AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ.

ಬಿಗ್​ ಬಾಸ್ ಹೆಸರು ದುರ್ಬಳಕೆ ಮಾಡಿಕೊಂಡ ಪ್ರಶಾಂತ್​ ಸಂಬರಗಿ; ಸುದೀಪ್ ಛೀಮಾರಿ
ಪ್ರಶಾಂತ್​-ಕಿಚ್ಚ ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 12, 2021 | 8:34 AM

Share

ಬಿಗ್​ ಬಾಸ್​ ಮನೆಯ ಸದಸ್ಯರು ಪ್ರಶಾಂತ್​ ಸಂಬರಗಿ ಮೇಲೆ ಸಾಲು ಸಾಲು ಆರೋಪ ಮಾಡುತ್ತಲೇ ಇರುತ್ತಾರೆ. ಕೆಲವೊಂದು ಮನೆಯಲ್ಲೇ ಬಗೆಹರಿದರೆ, ಇನ್ನೂ ಕೆಲವು ಸುದೀಪ್​ ಎದುರು ಚರ್ಚೆಗೆ ಬರುತ್ತದೆ. ಆದರೆ, ಈ ಬಾರಿ ಸ್ವತಃ ಸುದೀಪ್​ ಅವರೇ ಪ್ರಶಾಂತ್​ ವಿಚಾರ ಎತ್ತಿಕೊಂಡು ಮಾತನಾಡಿದ್ದಾರೆ. ಅಷ್ಟೇ ಅಲ್ಲ, ಬಿಗ್​ ಬಾಸ್​ ಹೆಸರು ದುರ್ಬಳಕೆ ಮಾಡಿಕೊಂಡಿದ್ದಕ್ಕೆ ಸರಿಯಾಗಿ ಮಾತಿನ ಚಾಟಿ ಬೀಸಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಕ್ಯಾಪ್ಟನ್​ ಆಗಿದ್ದಾರೆ. ಹೀಗಾಗಿ, ಅವರು ಮನೆಯವರನ್ನು ಸಂಪೂರ್ಣವಾಗಿ ಕಂಟ್ರೋಲ್​ಗೆ ತೆಗೆದುಕೊಳ್ಳೋಕೆ ಮುಂದಾಗುತ್ತಿದ್ದಾರೆ. ಎಲ್ಲರೂ ತಾವು ಹೇಳಿದಂತೆ ಕೇಳಬೇಕು ಎನ್ನುವ ಮನಸ್ಥಿತಿ ಹೊಂದಿದ್ದಾರೆ. ಇದರ ಭಾಗವಾಗಿ ಅವರು ಕೆಲವು ಸುಳ್ಳುಗಳನ್ನು ಹೇಳಿದ್ದಾರೆ. ಇದು ಸುದೀಪ್​ ಗಮನಕ್ಕೆ ಬಂದಿದೆ.

ಬಿಗ್​ ಬಾಸ್​ ಇತ್ತೀಚೆಗೆ ಟಾಸ್ಕ್​ ಒಂದನ್ನು ನೀಡಿದ್ದರು. ಅದನ್ನು ಹೇಳೋಕೆ ಕನ್​ಫೆಷನ್​ ರೂಂಗೆ ಪ್ರಶಾಂತ್​ ಅವರನ್ನು ಕರೆಯಲಾಗಿತ್ತು. ಆಗ ಬಿಗ್​ ಬಿಗ್​ ಬಾಸ್​ ಟಾಸ್ಕ್​ ಬಗ್ಗೆ ಹೇಳಿದ್ದರು. ಆಗ ನಮಗೆ ಊಟ ಆಗಿಲ್ಲ, 10 ನಿಮಿಷ ಟೈಂ ಕೊಡಿ ಎಂದು ಪ್ರಶಾಂತ್​ ಕೇಳಿದ್ದರು. ಆದರೆ, ಕನ್​ಫೆಷನ್​ ರೂಂನಿಂದ ಹೊರ ಬಂದ ಪ್ರಶಾಂತ್​, ಬಿಗ್​ ಬಾಸ್ ಹೇಳಿದಾರೆ, 10 ನಿಮಿಷ ಮಾತ್ರ ಟೈಂ ಇದೆ. ಅಷ್ಟರಲ್ಲಿ ರೆಡಿ ಆಗಿ ಎಂದು ಹೇಳಿದ್ದರು. ಇದನ್ನು ಸುದೀಪ್​ ಉಲ್ಲೇಖಿಸಿದ್ದಾರೆ.

ಇನ್ನು, ಬಿಗ್​ ಬಾಸ್​ ಮನೆಯಲ್ಲಿ ದಿಂಬಿನ ಫೈಟ್​ ನಡೆಯುತ್ತಿತ್ತು. ಹೀಗೆ ಮಾಡಬಾರದು ಎಂದು ಬಿಗ್​ ಬಾಸ್​ ಹೇಳಿದಾರೆ ಅಂತ ಪ್ರಶಾಂತ್​ ಹೇಳುವ ಮೂಲಕ ಮನೆಯವರನ್ನು ಸುಮ್ಮನಿರಿಸಿದ್ದರು. ಇದಕ್ಕೂ ಸುದೀಪ್​ ಅಸಮಾಧಾನ ಹೊರ ಹಾಕಿದ್ದಾರೆ.

ಬಿಗ್​ ಬಾಸ್ ಕೋಟ್​ ಮಾಡಿ ಹೇಳುವಾಗ ಎಚ್ಚರವಾಗಿರಿ. ಬಿಗ್​ ಬಾಸ್​ ಏನು ಹೇಳಿದ್ದಾರೋ ಅದನ್ನು ಮಾತ್ರ ಹೇಳಬೇಕು. ನೀವೇ ಲೈನ್ ಕ್ರಿಯೇಟ್​ ಮಾಡಿ ಹೇಳಬಾರದು. ಹಾಗೆ ಹೇಳೋದು ತಪ್ಪಾಗುತ್ತದೆ ಎಂದು ಅಚ್ಚರಿಸಿದರು. ಇದಕ್ಕೆ ಸಮಜಾಯಿಶಿ ಕೊಡೋಕೆ ಹೋದ ಪ್ರಶಾಂತ್​ಗೆ, ತಪ್ಪು ತಪ್ಪೇ ಎಂದು ಹೇಳುವ ಮೂಲಕ ಸುದೀಪ್​​ ಸುಮ್ಮನಾಗಿಸಿದರು.

ಇದನ್ನೂ ಓದಿ: ಸಂಬರಗಿ ನಡೆಸಿದ ದೊಡ್ಡ ಕುತಂತ್ರ ವಿಫಲ​; ಮನೆಯವರ ಎದುರು ಹೀರೋ ಆದ ರಘು!

ತಪ್ಪಾಗಿದೆ ಕ್ಷಮಿಸಿ; ಸುದೀಪ್​ ನೇರ ಪ್ರಶ್ನೆಗೆ ಹಣ್ಣುಗಾಯಿ ನೀರುಗಾಯಿ ಆದ ಸಂಬರಗಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ