AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಹಾಗೂ ಪ್ರಶಾಂತ್​ ನಡುವೆ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಈ ವೇಳೆ ಹೇಳೋಕೆ ಏನಾದ್ರೂ ಇದೆಯಾ? ಎಂದು ಅರವಿಂದ್​ಗೆ ಸುದೀಪ್​ ಕೇಳಿದರು.

‘72 ದಿನಗಳ ಕಾಲ ನೋಡಿದ ಕೆಪಿ ಹೀಗೆ ಇರಲಿಲ್ಲ’; ಚಕ್ರವರ್ತಿ ಪ್ರಭಾವಕ್ಕೊಳಗಾದ ಅರವಿಂದ್​ಗೆ ಸುದೀಪ್​ ಎಚ್ಚರಿಕೆ
ಅರವಿಂದ್ ಕೆಪಿ
TV9 Web
| Edited By: |

Updated on: Jul 11, 2021 | 12:34 PM

Share

ಬಿಗ್ ಬಾಸ್​ ಮನೆಯಲ್ಲಿ ಕಿಚ್ಚ ಸುದೀಪ್​ ಜುಲೈ 10 ಎಪಿಸೋಡ್​ನಲ್ಲಿ ಎಲ್ಲಾ ಸ್ಪರ್ಧಿಗಳು ಕ್ಲಾಸ್​ ತೆಗೆದುಕೊಂಡಿದ್ದಾರೆ. ಈ ವಾರ ತಪ್ಪು ಮಾಡಿದ ಎಲ್ಲಾ ಸ್ಪರ್ಧಿಗಳಿಗೆ ಸುದೀಪ್​ ಮಾತಿನ ಏಟು ಕೊಟ್ಟಿದ್ದಾರೆ. ಈ ಮಧ್ಯೆ, ಚಕ್ರವರ್ತಿ ಜತೆ ಸೇರಿ ಅರವಿಂದ್​ ದಾರಿ ತಪ್ಪಿದ್ದಾರೆ ಎಂಬುದನ್ನು ಸುದೀಪ್​ ಪರೋಕ್ಷವಾಗಿ ಹೇಳಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್ ಹಾಗೂ ಪ್ರಶಾಂತ್​ ನಡುವೆ ಆದ ಜಗಳದ ವಿಚಾರವನ್ನು ಸುದೀಪ್​ ಪ್ರಸ್ತಾಪ ಮಾಡಿದರು. ಈ ವೇಳೆ ಹೇಳೋಕೆ ಏನಾದ್ರೂ ಇದೆಯಾ? ಎಂದು ಅರವಿಂದ್​ಗೆ ಸುದೀಪ್​ ಕೇಳಿದರು. ಇದಕ್ಕೆ ಉತ್ತರಿಸಿದ ಅರವಿಂದ್​, ‘ನಾನು ಪ್ರವೋಕ್​ ಮಾಡಿದೆ ಎಂದು ನನಗೆ ಅನ್ನಿಸಿತು. ಅಷ್ಟೆಲ್ಲ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಫೀಲ್ ಆಯಿತು’ ಎಂದರು ಅರವಿಂದ್.

ಇದೇ ಪ್ರಶ್ನೆಯನ್ನು ಪ್ರಶಾಂತ್​ಗೆ ಕೇಳಿದರು ಸುದೀಪ್​. ‘ಹಿಂದಿನ ರಾತ್ರಿ ದಿವ್ಯಾ ಉರುಡಗ ಬಳಿ ಹೋಗಿ ನಾನು ಕ್ಷಮೆ ಕೇಳಿದ್ದೆ. ಅವಾಗಲೇ ಚಾಪ್ಟರ್​ ಕ್ಲೋಸ್​ ಆಗಿತ್ತು. ಕ್ಷಮಿಸಿ ಎಂದು ಅವರ ಬಳಿ ಹೇಳಿದ್ದೆ. ಕ್ಯಾಪ್ಟನ್ಸಿ ಮುಗಿದಾಗ ದಿವ್ಯಾಗೆ ನಾನು ಗುಡ್​ ಜಾಬ್​ ಎಂದೆ. ಆದಾಗ್ಯೂ ಅರವಿಂದ್​ ಪ್ರವೋಕ್​ ಮಾಡಿದ್ರು’ ಎಂದು ಬೇಸರ ಹೊರ ಹಾಕಿದರು ಪ್ರಶಾಂತ್​.

ಇಷ್ಟೆಲ್ಲ ಆದಮೇಲೆ ನಿಮಗೆ ಸಾರಿ ಕೇಳಬೇಕು ಎಂದು ಅನಿಸಿಲ್ಲವೇ ಎಂದು ಪ್ರಶಾಂತ್ ಅವರನ್ನು ಸುದೀಪ್​ ಕೇಳಿದರು. ‘ನಾನು ಅಷ್ಟಾಗಿ ಟೆಂಪರ್​ ಕಳೆದುಕೊಳ್ಳುವುದಿಲ್ಲ. ಆದರೆ, ಆದಿನ ನಾನು ನಿಜಕ್ಕೂ ನಿಯಂತ್ರಣ​ ಕಳೆದುಕೊಂಡಿದ್ದೆ. ಇದಕ್ಕೆ ಕ್ಷಮೆ ಕೂಡ ಕೇಳಿದೆ’ ಎಂಬ ಉತ್ತರ ಪ್ರಶಾಂತ್​ ಕಡೆಯಿಂದ ಬಂತು.

ನೀವು ಕ್ಷಮೆ ಕೇಳಿದ್ರಾ ಎಂಬ ಸುದೀಪ್​ ಪ್ರಶ್ನೆಗೆ ಉತ್ತರಿಸಿದ ಅರವಿಂದ್​, ಸಾರಿ ಕೇಳಿಲ್ಲ ಎಂದರು. ‘ನಿಮ್ಮ ಮೇಲೆ ಏನು ಪ್ರಭಾವ ಬೀರಿತು? ದಿವ್ಯಾ ಮತ್ತು ಪ್ರಶಾಂತ್​ ನಡುವೆ ಒಪ್ಪಂದ ಇತ್ತು. ಆದರೆ, ನೀವು ಅದನ್ನು ಉಲ್ಲಂಘಿಸಿದ್ದೀರಿ​. ನೇರವಾಗಿ ಮಾತನಾಡಿ, ಸ್ವಂತ ಬುದ್ಧಿ ಇಲ್ಲವಾ? ಎಂದು ನೀವೇ ಕೇಳ್ತಿರಿ. ಈಗ ನೀವು ಅದನ್ನೇ ಮಾಡಿದ್ದೀರಿ. ಇದು ನಿಮ್ಮ ವ್ಯಕ್ತಿತ್ವಕ್ಕೆ ಸರಿ ಕಾಣುತ್ತಿದಯೇ? 72 ದಿನಗಳ ಹಿಂದೆ ನೋಡಿದ ಕೆಪಿ ಹೀಗೆ ಇರಲಿಲ್ಲ. ಈಗೆ ಯಾಕೆ ಹೀಗಾದ್ರಿ?’ ಎಂದು ಸುದೀಪ್​ ಪ್ರಶ್ನಿಸಿದರು. ಈ ವೇಳೆ ನಾನು ಪ್ರಭಾವಕ್ಕೆ ಒಳಗಾಗಿದ್ದು ಹೌದು ಎಂದು ಅರವಿಂದ್​ ಒಪ್ಪಿಕೊಂಡರು.

ಇದನ್ನೂ ಓದಿ: ಅವಾಚ್ಯ ಶಬ್ದಗಳನ್ನು ಬಳಸಿದ ಚಕ್ರವರ್ತಿ ಚಂದ್ರಚೂಡ್​ಗೆ ಸುದೀಪ್​ ಹೇಳಿದ್ದೇನು?

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ