AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ
ಪ್ರಶಾಂತ್​-ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 12, 2021 | 8:34 AM

Share

ಬಿಗ್​ ಬಾಸ್​ ಮನೆಯ ಸದಸ್ಯರು ಪ್ರಶಾಂತ್​ ಸಂಬರಗಿ ಮೇಲೆ ಸಾಲು ಸಾಲು ಆರೋಪ ಮಾಡುತ್ತಲೇ ಇರುತ್ತಾರೆ. ಕೆಲವೊಂದು ಮನೆಯಲ್ಲೇ ಬಗೆಹರಿದರೆ, ಇನ್ನೂ ಕೆಲವು ಸುದೀಪ್​ ಎದುರು ಚರ್ಚೆಗೆ ಬರುತ್ತದೆ. ಆದರೆ, ಈ ಬಾರಿ ಸ್ವತಃ ಸುದೀಪ್​ ಅವರೇ ಪ್ರಶಾಂತ್​ ವಿಚಾರ ಎತ್ತಿಕೊಂಡು ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸರಿಯಾಗಿ ಮಾತಿನ ಚಾಟಿ ಬೀಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ. ಎಲ್ಲರೂ ತಾವು ಹೇಳಿದಂತೆ ಕೇಳಬೇಕು ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಇದರ ಭಾಗವಾಗಿ ಅವರು ಕೆಲವು ಸುಳ್ಳುಗಳನ್ನು ಹೇಳಿದ್ದಾರೆ. ಇದು ಸುದೀಪ್​ ಗಮನಕ್ಕೆ ಬಂದಿದೆ.

ಬಿಗ್​ ಬಾಸ್​ ಇತ್ತೀಚೆಗೆ ಟಾಸ್ಕ್​ ಒಂದನ್ನು ನೀಡಿದ್ದರು. ಅದನ್ನು ಹೇಳೋಕೆ ಕನ್​ಫೆಷನ್​ ರೂಂಗೆ ಪ್ರಶಾಂತ್​ ಅವರನ್ನು ಕರೆಯಲಾಗಿತ್ತು. ಆಗ ಬಿಗ್​ ಬಿಗ್​ ಬಾಸ್​ ಟಾಸ್ಕ್​ ಬಗ್ಗೆ ಹೇಳಿದ್ದರು. ಆಗ ನಮಗೆ ಊಟ ಆಗಿಲ್ಲ, 10 ನಿಮಿಷ ಟೈಂ ಕೊಡಿ ಎಂದು ಪ್ರಶಾಂತ್​ ಕೇಳಿದ್ದರು. ಆದರೆ, ಕನ್​ಫೆಷನ್​ ರೂಂನಿಂದ ಹೊರ ಬಂದ ಪ್ರಶಾಂತ್​, ಬಿಗ್​ ಬಾಸ್ ಹೇಳಿದಾರೆ, 10 ನಿಮಿಷ ಮಾತ್ರ ಟೈಂ ಇದೆ. ಅಷ್ಟರಲ್ಲಿ ರೆಡಿ ಆಗಿ ಎಂದು ಹೇಳಿದ್ದರು. ಇದನ್ನು ಸುದೀಪ್​ ಉಲ್ಲೇಖಿಸಿದ್ದಾರೆ.

ಇನ್ನು, ಬಿಗ್​ ಬಾಸ್​ ಮನೆಯಲ್ಲಿ ದಿಂಬಿನ ಫೈಟ್​ ನಡೆಯುತ್ತಿತ್ತು. ಹೀಗೆ ಮಾಡಬಾರದು ಎಂದು ಬಿಗ್​ ಬಾಸ್​ ಹೇಳಿದಾರೆ ಅಂತ ಪ್ರಶಾಂತ್​ ಹೇಳುವ ಮೂಲಕ ಮನೆಯವರನ್ನು ಸುಮ್ಮನಿರಿಸಿದ್ದರು. ಇದಕ್ಕೂ ಸುದೀಪ್​ ಅಸಮಾಧಾನ ಹೊರ ಹಾಕಿದ್ದಾರೆ.

ಬಿಗ್​ ಬಾಸ್ ಕೋಟ್​ ಮಾಡಿ ಹೇಳುವಾಗ ಎಚ್ಚರವಾಗಿರಿ. ಬಿಗ್​ ಬಾಸ್​ ಏನು ಹೇಳಿದ್ದಾರೋ ಅದನ್ನು ಮಾತ್ರ ಹೇಳಬೇಕು. ನೀವೇ ಲೈನ್ ಕ್ರಿಯೇಟ್​ ಮಾಡಿ ಹೇಳಬಾರದು. ಹಾಗೆ ಹೇಳೋದು ತಪ್ಪಾಗುತ್ತದೆ ಎಂದು ಅಚ್ಚರಿಸಿದರು. ಇದಕ್ಕೆ ಸಮಜಾಯಿಶಿ ಕೊಡೋಕೆ ಹೋದ ಪ್ರಶಾಂತ್​ಗೆ, ತಪ್ಪು ತಪ್ಪೇ ಎಂದು ಹೇಳುವ ಮೂಲಕ ಸುದೀಪ್​​ ಸುಮ್ಮನಾಗಿಸಿದರು.

ಇದನ್ನೂ ಓದಿ: ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ