AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!

ಬಿಗ್​ ಬಾಸ್​ ಮನೆಯ ಕಡೆಯಿಂದ, ಬಿಗ್​ ಬಾಸ್​ ಸ್ಪರ್ಧಿಗಳ ಪರವಾಗಿ, ಬಿಗ್​ ಬಾಸ್​ ತಂತ್ರಜ್ಞರ ಪರವಾಗಿ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್ ಹೇಳಿದರು. ಇದಕ್ಕೆ ಬಿಗ್​ ಬಾಸ್​ ಸ್ಪರ್ಧಿಗಳು ಕೂಡ ಧ್ವನಿಗೂಡಿಸಿದರು.

ಬಿಗ್​ ಬಾಸ್​ ವೇದಿಕೆ ಮೇಲೆ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಅಂದ್ರು ಸುದೀಪ್​!
ವಿರಾಟ್​ ಕೊಹ್ಲಿ-ಸುದೀಪ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 05, 2021 | 7:19 AM

Share

ಕಳೆದ 13 ಸೀಸನ್​ಗಳಿಂದ ಆರ್​ಸಿಬಿಗೆ ಕಪ್​ ಗೆಲ್ಲೋಕೆ ಸಾಧ್ಯವಾಗಿಲ್ಲ. ಆದರೆ, ಈ ಸಲ ಕಪ್​ ನಮ್ಮದೆ ಎನ್ನುವ ಸ್ಲೋಗನ್​ ಹೇಳೋಕೆ ಆರ್​ಸಿಬಿ ಫ್ಯಾನ್ಸ್​ ಮರೆತಿಲ್ಲ. ಏಪ್ರಿಲ್​ 19ರಿಂದ ಸೀಸನ್​ 14 ಆರಂಭವಾಗುತ್ತಿದೆ. ಐಪಿಎಲ್​ ಆರಂಭಕ್ಕೂ ಮೊದಲು ಕಿಚ್ಚ ಸುದೀಪ್​ ಬಿಗ್​ ಬಾಸ್ ಪರವಾಗಿ ಹಾಗೂ ಬಿಗ್​ ಬಾಸ್​ ಸ್ಪರ್ಧಿಗಳು, ತಂತ್ರಜ್ಞರ ಪರವಾಗಿ ಆರ್​ಸಿಬಿಗೆ ಆಲ್​ ದಿ ಬೆಸ್ಟ್​ ಹೇಳಿದ್ದಾರೆ.

ಶನಿವಾರ (ಏ.3) ಬಿಗ್​ ಬಾಸ್ ಮನೆಯಲ್ಲಿ ಮುಂಜಾನೆ ಐಪಿಎಲ್​ ಆ್ಯಂಥಮ್​ ಗೀತೆಯನ್ನು ಹಾಕಲಾಗಿತ್ತು. ಮನೆಯವರಿಗೆ ಇದು ಐಪಿಎಲ್​ ಸೀಸನ್​ 14ರ ಆ್ಯಂಥಮ್​ ಎಂಬುದು ಗೊತ್ತಾಗಿಲ್ಲ. ಇದನ್ನು ಸುದೀಪ್​ ಭಾನುವಾರ (ಏಪ್ರಿಲ್​ 04) ವಿವರಿಸಿದ್ದಾರೆ. ಶನಿವಾರ ಪ್ರಸಾರವಾದ ಗೀತೆ ಐಪಿಎಲ್​ನದ್ದು ಎಂದು ಹೇಳಿ, ಆ ಹಾಡಿನ ವಿಡಿಯೋ ಕೂಡ ಪ್ರಸಾರ ಮಾಡಿದ್ದರು. ಇದನ್ನು ಕೇಳಿದ ಕೂಡಲೇ ಬಿಗ್​ ಬಾಸ್​ ಮನೆಯ ಸ್ಪರ್ಧಿಗಳು ಸಖತ್​ ಎಗ್ಸೈಟ್​ ಆಗಿದ್ದಾರೆ.

ಮೊದಲ ಮ್ಯಾಚ್​ ಆರ್​ಸಿಬಿ vs ಮುಂಬೈ ನಡುವೆ ನಡೆಯಲಿದೆ ಎಂದು ಸುದೀಪ್​ ಮಾಹಿತಿ ನೀಡಿದರು. ರಘು ಗೌಡ ಆರ್​ಸಿಬಿ ಫ್ಯಾನ್​. ಕಳೆದ ಐಪಿಎಲ್​ ಸೀಸನ್​ನಲ್ಲಿ ಆರ್​ಸಿಬಿ ಬಗ್ಗೆ ಸಾಕಷ್ಟು ಪೋಸ್ಟ್​ ಹಾಕಿದ್ದಾರೆ. ಹೀಗಾಗಿ, ಅವರು ಈ ವಿಚಾರ ಕೇಳುತ್ತಿದ್ದಂತೆ ಸಖತ್​ ಖುಷಿಯಾಗಿದ್ದಾರೆ. ಅಷ್ಟೇ ಅಲ್ಲ, ಆರ್​ಸಿಬಿಗೆ ಆಲ್​ ​ದಿ ಬೆಸ್ಟ್​ ಎಂದು ​ಜೈಕಾರ ಹಾಕಿದ್ದಾರೆ.

ಬಿಗ್​ ಬಾಸ್​ ಮನೆಯ ಕಡೆಯಿಂದ, ಬಿಗ್​ ಬಾಸ್​ ಸ್ಪರ್ಧಿಗಳ ಪರವಾಗಿ, ಬಿಗ್​ ಬಾಸ್​ ತಂತ್ರಜ್ಞರ ಪರವಾಗಿ ಸುದೀಪ್​ ಆರ್​ಸಿಬಿಗೆ ಆಲ್​ ದಿ ಬೆಸ್ಟ್ ಹೇಳಿದರು. ಇದಕ್ಕೆ ಬಿಗ್​ ಬಾಸ್​ ಸ್ಪರ್ಧಿಗಳು ಕೂಡ ಧ್ವನಿಗೂಡಿಸಿದರು.

ಇನ್ನು, ಕಿಚ್ಚ ಸುದೀಪ್​ ಕೂಡ ಕ್ರಿಕೆಟ್ ಪ್ರಿಯರು. ಸ್ಯಾಂಡಲ್​ವುಡ್​ನಲ್ಲಿ ಕ್ರಿಕೆಟ್​ ಮ್ಯಾಚ್​ ನಡೆಸೋಕೆ ಇವರದೇ ನೇತೃತ್ವ. ಹೀಗಾಗಿ, ಇವರಿಗೆ ಕ್ರಿಕೆಟ್​ ಮೇಲೆ ಹೆಚ್ಚು ಆಸಕ್ತಿ ಇದೆ. ಆರ್​ಸಿಬಿ ಅವರ ಫೇವರಿಟ್​ ತಂಡ.

ಇದನ್ನೂ ಓದಿ: Bigg Boss Kannada: ​19ನೇ ವಯಸ್ಸಿಗೆ ಇದು ದೊಡ್ಡದು ಅಂದುಕೊಂಡ್ರಾ? ವಿಶ್ವನಿಗೆ ಸುದೀಪ್​ ಮಾತಿನ ಪಂಚ್​!

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ