AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ
ಪ್ರಶಾಂತ್​-ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 12, 2021 | 8:34 AM

Share

ಬಿಗ್​ ಬಾಸ್​ ಮನೆಯ ಸದಸ್ಯರು ಪ್ರಶಾಂತ್​ ಸಂಬರಗಿ ಮೇಲೆ ಸಾಲು ಸಾಲು ಆರೋಪ ಮಾಡುತ್ತಲೇ ಇರುತ್ತಾರೆ. ಕೆಲವೊಂದು ಮನೆಯಲ್ಲೇ ಬಗೆಹರಿದರೆ, ಇನ್ನೂ ಕೆಲವು ಸುದೀಪ್​ ಎದುರು ಚರ್ಚೆಗೆ ಬರುತ್ತದೆ. ಆದರೆ, ಈ ಬಾರಿ ಸ್ವತಃ ಸುದೀಪ್​ ಅವರೇ ಪ್ರಶಾಂತ್​ ವಿಚಾರ ಎತ್ತಿಕೊಂಡು ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸರಿಯಾಗಿ ಮಾತಿನ ಚಾಟಿ ಬೀಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ. ಎಲ್ಲರೂ ತಾವು ಹೇಳಿದಂತೆ ಕೇಳಬೇಕು ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಇದರ ಭಾಗವಾಗಿ ಅವರು ಕೆಲವು ಸುಳ್ಳುಗಳನ್ನು ಹೇಳಿದ್ದಾರೆ. ಇದು ಸುದೀಪ್​ ಗಮನಕ್ಕೆ ಬಂದಿದೆ.

ಬಿಗ್​ ಬಾಸ್​ ಇತ್ತೀಚೆಗೆ ಟಾಸ್ಕ್​ ಒಂದನ್ನು ನೀಡಿದ್ದರು. ಅದನ್ನು ಹೇಳೋಕೆ ಕನ್​ಫೆಷನ್​ ರೂಂಗೆ ಪ್ರಶಾಂತ್​ ಅವರನ್ನು ಕರೆಯಲಾಗಿತ್ತು. ಆಗ ಬಿಗ್​ ಬಿಗ್​ ಬಾಸ್​ ಟಾಸ್ಕ್​ ಬಗ್ಗೆ ಹೇಳಿದ್ದರು. ಆಗ ನಮಗೆ ಊಟ ಆಗಿಲ್ಲ, 10 ನಿಮಿಷ ಟೈಂ ಕೊಡಿ ಎಂದು ಪ್ರಶಾಂತ್​ ಕೇಳಿದ್ದರು. ಆದರೆ, ಕನ್​ಫೆಷನ್​ ರೂಂನಿಂದ ಹೊರ ಬಂದ ಪ್ರಶಾಂತ್​, ಬಿಗ್​ ಬಾಸ್ ಹೇಳಿದಾರೆ, 10 ನಿಮಿಷ ಮಾತ್ರ ಟೈಂ ಇದೆ. ಅಷ್ಟರಲ್ಲಿ ರೆಡಿ ಆಗಿ ಎಂದು ಹೇಳಿದ್ದರು. ಇದನ್ನು ಸುದೀಪ್​ ಉಲ್ಲೇಖಿಸಿದ್ದಾರೆ.

ಇನ್ನು, ಬಿಗ್​ ಬಾಸ್​ ಮನೆಯಲ್ಲಿ ದಿಂಬಿನ ಫೈಟ್​ ನಡೆಯುತ್ತಿತ್ತು. ಹೀಗೆ ಮಾಡಬಾರದು ಎಂದು ಬಿಗ್​ ಬಾಸ್​ ಹೇಳಿದಾರೆ ಅಂತ ಪ್ರಶಾಂತ್​ ಹೇಳುವ ಮೂಲಕ ಮನೆಯವರನ್ನು ಸುಮ್ಮನಿರಿಸಿದ್ದರು. ಇದಕ್ಕೂ ಸುದೀಪ್​ ಅಸಮಾಧಾನ ಹೊರ ಹಾಕಿದ್ದಾರೆ.

ಬಿಗ್​ ಬಾಸ್ ಕೋಟ್​ ಮಾಡಿ ಹೇಳುವಾಗ ಎಚ್ಚರವಾಗಿರಿ. ಬಿಗ್​ ಬಾಸ್​ ಏನು ಹೇಳಿದ್ದಾರೋ ಅದನ್ನು ಮಾತ್ರ ಹೇಳಬೇಕು. ನೀವೇ ಲೈನ್ ಕ್ರಿಯೇಟ್​ ಮಾಡಿ ಹೇಳಬಾರದು. ಹಾಗೆ ಹೇಳೋದು ತಪ್ಪಾಗುತ್ತದೆ ಎಂದು ಅಚ್ಚರಿಸಿದರು. ಇದಕ್ಕೆ ಸಮಜಾಯಿಶಿ ಕೊಡೋಕೆ ಹೋದ ಪ್ರಶಾಂತ್​ಗೆ, ತಪ್ಪು ತಪ್ಪೇ ಎಂದು ಹೇಳುವ ಮೂಲಕ ಸುದೀಪ್​​ ಸುಮ್ಮನಾಗಿಸಿದರು.

ಇದನ್ನೂ ಓದಿ: ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್