ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ
ಪ್ರಶಾಂತ್​-ಕಿಚ್ಚ ಸುದೀಪ್​
Follow us
| Updated By: ಮದನ್​ ಕುಮಾರ್​

Updated on: Apr 12, 2021 | 8:34 AM

ಬಿಗ್​ ಬಾಸ್​ ಮನೆಯ ಸದಸ್ಯರು ಪ್ರಶಾಂತ್​ ಸಂಬರಗಿ ಮೇಲೆ ಸಾಲು ಸಾಲು ಆರೋಪ ಮಾಡುತ್ತಲೇ ಇರುತ್ತಾರೆ. ಕೆಲವೊಂದು ಮನೆಯಲ್ಲೇ ಬಗೆಹರಿದರೆ, ಇನ್ನೂ ಕೆಲವು ಸುದೀಪ್​ ಎದುರು ಚರ್ಚೆಗೆ ಬರುತ್ತದೆ. ಆದರೆ, ಈ ಬಾರಿ ಸ್ವತಃ ಸುದೀಪ್​ ಅವರೇ ಪ್ರಶಾಂತ್​ ವಿಚಾರ ಎತ್ತಿಕೊಂಡು ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸರಿಯಾಗಿ ಮಾತಿನ ಚಾಟಿ ಬೀಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ. ಎಲ್ಲರೂ ತಾವು ಹೇಳಿದಂತೆ ಕೇಳಬೇಕು ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಇದರ ಭಾಗವಾಗಿ ಅವರು ಕೆಲವು ಸುಳ್ಳುಗಳನ್ನು ಹೇಳಿದ್ದಾರೆ. ಇದು ಸುದೀಪ್​ ಗಮನಕ್ಕೆ ಬಂದಿದೆ.

ಬಿಗ್​ ಬಾಸ್​ ಇತ್ತೀಚೆಗೆ ಟಾಸ್ಕ್​ ಒಂದನ್ನು ನೀಡಿದ್ದರು. ಅದನ್ನು ಹೇಳೋಕೆ ಕನ್​ಫೆಷನ್​ ರೂಂಗೆ ಪ್ರಶಾಂತ್​ ಅವರನ್ನು ಕರೆಯಲಾಗಿತ್ತು. ಆಗ ಬಿಗ್​ ಬಿಗ್​ ಬಾಸ್​ ಟಾಸ್ಕ್​ ಬಗ್ಗೆ ಹೇಳಿದ್ದರು. ಆಗ ನಮಗೆ ಊಟ ಆಗಿಲ್ಲ, 10 ನಿಮಿಷ ಟೈಂ ಕೊಡಿ ಎಂದು ಪ್ರಶಾಂತ್​ ಕೇಳಿದ್ದರು. ಆದರೆ, ಕನ್​ಫೆಷನ್​ ರೂಂನಿಂದ ಹೊರ ಬಂದ ಪ್ರಶಾಂತ್​, ಬಿಗ್​ ಬಾಸ್ ಹೇಳಿದಾರೆ, 10 ನಿಮಿಷ ಮಾತ್ರ ಟೈಂ ಇದೆ. ಅಷ್ಟರಲ್ಲಿ ರೆಡಿ ಆಗಿ ಎಂದು ಹೇಳಿದ್ದರು. ಇದನ್ನು ಸುದೀಪ್​ ಉಲ್ಲೇಖಿಸಿದ್ದಾರೆ.

ಇನ್ನು, ಬಿಗ್​ ಬಾಸ್​ ಮನೆಯಲ್ಲಿ ದಿಂಬಿನ ಫೈಟ್​ ನಡೆಯುತ್ತಿತ್ತು. ಹೀಗೆ ಮಾಡಬಾರದು ಎಂದು ಬಿಗ್​ ಬಾಸ್​ ಹೇಳಿದಾರೆ ಅಂತ ಪ್ರಶಾಂತ್​ ಹೇಳುವ ಮೂಲಕ ಮನೆಯವರನ್ನು ಸುಮ್ಮನಿರಿಸಿದ್ದರು. ಇದಕ್ಕೂ ಸುದೀಪ್​ ಅಸಮಾಧಾನ ಹೊರ ಹಾಕಿದ್ದಾರೆ.

ಬಿಗ್​ ಬಾಸ್ ಕೋಟ್​ ಮಾಡಿ ಹೇಳುವಾಗ ಎಚ್ಚರವಾಗಿರಿ. ಬಿಗ್​ ಬಾಸ್​ ಏನು ಹೇಳಿದ್ದಾರೋ ಅದನ್ನು ಮಾತ್ರ ಹೇಳಬೇಕು. ನೀವೇ ಲೈನ್ ಕ್ರಿಯೇಟ್​ ಮಾಡಿ ಹೇಳಬಾರದು. ಹಾಗೆ ಹೇಳೋದು ತಪ್ಪಾಗುತ್ತದೆ ಎಂದು ಅಚ್ಚರಿಸಿದರು. ಇದಕ್ಕೆ ಸಮಜಾಯಿಶಿ ಕೊಡೋಕೆ ಹೋದ ಪ್ರಶಾಂತ್​ಗೆ, ತಪ್ಪು ತಪ್ಪೇ ಎಂದು ಹೇಳುವ ಮೂಲಕ ಸುದೀಪ್​​ ಸುಮ್ಮನಾಗಿಸಿದರು.

ಇದನ್ನೂ ಓದಿ: ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ