AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲೇ ಎದುರಾಳಿ ಜೊತೆ ವಾಗ್ವಾದಕ್ಕೆ ಇಳಿದ ಸುದೀಪ್​; ಸಮಾಧಾನ ಮಾಡಲು ದೊಡ್ಡ ಗ್ಯಾಂಗೇ ಬರಬೇಕಾಯ್ತು

ಕಿಚ್ಚ ಸುದೀಪ್ ಅವರು ಸಿಸಿಎಲ್ ಪಂದ್ಯದ ವೇಳೆ ಎದುರಾಳಿ ತಂಡದ ಆಟಗಾರರೊಂದಿಗೆ ವಾಗ್ವಾದಕ್ಕೆ ಇಳಿದ ಘಟನೆ ವೈರಲ್ ಆಗಿದೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಅವರನ್ನು ಸಮಾಧಾನಪಡಿಸಲು ತಂಡವೇ ಮಧ್ಯಪ್ರವೇಶಿಸಬೇಕಾಯಿತು. ಆದರೂ, ನಂತರ ಅವರು ಎದುರಾಳಿ ತಂಡದ ಆಟಗಾರರೊಂದಿಗೆ ಸೌಹಾರ್ದಯುತವಾಗಿ ವರ್ತಿಸಿದ್ದಾರೆ.

ಮೈದಾನದಲ್ಲೇ ಎದುರಾಳಿ ಜೊತೆ ವಾಗ್ವಾದಕ್ಕೆ ಇಳಿದ ಸುದೀಪ್​; ಸಮಾಧಾನ ಮಾಡಲು ದೊಡ್ಡ ಗ್ಯಾಂಗೇ ಬರಬೇಕಾಯ್ತು
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Feb 23, 2025 | 11:35 AM

Share

ಕಿಚ್ಚ ಸುದೀಪ್ ಅವರು ಕ್ರಿಕೆಟ್ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದಾರೆ. ಈ ಕಾರಣದಿಂದಲೇ ಅವರು ಸಿಸಿಎಲ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಈಗ ಸುದೀಪ್ ಅವರು ಸಿಸಿಎಲ್ ಪಂದ್ಯದ ವೇಳೆ ಎದುರಾಳಿ ತಂಡದ ಜೊತೆ ವಾಗ್ವಾದಕ್ಕೆ ಇಳಿದ ಘಟನೆ ನಡೆದಿದೆ. ಅವರನ್ನು ಸಮಾಧಾನಿಸಲು ಇಡೀ ತಂಡವೇ ಬರಬೇಕಾದ ಅನಿವಾರ್ಯತೆ ಬಂತು. ಸಿಟ್ಟು ಇಳಿದ ಬಳಿಕ ಅವರು ಎದುರಾಳಿ ತಂಡಗಳ ಜೊತೆ ಆತ್ಮೀಯವಾಗಿ ವರ್ತಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಪಂಜಾಬ್ ವಿರುದ್ಧದ ಪಂದ್ಯ

ಪಂಜಾಬ್ ದೆ ಶೇರ್ ಹಾಗೂ ಕರ್ನಾಟಕ ಬುಲ್ಡೋಜರ್ಸ್ ಮಧ್ಯೆ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಕರ್ನಾಟಕ ತಂಡ ಕೇವಲ 2 ರನ್​ಗಳ ಅಂತರದಲ್ಲಿ ಸೋತಿದೆ.  ಈ ರೋಚಕ ಪಂದ್ಯದಲ್ಲಿ ಸುದೀಪ್ ಹಾಗೂ ಪಂಜಾಬ್ ದೆ ಶೇರ್ ತಂಡಗಳ ಮಧ್ಯೆ ಕಿರಿಕ್ ಆಗಿದ್ದು ಕಂಡು ಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಯಾರ ಜೊತೆ

ಪಂಜಾಬ್ ಪರ ಬ್ಯಾಟಿಂಗ್ ಮಾಡುತ್ತಿದ್ದ ನಿಂಜಾ ಎನ್​ಜೆ ಹಾಗೂ ಕೀಪರ್ ಸುದೀಪ್ ಮಧ್ಯೆ ಕಿರಿಕ್ ಆಗಿದೆ. ಈ ವೇಳೆ ಸುದೀಪ್ ಅವರನ್ನು ಸಮಾಧಾನ ಮಾಡಲು ಕರ್ನಾಟಕ ಬುಲ್ಡೋಜರ್ಸ್​ನ ಇಡೀ ತಂಡವೇ ಬರಬೇಕಾಯಿತು. ರೇಗಾಡುತ್ತಾ ಬಂದ ನಿಂಜಾಗೆ ಸುದೀಪ್ ಅವರು ಮಾತಿನ ಚಾಟಿ ಬೀಸಿದ್ದಾರೆ. ಆ ಬಳಿಕ ಇಡೀ ಕರ್ನಾಟಕ ತಂಡ ಒಗ್ಗಟ್ಟಿನಿಂದ ನಿಂಜಾ ವಿರುದ್ಧ ಮಾತಿಗೆ ಇಳಿದಿದೆ. ಅಂಪೈಯರ್ಸ್​​ಗಳು ಪರಿಸ್ಥಿತಿ ತಿಳಿ ಗೊಳಿಸಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ‘ವಾಲಿ’ ಸಿನಿಮಾ ವೇಳೆ ನಡೆದ ಘಟನೆಯಿಂದ ಕಣ್ಣೀರು ಹಾಕಿದ್ದ ಸುದೀಪ್ 

ಶೇಕ್ ಹ್ಯಾಂಡ್

ಸುದೀಪ್ ಅವರು ಯಾರ ವಿರುದ್ಧ ಎಷ್ಟೇ ಸಿಟ್ಟನ್ನು ಇಟ್ಟುಕೊಂಡರೂ ಅದನ್ನು ಹೆಚ್ಚು ಹೊತ್ತು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅದಕ್ಕೆ ಈ ಪಂದ್ಯದಲ್ಲಿ ನಡೆದ ಘಟನೆಯೇ ಸಾಕ್ಷಿ. ನಿಂಜಾ ವಿರುದ್ಧ ಅವರು ಅಷ್ಟು ಸಿಟ್ಟು ಮಾಡಿಕೊಂಡರೂ ಪಂದ್ಯ ಮುಗಿದ ಬಳಿಕ ಹೋಗಿ ನಿಂಜಾಗೆ ಶೇಕ್​ ಹ್ಯಾಂಡ್ ಮಾಡಿದ್ದಾರೆ. ನಿಂಜಾನ ಅಪ್ಪಿಕೊಂಡು ನಗು ಮೊಗದಿಂದ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Sun, 23 February 25

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ