AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಾರ್ಜಾ’ದಲ್ಲಿ ಪ್ರಶಸ್ತಿ ಸ್ವೀಕರಿಸಿದ ಕಿಂಗ್​ ಖಾನ್​ ಶಾರುಖ್

ಶಾರುಖ್​ ಖಾನ್​ (shah rukh khan)ಶಾರ್ಜಾ ಇಂಟರ್ನ್ಯಾಷನಲ್​ ಬುಕ್​ ಫೇರ್(SIBF)-2022ರಲ್ಲಿ ಭಾಗವಹಿಸಿದ್ದರು. ಅಂತಾರಾಷ್ಟ್ರೀಯ ಐಕಾನ್​ ಆಗಿ ಸಿನಿಮಾ ಮತ್ತು ಸಂಸ್ಕೃತಿಗೆ ನೀಡಿದ ಕೊಡುಗೆಗಳಿಗಾಗಿ ಅವರಿಗೆ ಗ್ಲೋಬಲ್​ ಐಕಾನ್​ ಆಫ್​ ಸಿನಿಮಾ ಮತ್ತು ಕಲ್ಚರಲ್​ ನಿರೂಪಣೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

‘ಶಾರ್ಜಾ'ದಲ್ಲಿ ಪ್ರಶಸ್ತಿ ಸ್ವೀಕರಿಸಿದ ಕಿಂಗ್​ ಖಾನ್​ ಶಾರುಖ್
ಶಾರುಖ್​ ಖಾನ್
TV9 Web
| Edited By: |

Updated on:Nov 12, 2022 | 1:46 PM

Share

ನಟ ಶಾರುಖ್​ ಖಾನ್​(shah rukh khan)ಅವರು ಮತ್ತೊಂದು ಪ್ರಶಸ್ತಿಯ ಗರಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಯುಎಇ(UAE)ಯ ಶಾರ್ಜಾದಲ್ಲಿರುವ ಎಕ್ಸ್​ಪೋ ಸೆಂಟರ್​ನಲ್ಲಿ ಶಾರ್ಜಾ ಇಂಟರ್​ನ್ಯಾಷನಲ್​ ಬುಕ್​ ಫೇರ್(SIBF) 2022 ರ 41 ನೇ ಆವೃತ್ತಿಯಲ್ಲಿ ಅವರಿಗೆ ಶುಕ್ರವಾರ(ನವೆಂಬರ್ 11) ಗ್ಲೋಬಲ್​ ಐಕಾನ್​ ಆಫ್​ ಸಿನಿಮಾ ಮತ್ತು ಕಲ್ಚರಲ್​ ನಿರೂಪಣೆ ಪ್ರಶಸ್ತಿಯನ್ನು ನೀಡಲಾಗಿದ್ದು, ಈ ಇವೆಂಟ್​ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಕಾಣಿಸಿಕೊಂಡಿದ್ದರು. ಇದರ ವಿಡಿಯೋಗಳು ಹಾಗೂ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಇನ್ನು ಶಾರುಖ್​ ಅವರು ಕಾರ್ಯಕ್ರಮದಲ್ಲಿ ನಾವು ಎಲ್ಲೇ ವಾಸಿಸುತ್ತಿದ್ದರೂ, ನಾವು ಯಾವ ಬಣ್ಣದಲ್ಲಿದ್ದರೂ, ನಾವು ಯಾವ ಧರ್ಮವನ್ನು ಅನುಸರಿಸುತ್ತಿದ್ದೇವೆ, ಯಾವ ಹಾಡಿಗೆ ಡ್ಯಾನ್ಸ್​ ಮಾಡುತ್ತೇವೆ ಇವೆಲ್ಲ ಮುಖ್ಯವಲ್ಲ, ‘ನಾವೆಲ್ಲರೂ ಪ್ರೀತಿ, ಶಾಂತಿ, ಸಂಸ್ಕೃತಿಯಿಂದ ಬೆಳೆಯಬೇಕು ಅದನ್ನು ರೂಢಿಸಿಕೊಳ್ಳಬೇಕು’ ಎಂದಿದ್ದಾರೆ. ವೇದಿಕೆಯಲ್ಲಿ ಅವರು ತಮ್ಮ ‘ದಿಲ್ವಾಲೆ ದುಲ್ಹನಿಯಾ ಲೇ ಜಾಯೇಂಗೆ’ ಸಿನಿಮಾದಲ್ಲಿನ ಸೀನ್​ನಂತೆ ಕೈ ತೋಳುಗಳನ್ನ ಚಾಚುವ ಮೂಲಕ ಮತ್ತೊಮ್ಮೆ ಅದನ್ನು ಮರುಸೃಷ್ಟಿಸಿದರು.

ಇದನ್ನೂ ಓದಿ:Pathaan Teaser: ಧೂಳೆಬ್ಬಿಸುತ್ತಿದೆ ‘ಪಠಾಣ್​’ ಟೀಸರ್​; ಶಾರುಖ್​ ಖಾನ್​ ಅವತಾರ ಕಂಡು ಫ್ಯಾನ್ಸ್​ ಫಿದಾ

ಈ ಸಮಾರಂಭದಲ್ಲಿ ಶಾರುಖ್​ ಕಪ್ಪು ಅವತಾರದಲ್ಲಿ ಕಾಣಿಸಿಕೊಂಡಿದ್ದರು, ತಮ್ಮ ‘ಓಂ ಶಾಂತಿ ಓಂ’ ಸಿನಿಮಾದ ಜೊತೆ ಬಾಜಿಗರ್​ನ ಡೈಲಾಗ್​ಗಳಿಂದ ಅಭಿಮಾನಿಗಳನ್ನ ರಂಜಿಸಿದರು. ಇನ್ನು ಅವರ ಅಭಿಮಾನಿಯೊಬ್ಬರು ಈ ಇವೆಂಟ್​ನ ಎಲ್ಲಾ ದೃಶ್ಯಗಳಿಗೆ ‘ಅವರು ಎಲ್ಲಾ ಪ್ರಶಸ್ತಿಗೆ ಅರ್ಹರು’ ಎಂದು ಟ್ವಿಟರ್​ನಲ್ಲಿ ಬರೆದಿದ್ದಾರೆ. ಮತ್ತೊಬ್ಬರು ‘ಜಸ್ಟ್ ಕಿಂಗ್​ ಬೀಯಿಂಗ್​ ಕಿಂಗ್​’ ಎಂದು ಹೇಳಿದ್ದಾರೆ.

ಇನ್ನು ಶಾರುಖ್​ ಖಾನ್​ ಅವರು ನಾಲ್ಕು ವರ್ಷಗಳ ಕಾಲ ಸಿನಿಮಾದಿಂದ ದೂರ ಉಳಿದಿದ್ದರು, ಈಗ ‘ಪಠಾಣ್’ ಸಿನಿಮಾದ ಮೂಲಕ ಕಂಬ್ಯಾಕ್​ ಮಾಡಲಿದ್ದಾರೆ. ಈ ಚಿತ್ರದ ಟೀಸರ್​ನಲ್ಲಿ ಶಾರುಖ್ ಸಿಕ್ಸ್​ಪ್ಯಾಕ್​ನೊಂದಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್​ ಖುಷ್​ ಆಗಿದ್ದಾರೆ. ಈ ಸಿನಿಮಾವು ಜನವರಿ 25 ರಂದು ರಿಲೀಸ್​ ಆಗಲಿದ್ದು ದೊಡ್ಡ ಮಟ್ಟದ ಸಕ್ಸಸ್ ಕಾಣುವ ನಿರೀಕ್ಷೆಯಲ್ಲಿದೆ ಚಿತ್ರತಂಡ.

ಇನ್ನಷ್ಟು ಮನರಂಜನಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:44 pm, Sat, 12 November 22

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ