AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ನಟನ ಹೊಸ ಸಿನಿಮಾದ ಇಂಟ್ರೊ ವಿಡಿಯೋ ಬಿಡುಗಡೆ ಮಾಡಲಿದ್ದಾರೆ ಸುದೀಪ್

Kamal Haasan-Sudeep: ಕಮಲ್ ಹಾಸನ್​, ಸುದೀಪ್​ರ ನೆಚ್ಚಿನ ನಟರಲ್ಲಿ ಪ್ರಮುಖರು. ತಮ್ಮ ನೆಚ್ಚಿನ ನಟನ ಹೊಸ ಸಿನಿಮಾ 'ಇಂಡಿಯನ್ 2'ದ ಇಂಟ್ರೊ ವಿಡಿಯೋವನ್ನು ಬಿಡುಗಡೆ ಮಾಡಲಿದ್ದಾರೆ ಸುದೀಪ್.

ನೆಚ್ಚಿನ ನಟನ ಹೊಸ ಸಿನಿಮಾದ ಇಂಟ್ರೊ ವಿಡಿಯೋ ಬಿಡುಗಡೆ ಮಾಡಲಿದ್ದಾರೆ ಸುದೀಪ್
ಕಮಲ್ ಹಾಸನ್
ಮಂಜುನಾಥ ಸಿ.
|

Updated on: Nov 02, 2023 | 5:39 PM

Share

ವಯಸ್ಸಾದಂತೆ ಸ್ಟಾರ್​ಗಿರಿ, ಅಭಿಮಾನಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗುತ್ತಿದ್ದಾರೆ ಕಮಲ್ ಹಾಸನ್. ಅವರ ನಟನೆಯ ‘ವಿಕ್ರಂ‘ (Vikram) ಸಿನಿಮಾ ಅಭಿಮಾನಿಗಳಿಗೆ ಮೋಡಿ ಮಾಡಿದೆ. ಅದಾದ ಬಳಿಕ ಪ್ರಭಾಸ್ ಜೊತೆಗೆ ‘ಕಲ್ಕಿ’ ಸಿನಿಮಾದಲ್ಲಿ ನಟಿಸುತ್ತಿದ್ದು ಆ ಸಿನಿಮಾದಲ್ಲಿಯೂ ಅವರ ಪಾತ್ರದ ಬಗ್ಗೆ ಭಾರಿ ನಿರೀಕ್ಷೆ ಇದೆ. ಇದರ ನಡುವೆ ಕಮಲ್ ಹಾಸನ್​ರ ಸೂಪರ್ ಹಿಟ್ ಸಿನಿಮಾ ‘ಇಂಡಿಯನ್’ ನ ಎರಡನೇ ಭಾಗ ತೆರೆಗೆ ಬರಲು ಸಜ್ಜಾಗಿದ್ದು, ಈ ಸಿನಿಮಾದ ಬಗ್ಗೆಯೂ ಸಿನಿಪ್ರೇಮಿಗಳು ದೊಡ್ಡ ಮಟ್ಟದ ನಿರೀಕ್ಷೆಯನ್ನೇ ಇಟ್ಟುಕೊಂಡಿದ್ದಾರೆ.

ತಮಿಳಿನ ಖ್ಯಾತ ನಿರ್ದೇಶಕ ಎಸ್ ಶಂಕರ್ ನಿರ್ದೇಶನದ ‘ಇಂಡಿಯನ್ 2’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. 1996 ರಲ್ಲಿ ಬಿಡುಗಡೆ ಆಗಿದ್ದ ‘ಇಂಡಿಯನ್’ ಸಿನಿಮಾವನ್ನು ಸಹ ಶಂಕರ್ ಅವರೇ ನಿರ್ದೇಶನ ಮಾಡಿದ್ದರು. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಗಿತ್ತು. ಇದೀಗ ಅದೇ ಸಿನಿಮಾದ ಮುಂದಿನ ಭಾಗವನ್ನು ಶಂಕರ್ ನಿರ್ದೇಶನ ಮಾಡಿದ್ದಾರೆ. ಇದೇ ಕಾರಣಕ್ಕೆ ಈ ಸಿನಿಮಾದ ಬಗೆಗಿನ ನಿರೀಕ್ಷೆಗಳು ದುಪ್ಪಟ್ಟಾಗಿವೆ.

1996ರಲ್ಲಿ ಬಿಡುಗಡೆ ಆಗಿದ್ದ ‘ಇಂಡಿಯನ್’ ಸಿನಿಮಾದಲ್ಲಿ ಸೇನಾಪತಿ ಹಾಗೂ ಚಂದ್ರಭೋಸ್ ಪಾತ್ರದಲ್ಲಿ ಮಿಂಚಿದ್ದರು. ಆ ಸಿನಿಮಾದಲ್ಲಿ ಆಗಿನ ಕಾಲದ ಸೂಪರ್ ಸ್ಟಾರ್ ನಟಿಯರಾಗಿದ್ದ ಮನಿಷಾ ಕೊಯಿರಾಲಾ, ಊರ್ಮಿಳಾ ಮತೋಡ್ಕರ್ ಅವರುಗಳು ನಾಯಕಿಯರಾಗಿ ನಟಿಸಿದ್ದರು. ಆ ಸಿನಿಮಾದ ಮುಂದುವರೆದ ಭಾಗವಾಗಿರುವ ‘ಇಂಡಿಯನ್-2’ ಚಿತ್ರದ ಇಂಟ್ರೋ ವೀಡಿಯೋ ನವೆಂಬರ್ 3 ರಂದು ಬಿಡುಗಡೆ ಆಗುತ್ತಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್, ತಮಿಳಿನಲ್ಲಿ ರಜನಿಕಾಂತ್, ಹಿಂದಿ ಆಮಿರ್ ಖಾನ್, ತೆಲುಗಿನಲ್ಲಿ ರಾಜಮೌಳಿ, ಮಲಯಾಳಂನಲ್ಲಿ ಮೋಹನ್ ಲಾಲ್ ಇಂಡಿಯನ್-2 ಸಿನಿಮಾದ ಇಂಟ್ರೋ ವಿಡಿಯೋ ಅನಾವರಣ ಮಾಡಲಿದ್ದಾರೆ.

ಇದನ್ನೂ ಓದಿ:ಕಮಲ್ ಹಾಸನ್ ಅವರನ್ನು ಭೇಟಿ ಆಗಿದ್ದೇಕೆ ಶಿವಣ್ಣ, ಒಟ್ಟಿಗೆ ಸಿನಿಮಾ ಮಾಡ್ತಿದ್ದಾರಾ? ಕೊಟ್ರಾ ಉತ್ತರ

ಕಮಲ್ ಹಾಸನ್​, ಸುದೀಪ್​ರ ನೆಚ್ಚಿನ ನಟ. ತಮ್ಮ ನೆಚ್ಚಿನ ನಟನ ಸಿನಿಮಾದ ಇಂಟ್ರೋ ವಿಡಿಯೋವನ್ನು ಬಿಡುಗಡೆ ಮಾಡುವುದು ಸ್ವತಃ ಸುದೀಪ್​ಗೆ ಗೌರವದ ಕಾರ್ಯ. ಸುದೀಪ್ ಹಾಗೂ ಕಮಲ್ ಹಾಸನ್ ನಡುವೆ ಆತ್ಮೀಯ ಬಂಧವಿದೆ. ‘ಇಂಡಿಯನ್ 2’ ಸಿನಿಮಾದ ನಿರ್ಮಾಣ ಸಂಸ್ಥೆಯಾದ ಲೈಕಾ ಜೊತೆಗೂ ಸುದೀಪ್​ಗೆ ಆತ್ಮೀಯ ಬಂಧವಿದೆ ಎನ್ನಲಾಗುತ್ತದೆ. ಇದೇ ಕಾರಣಕ್ಕೆ ಸುದೀಪ್ ಅವರು ಕಮಲ್​ರ ಸಿನಿಮಾದ ಇಂಟ್ರೋ ವಿಡಿಯೋ ಬಿಡುಗಡೆ ಮಾಡುತ್ತಿದ್ದಾರೆ.

ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಜೈಂಟ್ ಮೂವೀಸ್ ಬ್ಯಾನರ್ ಅಡಿಯಲ್ಲಿ ‘ಇಂಡಿಯನ್ 2’ ಸಿನಿಮಾ ನಿರ್ಮಾಣ ಆಗುತ್ತಿದೆ. ಹಿರಿಯ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರ, ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ‘ಇಂಡಿಯನ್ 2’ ಒಳಗೊಂಡಿದೆ. ಸಿನಿಮಾದಲ್ಲಿ ಕಮಲ್ ಹಾಸನ್ ಜೊತೆಗೆ ನಟ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ನಟಿಸಿದ್ದಾರೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಈ ಹಿಂದಿನ ‘ಇಂಡಿಯನ್’ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ ನೀಡಿದ್ದರು. ಆ ಸಿನಿಮಾದ ಹಾಡುಗಳು ಸೂಪರ್ ಡೂಪರ್ ಹಿಟ್ ಆಗಿದ್ದವು. ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?