AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು

Bigg Boss Kannada: ಎರಡು ವಾರಗಳ ದೀರ್ಘ ಅನಾರೋಗ್ಯದ ಬಳಿಕ ಸುದೀಪ್​ ಚೇತರಿಸಿಕೊಂಡಿದ್ದಾರೆ. ಸದ್ಯಕ್ಕಂತೂ ಕೊರೊನಾ ಹಾವಳಿ ಮಿತಿ ಮೀರುತ್ತಿದೆ. ಕೊವಿಡ್​ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ.

Kichcha Sudeep: ಸುದೀಪ್​ ಗುಣಮುಖರಾದ ಬೆನ್ನಲ್ಲೇ ಕಹಿ ಸುದ್ದಿ; ಈ ವಾರವೂ ಬಿಗ್ ಬಾಸ್​ಗೆ ಕಿಚ್ಚ ಗೈರು
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: May 01, 2021 | 7:40 AM

Share

ಹಲವು ದಿನಗಳಿಂದ ನಟ ಕಿಚ್ಚ ಸುದೀಪ್​ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಇತ್ತೀಚೆಗೆ ಅವರ ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಸಿಕ್ಕಿತ್ತು. ತಾವು ಗುಣಮುಖ ಆಗಿರುವುದಾಗಿ ಸ್ವತಃ ಸುದೀಪ್ ಹೇಳಿದ್ದರು. ಇನ್ನೇನು ಅವರು ಈ ವಾರದ ಬಿಗ್​ ಬಾಸ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದುಕೊಂಡಿದ್ದ ಅಭಿಮಾನಿಗಳಿಗೆಲ್ಲ ಈಗ ತೀವ್ರ ನಿರಾಸೆ ಆಗಿದೆ. ಈ ವೀಕೆಂಡ್​ನಲ್ಲಿಯೂ ಸುದೀಪ್​ ಬಿಗ್​ ಬಾಸ್​ಗೆ ಗೈರಾಗಲಿದ್ದಾರೆ!

ಇದು ಗಾಸಿಪ್​ ಅಲ್ಲ. ಕಲರ್ಸ್​ ಕನ್ನಡ ವಾಹಿನಿಯೇ ಈ ಬಗ್ಗೆ ಮಾಹಿತಿ ನೀಡಿದೆ. ‘ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ನಾಳೆ ಕಿಚ್ಚ ಸುದೀಪ್ ಅವರ ಜೊತೆಯಲ್ಲಿ ನಡೆಯಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ’ ಎಂದು ತಿಳಿಸಲಾಗಿದೆ. ಇದು ಸಹಜವಾಗಿಯೇ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

ಎರಡು ವಾರಗಳ ದೀರ್ಘ ಅನಾರೋಗ್ಯದ ಬಳಿಕ ಸುದೀಪ್​ ಚೇತರಿಸಿಕೊಂಡಿದ್ದಾರೆ. ಸದ್ಯಕ್ಕಂತೂ ಕೊರೊನಾ ಹಾವಳಿ ಮಿತಿ ಮೀರುತ್ತಿದೆ. ಕೊವಿಡ್​ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿದೆ. ಸೂಕ್ತ ಚಿಕಿತ್ಸೆ ಸಿಗದೇ ಜನರು ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಚಿತ್ರೀಕರಣ ನಡೆಸುವುದು ಸರಿಯಲ್ಲ. ಬಿಗ್​ ಬಾಸ್​ ಚಿತ್ರೀಕರಣದಲ್ಲಿ  ಸುದೀಪ್​ ಕೂಡ ಭಾಗಿ ಆಗುವಂತಿಲ್ಲ. ಈ ಎಲ್ಲ ಕಾರಣದಿಂದ ವೀಕೆಂಡ್ ಎಪಿಸೋಡ್​ನಲ್ಲಿ ಅವರು ಕಾಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಕಲರ್ಸ್​ ಕನ್ನಡ ವಾಹಿನಿ ನೀಡಿರುವ ಈ ಪ್ರಕಟಣೆಗೆ ಅಭಿಮಾನಿಗಳು ಹಲವು ಬಗೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ‘ಸುದೀಪ್ ಅವರು ಪಂಚಾಯತಿ ಮಾಡದಿದ್ದರೆ ಮನೆಯಲ್ಲಿ ನಡೆಯುತ್ತಿರುವ ಭೇದಭಾವಗಳಿಗೆ ಮತ್ತು ತಾರತಮ್ಯಗಳಿಗೆ ಸರಿಯಾದ ಉತ್ತರ ಸಿಗುವುದಿಲ್ಲ. ಬಿಗ್​ ಬಾಸ್​ ಮನೆಯಲ್ಲಿ ಕೆಲವರು ತಮಗೆ ಇಷ್ಟ ಬಂದಂತೆ ಆಟ ಆಡುತ್ತಿದ್ದಾರೆ. ಮೋಸದ ಆಟವನ್ನು ಆಡುತ್ತಿದ್ದಾರೆ. ಇದಕ್ಕೆ ಬಿಗ್​ ಬಾಸ್​ ಏನಾದರೂ ಮಾಡಬೇಕು’ ಎಂದು ವೀಕ್ಷಕರು ಮನವಿ ಮಾಡಿಕೊಂಡಿದ್ದಾರೆ.

ಬಿಗ್​ ಬಾಸ್​ನಲ್ಲಿ ಭಾಗವಹಿಸಬೇಕು ಎಂದು ಸುದೀಪ್​ ತುಂಬ ಕಾತರದಿಂದ ಕಾಯುತ್ತಿದ್ದರು. ‘ನಿಮ್ಮೆಲ್ಲರ ಪ್ರಾರ್ಥನೆ ಮತ್ತು ಹಾರೈಕೆಗೆ ಧನ್ಯವಾದಗಳು. ನಾನೀಗ ಉತ್ತಮವಾಗಿದ್ದೇನೆ. ಈ ವಾರ ಬಿಗ್​ ಬಾಸ್​ನಲ್ಲಿ ಭಾಗವಹಿಸಲು ಕಾಯುತ್ತಿದ್ದೇನೆ’ ಎಂದು ಅವರು ಇತ್ತೀಚೆಗೆ ಟ್ವೀಟ್​ ಮಾಡಿದ್ದರು. ಆದರೆ ಪರಿಸ್ಥಿತಿ ಅದಕ್ಕೆಲ್ಲ ಅವಕಾಶ ಮಾಡಿಕೊಡುತ್ತಿಲ್ಲ. ಸುದೀಪ್​ ಇಲ್ಲದೆಯೂ ಬಿಗ್​ ಬಾಸ್​ನಲ್ಲಿ ಪ್ರತಿ ವಾರ ಎಲಿಮಿನೇಷನ್​ ಪ್ರಕ್ರಿಯೆ ಮುಂದುವರಿಯುತ್ತಿದೆ. ಕಳೆದ ವಾರ ರಾಜೀವ್​ ಔಟ್​ ಆಗಿದ್ದರು.

ಇದನ್ನೂ ಓದಿ: ಶುಭಾ ಬಳಿ ಇರುವ ಅಮೂಲ್ಯ ವಸ್ತು ಕದಿಯಲು ಸಂಬರಗಿ ಪ್ಲ್ಯಾನ್​; ಮಂಜು ಕೊಟ್ರು ಎಚ್ಚರಿಕೆ

Kichcha Sudeep: ಕಿಚ್ಚ ಸುದೀಪ್ ಆರೋಗ್ಯಕ್ಕಾಗಿ ವಿಡಿಯೋ ಮಾಡಿ ಪ್ರಾರ್ಥಿಸಿದ ಜಪಾನ್​ ಮಹಿಳೆ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ