AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ
ಪ್ರಶಾಂತ್​-ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 12, 2021 | 8:34 AM

Share

ಬಿಗ್​ ಬಾಸ್​ ಮನೆಯ ಸದಸ್ಯರು ಪ್ರಶಾಂತ್​ ಸಂಬರಗಿ ಮೇಲೆ ಸಾಲು ಸಾಲು ಆರೋಪ ಮಾಡುತ್ತಲೇ ಇರುತ್ತಾರೆ. ಕೆಲವೊಂದು ಮನೆಯಲ್ಲೇ ಬಗೆಹರಿದರೆ, ಇನ್ನೂ ಕೆಲವು ಸುದೀಪ್​ ಎದುರು ಚರ್ಚೆಗೆ ಬರುತ್ತದೆ. ಆದರೆ, ಈ ಬಾರಿ ಸ್ವತಃ ಸುದೀಪ್​ ಅವರೇ ಪ್ರಶಾಂತ್​ ವಿಚಾರ ಎತ್ತಿಕೊಂಡು ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸರಿಯಾಗಿ ಮಾತಿನ ಚಾಟಿ ಬೀಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ. ಎಲ್ಲರೂ ತಾವು ಹೇಳಿದಂತೆ ಕೇಳಬೇಕು ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಇದರ ಭಾಗವಾಗಿ ಅವರು ಕೆಲವು ಸುಳ್ಳುಗಳನ್ನು ಹೇಳಿದ್ದಾರೆ. ಇದು ಸುದೀಪ್​ ಗಮನಕ್ಕೆ ಬಂದಿದೆ.

ಬಿಗ್​ ಬಾಸ್​ ಇತ್ತೀಚೆಗೆ ಟಾಸ್ಕ್​ ಒಂದನ್ನು ನೀಡಿದ್ದರು. ಅದನ್ನು ಹೇಳೋಕೆ ಕನ್​ಫೆಷನ್​ ರೂಂಗೆ ಪ್ರಶಾಂತ್​ ಅವರನ್ನು ಕರೆಯಲಾಗಿತ್ತು. ಆಗ ಬಿಗ್​ ಬಿಗ್​ ಬಾಸ್​ ಟಾಸ್ಕ್​ ಬಗ್ಗೆ ಹೇಳಿದ್ದರು. ಆಗ ನಮಗೆ ಊಟ ಆಗಿಲ್ಲ, 10 ನಿಮಿಷ ಟೈಂ ಕೊಡಿ ಎಂದು ಪ್ರಶಾಂತ್​ ಕೇಳಿದ್ದರು. ಆದರೆ, ಕನ್​ಫೆಷನ್​ ರೂಂನಿಂದ ಹೊರ ಬಂದ ಪ್ರಶಾಂತ್​, ಬಿಗ್​ ಬಾಸ್ ಹೇಳಿದಾರೆ, 10 ನಿಮಿಷ ಮಾತ್ರ ಟೈಂ ಇದೆ. ಅಷ್ಟರಲ್ಲಿ ರೆಡಿ ಆಗಿ ಎಂದು ಹೇಳಿದ್ದರು. ಇದನ್ನು ಸುದೀಪ್​ ಉಲ್ಲೇಖಿಸಿದ್ದಾರೆ.

ಇನ್ನು, ಬಿಗ್​ ಬಾಸ್​ ಮನೆಯಲ್ಲಿ ದಿಂಬಿನ ಫೈಟ್​ ನಡೆಯುತ್ತಿತ್ತು. ಹೀಗೆ ಮಾಡಬಾರದು ಎಂದು ಬಿಗ್​ ಬಾಸ್​ ಹೇಳಿದಾರೆ ಅಂತ ಪ್ರಶಾಂತ್​ ಹೇಳುವ ಮೂಲಕ ಮನೆಯವರನ್ನು ಸುಮ್ಮನಿರಿಸಿದ್ದರು. ಇದಕ್ಕೂ ಸುದೀಪ್​ ಅಸಮಾಧಾನ ಹೊರ ಹಾಕಿದ್ದಾರೆ.

ಬಿಗ್​ ಬಾಸ್ ಕೋಟ್​ ಮಾಡಿ ಹೇಳುವಾಗ ಎಚ್ಚರವಾಗಿರಿ. ಬಿಗ್​ ಬಾಸ್​ ಏನು ಹೇಳಿದ್ದಾರೋ ಅದನ್ನು ಮಾತ್ರ ಹೇಳಬೇಕು. ನೀವೇ ಲೈನ್ ಕ್ರಿಯೇಟ್​ ಮಾಡಿ ಹೇಳಬಾರದು. ಹಾಗೆ ಹೇಳೋದು ತಪ್ಪಾಗುತ್ತದೆ ಎಂದು ಅಚ್ಚರಿಸಿದರು. ಇದಕ್ಕೆ ಸಮಜಾಯಿಶಿ ಕೊಡೋಕೆ ಹೋದ ಪ್ರಶಾಂತ್​ಗೆ, ತಪ್ಪು ತಪ್ಪೇ ಎಂದು ಹೇಳುವ ಮೂಲಕ ಸುದೀಪ್​​ ಸುಮ್ಮನಾಗಿಸಿದರು.

ಇದನ್ನೂ ಓದಿ: ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್