AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ದೇವರಕೊಂಡ ಫ್ಯಾನ್ಸ್​ಗೆ ಖುಷಿ ಸುದ್ದಿ ಕೊಟ್ಟ ‘ಕಿಂಗ್ಡಮ್’ ನಿರ್ದೇಶಕ; ಬರಲಿದೆ ಎರಡನೇ ಪಾರ್ಟ್

‘ಕಿಂಗ್ಡಮ್’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ, ನಿರ್ದೇಶಕ ಗೌತಮ್ ತಿನ್ನನುರಿ ಅವರು ಕಿಂಗ್ಡಮ್ 2 ಮತ್ತು ಒಂದು ಸ್ಪಿನ್ ಆಫ್ ಸಿನಿಮಾಗಳನ್ನು ಮಾಡುವುದಾಗಿ ಘೋಷಿಸಿದ್ದಾರೆ. ಮೊದಲ ಭಾಗದಲ್ಲಿ ಪರಿಚಯಿಸಲಾದ ಸೇತು ಪಾತ್ರವನ್ನು ಕೇಂದ್ರೀಕರಿಸಿ ಒಟಿಟಿಗಾಗಿ ಒಂದು ಪ್ರೀಕ್ವೆಲ್ ಕೂಡ ತಯಾರಾಗಲಿದೆ. ಭವಿಷ್ಯದಲ್ಲಿ ಕಿಂಗ್ಡಮ್ 3 ಕೂಡ ಬರಬಹುದು ಎಂಬ ಸುಳಿವು ನೀಡಿದ್ದಾರೆ.

ವಿಜಯ್ ದೇವರಕೊಂಡ ಫ್ಯಾನ್ಸ್​ಗೆ ಖುಷಿ ಸುದ್ದಿ ಕೊಟ್ಟ ‘ಕಿಂಗ್ಡಮ್’ ನಿರ್ದೇಶಕ; ಬರಲಿದೆ ಎರಡನೇ ಪಾರ್ಟ್
ವಿಜಯ್
ರಾಜೇಶ್ ದುಗ್ಗುಮನೆ
|

Updated on: Aug 04, 2025 | 12:48 PM

Share

‘ಕಿಂಗ್ಡಮ್’ ಸಿನಿಮಾ ಯಶಸ್ಸಿನ ಬಳಿಕ ನಿರ್ದೇಶಕ ಗೌತಮ್ ತಿನ್ನನುರಿ ಅವರು ಒಂದು ಭರ್ಜರಿ ಅಪ್​ಡೇಟ್ ಕೊಟ್ಟಿದ್ದಾರೆ. ಈ ಸಿನಿಮಾ ಗೆಲುವಿನ ಬೆನ್ನಲ್ಲೇ ‘ಕಿಂಗ್ಡಮ್ 2’ (Kingdom Movie ) ಬರಲಿದೆ ಎಂದು ಹೇಳಿದ್ದಾರೆ. ಜೊತೆಗೆ ಇದೇ ಕಥೆ ಇಟ್ಟುಕೊಂಡು ಒಂದು ಸ್ಪಿನ್ ಆಫ್ ಮಾಡುವ ಆಲೋಚನೆ ಕೂಡ ನಿರ್ದೇಶಕರಿಗೆ ಇದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದೊಂದು ದಿನ ‘ಕಿಂಗ್ಡಮ್ 3’ ಕೂಡ ಮೂಡಿ ಬರಲಿದೆಯಂತೆ.

‘ಕಿಂಗ್ಡಮ್’ ಸಿನಿಮಾ ಜುಲೈ 31ರಂದು ರಿಲೀಸ್ ಆಯಿತು. ಮೊದಲ ದಿನವೇ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 33 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾದ ಕೆಲಸಗಳು ಪೂರ್ಣಗೊಳ್ಳದಿದ್ದ ಕಾರಣ ಪ್ರಚಾರದಲ್ಲಿ ಗೌತಮ್ ಭಾಗಿ ಆಗಿರಲಿಲ್ಲ. ಈಗ ಸಿನಿಮಾ ಬಳಿಕ ಅವರು ಅಪ್​ಡೇಟ್ ಒಂದನ್ನು ನೀಡಿದ್ದಾರೆ.

‘ಕಿಂಗ್ಡಮ್’ ಸಿನಿಮಾ ಎರಡು ಭಾಗದಲ್ಲಿ ಮಾಡುವ ಆಲೋಚನೆ ಗೌತಮ್​ಗೆ ಇತ್ತು. ಮೊದಲ ಪಾರ್ಟ್​​ನ ಕೊನೆಯಲ್ಲಿ ಸೇತು ಹೆಸರಿನ ವಿಲನ್ ಪಾತ್ರ ಪರಿಚಯಿಸಲಾಗಿದೆ. ಈತ ವಿಲನ್​ನ ಅಣ್ಣ. ಎರಡನೇ ಪಾರ್ಟ್​ನಲ್ಲಿ ಸೂರಿ (ವಿಜಯ್ ದೇವರಕೊಂಡ) ಹಾಗೂ ಸೇತು ನಡುವಿನ ತಿಕ್ಕಾಟವನ್ನು ಹೈಲೈಟ್ ಮಾಡಲಾಗುತ್ತದೆ. ಈ ಸಿನಿಮಾ ಮಾಡುವುದಕ್ಕೂ ಮೊದಲು ಸೇತು ಪಾತ್ರವನ್ನು ಕೇಂದ್ರೀಕರಿಸಿ ಒಟಿಟಿಗಾಗಿ ಗೌತಮ್ ಒಂದು ಸಿನಿಮಾ ಮಾಡಲಿದ್ದಾರೆ.

ಇದನ್ನೂ ಓದಿ
Image
ಸಿನಿಮಾ ಗೆಲ್ಲದಿದ್ದರೂ 500 ಕೋಟಿ ರೂ. ಒಡೆಯ ಅರ್ಬಾಜ್ ಖಾನ್
Image
ಲಾಭದಲ್ಲೇ ಇದೆ ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ?
Image
ಭಾನುವಾರ ಒಂದೇ ದಿನ ಬಜೆಟ್​ಗೂ ಡಬಲ್ ಕಲೆಕ್ಷನ್ ಮಾಡಿದ ‘ಸು ಫ್ರಮ್ ಸೋ’
Image
‘ಸು ಫ್ರಮ್ ಸೋ’ ಗೆದ್ದ ಖುಷಿಯಲ್ಲಿ ಬಾವ ಹೇಳೋದೇನು? ಯಾರಿವರು?

ಮೊದಲ ಪಾರ್ಟ್​​ನಲ್ಲಿ ಸಮಯದ ಅಭಾವದಿಂದ ಅನೇಕ ದೃಶ್ಯಗಳನ್ನು ಟ್ರಿಮ್ ಮಾಡಲಾಗಿದೆ. ಹೀಗಾಗಿ, ಒಟಿಟಿ ಪ್ರೀಕ್ವೆಲ್ ಈ ಗ್ಯಾಪ್​ನ ಮುಚ್ಚಲಿದೆ. ಹೀಗಾಗಿ, ಎರಡನೇ ಪಾರ್ಟ್​ ಮಾಡುವುದಕ್ಕೂ ಮೊದಲು ಒಟಿಟಿಗಾಗಿ ಒಂದು ವಿಶೇಷ ಸಿನಿಮಾ ರೆಡಿ ಆಗಲಿದೆ. ನಿರ್ಮಾಪಕ ನಾಗ ವಂಶಿ ಅವರು ಈ ವಿಚಾರವನ್ನು ಖಚಿತಪಡಿಸಿದ್ದಾರೆ. ಆದರೆ, ಸೇತು ಪಾತ್ರವನ್ನು ಯಾರು ಮಾಡುತ್ತಾರೆ ಎಂಬ ವಿಚಾರ ಇನ್ನೂ ರಿವೀಲ್ ಆಗಿಲ್ಲ.

ಇದನ್ನೂ ಓದಿ:‘ಕಿಂಗ್ಡಮ್’ ಪರಿಣಾಮ, ನಟಿ ಭಾಗ್ಯಶ್ರೀಗೆ ಸಿಕ್ಕಿತು ಮತ್ತೊಂದು ದೊಡ್ಡ ಅವಕಾಶ 

ಈ ಚಿತ್ರಕ್ಕೆ ಮೂರು ಪಾರ್ಟ್ ಮಾಡುವ ಆಲೋಚನೆ ಕೂಡ ಇದೆಯಂತೆ. ಇದು ಪ್ರೀಕ್ವೆಲ್ ಆಗಿರಲಿದೆ. ‘ಕಿಂಗ್ಡಮ್’ ಹೇಗೆ ಹುಟ್ಟಿತು ಎಂಬಿತ್ಯಾದಿ ಕಥೆಗಳ ಮೇಲೆ ಸಿನಿಮಾ ಸಾಗಲಿದೆ. ಆದರೆ, ಇನ್ನೂ ಯಾವುದೂ ಫೈನಲ್ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು