AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು

Bigg Boss Kannada: ಎರಡು ವಾರಗಳ ದೀರ್ಘ ಅನಾರೋಗ್ಯದ ಬಳಿಕ ಸುದೀಪ್​ ಚೇತರಿಸಿಕೊಂಡಿದ್ದಾರೆ. ಸದ್ಯಕ್ಕಂತೂ ಕೊರೊನಾ ಹಾವಳಿ ಮಿತಿ ಮೀರುತ್ತಿದೆ. ಕೊವಿಡ್​ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ.

Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: May 01, 2021 | 7:40 AM

Share

ಹಲವು ದಿನಗಳಿಂದ ನಟ ಕಿಚ್ಚ ಸುದೀಪ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಇತ್ತೀಚೆಗೆ ಅವರ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಸಿಕ್ಕಿತ್ತು. ತಾವು ಗುಣಮುಖ ಆಗಿರುವುದಾಗಿ ಸ್ವತಃ ಸುದೀಪ್ ಹೇಳಿದ್ದರು. ಇನ್ನೇನು ಅವರು ಈ ವಾರದ ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದುಕೊಂಡಿದ್ದ ಅಭಿಮಾನಿಗಳಿಗೆಲ್ಲ ಈಗ ತೀವ್ರ ನಿರಾಸೆ ಆಗಿದೆ. ಈ ವೀಕೆಂಡ್​ನಲ್ಲಿಯೂ ಸುದೀಪ್​ ಬಿಗ್​ ಬಾಸ್​ಗೆ ಗೈರಾಗಲಿದ್ದಾರೆ!

ಇದು ಗಾಸಿಪ್​ ಅಲ್ಲ. ಕಲರ್ಸ್​ ಕನ್ನಡ ವಾಹಿನಿಯೇ ಈ ಬಗ್ಗೆ ಮಾಹಿತಿ ನೀಡಿದೆ. ‘ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ’ ಎಂದು ತಿಳಿಸಲಾಗಿದೆ. ಇದು ಸಹಜವಾಗಿಯೇ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಎರಡು ವಾರಗಳ ದೀರ್ಘ ಅನಾರೋಗ್ಯದ ಬಳಿಕ ಸುದೀಪ್​ ಚೇತರಿಸಿಕೊಂಡಿದ್ದಾರೆ. ಸದ್ಯಕ್ಕಂತೂ ಕೊರೊನಾ ಹಾವಳಿ ಮಿತಿ ಮೀರುತ್ತಿದೆ. ಕೊವಿಡ್​ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಸೂಕ್ತ ಚಿಕಿತ್ಸೆ ಸಿಗದೇ ಜನರು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಚಿತ್ರೀಕರಣ ನಡೆಸುವುದು ಸರಿಯಲ್ಲ. ಬಿಗ್​ ಬಾಸ್​ ಚಿತ್ರೀಕರಣದಲ್ಲಿ  ಸುದೀಪ್​ ಕೂಡ ಭಾಗಿ ಆಗುವಂತಿಲ್ಲ. ಈ ಎಲ್ಲ ಕಾರಣದಿಂದ ವೀಕೆಂಡ್ ಎಪಿಸೋಡ್​ನಲ್ಲಿ ಅವರು ಕಾಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಕಲರ್ಸ್​ ಕನ್ನಡ ವಾಹಿನಿ ನೀಡಿರುವ ಈ ಪ್ರಕಟಣೆಗೆ ಅಭಿಮಾನಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ಸುದೀಪ್ ಅವರು ಪಂಚಾಯತಿ ಮಾಡದಿದ್ದರೆ ಮನೆಯಲ್ಲಿ ನಡೆಯುತ್ತಿರುವ ಭೇದಭಾವಗಳಿಗೆ ಮತ್ತು ತಾರತಮ್ಯಗಳಿಗೆ ಸರಿಯಾದ ಉತ್ತರ ಸಿಗುವುದಿಲ್ಲ. ಬಿಗ್​ ಬಾಸ್​ ಮನೆಯಲ್ಲಿ ಕೆಲವರು ತಮಗೆ ಇಷ್ಟ ಬಂದಂತೆ ಆಟ ಆಡುತ್ತಿದ್ದಾರೆ. ಮೋಸದ ಆಟವನ್ನು ಆಡುತ್ತಿದ್ದಾರೆ. ಇದಕ್ಕೆ ಬಿಗ್​ ಬಾಸ್​ ಏನಾದರೂ ಮಾಡಬೇಕು’ ಎಂದು ವೀಕ್ಷಕರು ಮನವಿ ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಭಾಗವಹಿಸಬೇಕು ಎಂದು ಸುದೀಪ್​ ತುಂಬ ಕಾತರದಿಂದ ಕಾಯುತ್ತಿದ್ದರು. ‘ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಹಾರೈಕೆಗೆ ಧನ್ಯವಾದಗಳು. ನಾನೀಗ ಉತ್ತಮವಾಗಿದ್ದೇನೆ. ಈ ವಾರ ಬಿಗ್​ ಬಾಸ್​ನಲ್ಲಿ ಭಾಗವಹಿಸಲು ಕಾಯುತ್ತಿದ್ದೇನೆ’ ಎಂದು ಅವರು ಇತ್ತೀಚೆಗೆ ಟ್ವೀಟ್​ ಮಾಡಿದ್ದರು. ಆದರೆ ಪರಿಸ್ಥಿತಿ ಅದಕ್ಕೆಲ್ಲ ಅವಕಾಶ ಮಾಡಿಕೊಡುತ್ತಿಲ್ಲ. ಸುದೀಪ್​ ಇಲ್ಲದೆಯೂ ಬಿಗ್​ ಬಾಸ್​ನಲ್ಲಿ ಪ್ರತಿ ವಾರ ಎಲಿಮಿನೇಷನ್​ ಪ್ರಕ್ರಿಯೆ ಮುಂದುವರಿಯುತ್ತಿದೆ. ಕಳೆದ ವಾರ ರಾಜೀವ್​ ಔಟ್​ ಆಗಿದ್ದರು.

ಇದನ್ನೂ ಓದಿ: ಶುಭಾ ಬಳಿ ಇರುವ ಅಮೂಲ್ಯ ವಸ್ತು ಕದಿಯಲು ಸಂಬರಗಿ ಪ್ಲ್ಯಾನ್​; ಮಂಜು ಕೊಟ್ರು ಎಚ್ಚರಿಕೆ

Kichcha Sudeep: ಕಿಚ್ಚ ಸುದೀಪ್ ಆರೋಗ್ಯಕ್ಕಾಗಿ ವಿಡಿಯೋ ಮಾಡಿ ಪ್ರಾರ್ಥಿಸಿದ ಜಪಾನ್​ ಮಹಿಳೆ

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?