಕ್ಯಾಪ್ಟನ್ಸಿ ಮುಗಿದಾಗ ದಿವ್ಯಾಗೆ ನಾನು ಗುಡ್​ ಜಾಬ್​ ಎಂದೆ. ಆದಾಗ್ಯೂ ಅರವಿಂದ್​ ಪ್ರವೋಕ್​ ಮಾಡಿದ್ರು’ ಎಂದು ಬೇಸರ ಹೊರ ಹಾಕಿದರು ಪ್ರಶಾಂತ್​.

ಇಷ್ಟೆಲ್ಲ ಆದಮೇಲೆ ನಿಮಗೆ ಸಾರಿ ಕೇಳಬೇಕು ಎಂದು ಅನಿಸಿಲ್ಲವೇ ಎಂದು ಪ್ರಶಾಂತ್ ಅವರನ್ನು ಸುದೀಪ್​ ಕೇಳಿದರು. ‘ನಾನು ಅಷ್ಟಾಗಿ ಟೆಂಪರ್​ ಕಳೆದುಕೊಳ್ಳುವುದಿಲ್ಲ. ಆದರೆ, ಆದಿನ ನಾನು ನಿಜಕ್ಕೂ ನಿಯಂತ್ರಣ​ ಕಳೆದುಕೊಂಡಿದ್ದೆ. ಇದಕ್ಕೆ ಕ್ಷಮೆ ಕೂಡ ಕೇಳಿದೆ’ ಎಂಬ ಉತ್ತರ ಪ್ರಶಾಂತ್​ ಕಡೆಯಿಂದ ಬಂತು.

ನೀವು ಕ್ಷಮೆ ಕೇಳಿದ್ರಾ ಎಂಬ ಸುದೀಪ್​ ಪ್ರಶ್ನೆಗೆ ಉತ್ತರಿಸಿದ ಅರವಿಂದ್​, ಸಾರಿ ಕೇಳಿಲ್ಲ ಎಂದರು. ‘ನಿಮ್ಮ ಮೇಲೆ ಏನು ಪ್ರಭಾವ ಬೀರಿತು? ದಿವ್ಯಾ ಮತ್ತು ಪ್ರಶಾಂತ್​ ನಡುವೆ ಒಪ್ಪಂದ ಇತ್ತು. ಆದರೆ, ನೀವು ಅದನ್ನು ಉಲ್ಲಂಘಿಸಿದ್ದೀರಿ​. ನೇರವಾಗಿ ಮಾತನಾಡಿ, ಸ್ವಂತ ಬುದ್ಧಿ ಇಲ್ಲವಾ? ಎಂದು ನೀವೇ ಕೇಳ್ತಿರಿ. ಈಗ ನೀವು ಅದನ್ನೇ ಮಾಡಿದ್ದೀರಿ. ಇದು ನಿಮ್ಮ ವ್ಯಕ್ತಿತ್ವಕ್ಕೆ ಸರಿ ಕಾಣುತ್ತಿದಯೇ? 72 ದಿನಗಳ ಹಿಂದೆ ನೋಡಿದ ಕೆಪಿ ಹೀಗೆ ಇರಲಿಲ್ಲ. ಈಗೆ ಯಾಕೆ ಹೀಗಾದ್ರಿ?’ ಎಂದು ಸುದೀಪ್​ ಪ್ರಶ್ನಿಸಿದರು. ಈ ವೇಳೆ ನಾನು ಪ್ರಭಾವಕ್ಕೆ ಒಳಗಾಗಿದ್ದು ಹೌದು ಎಂದು ಅರವಿಂದ್​ ಒಪ್ಪಿಕೊಂಡರು.

ಇದನ್ನೂ ಓದಿ: ಅವಾಚ್ಯ ಶಬ್ದಗಳನ್ನು ಬಳಸಿದ ಚಕ್ರವರ್ತಿ ಚಂದ್ರಚೂಡ್​ಗೆ ಸುದೀಪ್​ ಹೇಳಿದ್ದೇನು?

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು