AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲೇ ಎದುರಾಳಿ ಜೊತೆ ವಾಗ್ವಾದಕ್ಕೆ ಇಳಿದ ಸುದೀಪ್​; ಸಮಾಧಾನ ಮಾಡಲು ದೊಡ್ಡ ಗ್ಯಾಂಗೇ ಬರಬೇಕಾಯ್ತು

ಕಿಚ್ಚ ಸುದೀಪ್ ಅವರು ಸಿಸಿಎಲ್ ಪಂದ್ಯದ ವೇಳೆ ಎದುರಾಳಿ ತಂಡದ ಆಟಗಾರರೊಂದಿಗೆ ವಾಗ್ವಾದಕ್ಕೆ ಇಳಿದ ಘಟನೆ ವೈರಲ್ ಆಗಿದೆ. ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ಸುದೀಪ್ ಅವರನ್ನು ಸಮಾಧಾನಪಡಿಸಲು ತಂಡವೇ ಮಧ್ಯಪ್ರವೇಶಿಸಬೇಕಾಯಿತು. ಆದರೂ, ನಂತರ ಅವರು ಎದುರಾಳಿ ತಂಡದ ಆಟಗಾರರೊಂದಿಗೆ ಸೌಹಾರ್ದಯುತವಾಗಿ ವರ್ತಿಸಿದ್ದಾರೆ.

ಮೈದಾನದಲ್ಲೇ ಎದುರಾಳಿ ಜೊತೆ ವಾಗ್ವಾದಕ್ಕೆ ಇಳಿದ ಸುದೀಪ್​; ಸಮಾಧಾನ ಮಾಡಲು ದೊಡ್ಡ ಗ್ಯಾಂಗೇ ಬರಬೇಕಾಯ್ತು
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Feb 23, 2025 | 11:35 AM

Share

ಕಿಚ್ಚ ಸುದೀಪ್ ಅವರು ಕ್ರಿಕೆಟ್ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದಾರೆ. ಈ ಕಾರಣದಿಂದಲೇ ಅವರು ಸಿಸಿಎಲ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಈಗ ಸುದೀಪ್ ಅವರು ಸಿಸಿಎಲ್ ಪಂದ್ಯದ ವೇಳೆ ಎದುರಾಳಿ ತಂಡದ ಜೊತೆ ವಾಗ್ವಾದಕ್ಕೆ ಇಳಿದ ಘಟನೆ ನಡೆದಿದೆ. ಅವರನ್ನು ಸಮಾಧಾನಿಸಲು ಇಡೀ ತಂಡವೇ ಬರಬೇಕಾದ ಅನಿವಾರ್ಯತೆ ಬಂತು. ಸಿಟ್ಟು ಇಳಿದ ಬಳಿಕ ಅವರು ಎದುರಾಳಿ ತಂಡಗಳ ಜೊತೆ ಆತ್ಮೀಯವಾಗಿ ವರ್ತಿಸಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಪಂಜಾಬ್ ವಿರುದ್ಧದ ಪಂದ್ಯ

ಪಂಜಾಬ್ ದೆ ಶೇರ್ ಹಾಗೂ ಕರ್ನಾಟಕ ಬುಲ್ಡೋಜರ್ಸ್ ಮಧ್ಯೆ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಕರ್ನಾಟಕ ತಂಡ ಕೇವಲ 2 ರನ್​ಗಳ ಅಂತರದಲ್ಲಿ ಸೋತಿದೆ.  ಈ ರೋಚಕ ಪಂದ್ಯದಲ್ಲಿ ಸುದೀಪ್ ಹಾಗೂ ಪಂಜಾಬ್ ದೆ ಶೇರ್ ತಂಡಗಳ ಮಧ್ಯೆ ಕಿರಿಕ್ ಆಗಿದ್ದು ಕಂಡು ಬಂದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಯಾರ ಜೊತೆ

ಪಂಜಾಬ್ ಪರ ಬ್ಯಾಟಿಂಗ್ ಮಾಡುತ್ತಿದ್ದ ನಿಂಜಾ ಎನ್​ಜೆ ಹಾಗೂ ಕೀಪರ್ ಸುದೀಪ್ ಮಧ್ಯೆ ಕಿರಿಕ್ ಆಗಿದೆ. ಈ ವೇಳೆ ಸುದೀಪ್ ಅವರನ್ನು ಸಮಾಧಾನ ಮಾಡಲು ಕರ್ನಾಟಕ ಬುಲ್ಡೋಜರ್ಸ್​ನ ಇಡೀ ತಂಡವೇ ಬರಬೇಕಾಯಿತು. ರೇಗಾಡುತ್ತಾ ಬಂದ ನಿಂಜಾಗೆ ಸುದೀಪ್ ಅವರು ಮಾತಿನ ಚಾಟಿ ಬೀಸಿದ್ದಾರೆ. ಆ ಬಳಿಕ ಇಡೀ ಕರ್ನಾಟಕ ತಂಡ ಒಗ್ಗಟ್ಟಿನಿಂದ ನಿಂಜಾ ವಿರುದ್ಧ ಮಾತಿಗೆ ಇಳಿದಿದೆ. ಅಂಪೈಯರ್ಸ್​​ಗಳು ಪರಿಸ್ಥಿತಿ ತಿಳಿ ಗೊಳಿಸಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ‘ವಾಲಿ’ ಸಿನಿಮಾ ವೇಳೆ ನಡೆದ ಘಟನೆಯಿಂದ ಕಣ್ಣೀರು ಹಾಕಿದ್ದ ಸುದೀಪ್ 

ಶೇಕ್ ಹ್ಯಾಂಡ್

ಸುದೀಪ್ ಅವರು ಯಾರ ವಿರುದ್ಧ ಎಷ್ಟೇ ಸಿಟ್ಟನ್ನು ಇಟ್ಟುಕೊಂಡರೂ ಅದನ್ನು ಹೆಚ್ಚು ಹೊತ್ತು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅದಕ್ಕೆ ಈ ಪಂದ್ಯದಲ್ಲಿ ನಡೆದ ಘಟನೆಯೇ ಸಾಕ್ಷಿ. ನಿಂಜಾ ವಿರುದ್ಧ ಅವರು ಅಷ್ಟು ಸಿಟ್ಟು ಮಾಡಿಕೊಂಡರೂ ಪಂದ್ಯ ಮುಗಿದ ಬಳಿಕ ಹೋಗಿ ನಿಂಜಾಗೆ ಶೇಕ್​ ಹ್ಯಾಂಡ್ ಮಾಡಿದ್ದಾರೆ. ನಿಂಜಾನ ಅಪ್ಪಿಕೊಂಡು ನಗು ಮೊಗದಿಂದ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:30 am, Sun, 23 February 25

Follow Us
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಚನ್ನಪಟ್ಟಣ ನಗರಕ್ಕೇ ನುಗ್ಗಿದ ಒಂಟಿ ಸಲಗ: ಎದುರಿಗೆ ಸಿಕ್ಕಿದ್ದೆಲ್ಲ ಉಡೀಸ್​​
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದಲ್ಲಿ ಮೋದಿ ವಿಜಯಘೋಷ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ರಾಜಕುಮಾರ್ ಸ್ಮಾರಕದ ಬಳಿ ಫ್ಲೆಕ್ಸ್ ಗೋಡೌನ್‌ನಲ್ಲಿ ಭೀಕರ ಅಗ್ನಿ ಅವಘಡ
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಅಕ್ರಮದ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದ ಮಹಿಳೆಗೇ ಬಿಗ್ ಶಾಕ್!
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
ಜರ್ಮನ್ ಒಪೆರಾ ಹಾಡಿದ ಸರೆಗಮಪ ಸ್ಪರ್ಧಿ; ಜಡ್ಜ್​​ಗಳೇ ಶಾಕ್ 
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
SSLC ಫಲಿತಾಂಶದ ವೇಳೆ ಯಡವಟ್ಟು: 92ರ ಬದಲು ವಿದ್ಯಾರ್ಥಿಗೆ ಬಂದಿದ್ದು 48 ಅಂಕ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಬ್ಲಡ್ ಬ್ಯಾಂಕ್​ಗಳಿಗೂ ತಟ್ಟಿದ ಬಿಸಿಲಿನ ಬೇಗೆ: ರಕ್ತ ಸಿಗದೇ ರೋಗಿಗಳ ಪರದಾಟ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಕೊಪ್ಪಳದಲ್ಲಿ ನಿಲ್ಲದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಬೆಳ್ಳಂಬೆಳಗ್ಗೆ ಸಫಾರಿ ತೆರಳಿದವರಿಗೆ ದರ್ಶನ ಕೊಟ್ಟ ಅಪರೂಪದ ಕರಿಚಿರತೆ!
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ
ಡೋಲು ಬಾರಿಸುತ್ತಾ ಭರ್ಜರಿ ಡ್ಯಾನ್ಸ್ ಮಾಡಿದ ಶಾಸಕ ಶಿವಲಿಂಗೇಗೌಡ