AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು

ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಕೆಲವರು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಅಂಥವರನ್ನ ಗುರುತಿಸಿ ಕಿರಣ್ ರಾಜ್ ಊಟ ನೀಡುತ್ತಿದ್ದಾರೆ. ನಿತ್ಯ ಸುಮಾರು ಒಂದು ಸಾವಿರ ಜನಕ್ಕೆ ಅವರ ಕಡೆಯಿಂದ ಊಟ ನೀಡಲಾಗುತ್ತಿದೆ.

‘ಕನ್ನಡತಿ’ ಹೀರೋ ಕಿರಣ್​ ರಾಜ್​ ದುಡಿಮೆಯ ಶೇ.40ರಷ್ಟು ಹಣ ಬಡವರಿಗೆ ಮೀಸಲು
ಕಿರಣ್​ ರಾಜ್​
ರಾಜೇಶ್ ದುಗ್ಗುಮನೆ
|

Updated on:May 14, 2021 | 5:41 PM

Share

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿದೆ. ಈ ಸಂದರ್ಭದಲ್ಲಿ ಅನೇಕ ಸೆಲೆಬ್ರಿಟಿಗಳು ಮುಂದೆಬಂದು ಸಹಾಯ ಹಸ್ತ ಚಾಚಿದ್ದಾರೆ. ಕನ್ನಡತಿ ಧಾರಾವಾಹಿ ನಟ ಕಿರಣ್​ ರಾಜ್​ ಕೂಡ ಕೊವಿಡ್​ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ತೊಂದರೆ ಎಂದವರಿಗೆ ಅವರು ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅವರು ಅಚ್ಚರಿಯ ವಿಚಾರ ಒಂದನ್ನು ಹೇಳಿಕೊಂಡಿದ್ದಾರೆ.

ಕಿರಣ್​ ರಾಜ್​ ಕೊವಿಡ್​ ಸಂದರ್ಭದಲ್ಲಿ ಮಾತ್ರ ಸಹಾಯಕ್ಕೆ ನಿಂತವರಲ್ಲ. ಕೆಲ ವರ್ಷಗಳ ಹಿಂದೆಯೇ ‘ಕಿರಣ್​ ರಾಜ್​ ಫೌಂಡೇಷನ್’ ಸ್ಥಾಪಿಸಿ ಸಾಕಷ್ಟು ಜನರ ನೋವಿಗೆ ಸ್ಪಂದಿಸಿದ್ದಾರೆ. ಅನಾಥಾಶ್ರಮದ ಮಕ್ಕಳಿಗೆ ಊಟ, ಕಷ್ಟ ಎಂದು ಬಂದವರಿಗೆ ಸಹಾಯ ಮಾಡಿದ್ದಾರೆ. ಈಗ ಕೊರೊನಾ ಸಂದರ್ಭದಲ್ಲಿ ತಮ್ಮ ಸಹಾಯವನ್ನು ಅವರು ಹೆಚ್ಚಿಸಿದ್ದಾರೆ.

ಕಿರಣ್​ ರಾಜ್​ ಹಿಂದಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಇದಕ್ಕಾಗಿ ಅವರು ಮುಂಬೈಗೆ ತೆರಳಿದ್ದರು.  ಕಿರಣ್​ ರಾಜ್​ ಫೌಂಡೇಷನ್​ ಕನಸು ಆರಂಭವಾಗಿದ್ದು ಅಲ್ಲಿಯೇ. ‘ನಾನು ಆಗ ಮುಂಬೈನಲ್ಲಿದ್ದೆ. ಅಲ್ಲಿ ಒಂದು ಹೊತ್ತಿನ ಊಟಕ್ಕೆ ಕಷ್ಟಪಡುವವರನ್ನು ನೋಡಿದ್ದೇನೆ. ನಮ್ಮ ದೇಶದಲ್ಲಿ ಈ ರೀತಿ ಸಾಕಷ್ಟು ಮಂದಿ ಇದ್ದಾರೆ ಎಂಬುದು ಗೊತ್ತಿತ್ತು. ನಾನು ಜೀವನದಲ್ಲಿ ಒಂದು ಹಂತಕ್ಕೆ ತಲುಪಿದ ಮೇಲೆ ಕಷ್ಟದಲ್ಲಿರುವವರ ಸಹಾಯಕ್ಕೆ ನಿಲ್ಲಬೇಕು ಎಂದುಕೊಂಡಿದ್ದೆ’ ಎಂದಿದ್ದಾರೆ ಕಿರಣ್​ ರಾಜ್​. ಅಷ್ಟೇ ಅಲ್ಲ ಅವರು ಅಂದುಕೊಂಡಿದ್ದನ್ನು ಮಾಡಿ ತೋರಿಸಿದ್ದಾರೆ.

ಕಿರಣ್​ ರಾಜ್​ ತಮ್ಮ ಒಟ್ಟೂ ಆದಾಯದಲ್ಲಿ ಶೇ.40ರಷ್ಟು ಗಳಿಕೆಯನ್ನು ಕಷ್ಟದಲ್ಲಿರುವವರ ಸಹಾಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿಶೇಷ ಎಂದರೆ, ತಮ್ಮ ಫೌಂಡೇಷನ್​ಗೆ ಬೇರೆಯವರಿಂದ ಹಣ ಪಡೆದಿಲ್ಲ. ತಮ್ಮ ದುಡಿಮೆಯ ಹಣವನ್ನೇ ಅವರು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಕೊರೊನಾ ಸಂಕಷ್ಟ ಹೆಚ್ಚಿದ ನಂತರದಲ್ಲಿ ಸಾಕಷ್ಟು ಜನರು ಧನಸಹಾಯ ಮಾಡೋಕೆ ಮುಂದೆ ಬಂದಿದ್ದರಂತೆ.

ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಕೆಲವರು ಹೊತ್ತಿನ ಊಟಕ್ಕೂ ಕಷ್ಟಪಡುತ್ತಿದ್ದಾರೆ. ಅಂಥವರನ್ನ ಗುರುತಿಸಿ ಕಿರಣ್ ರಾಜ್ ಊಟ ನೀಡುತ್ತಿದ್ದಾರೆ. ನಿತ್ಯ ಸುಮಾರು ಒಂದು ಸಾವಿರ ಜನಕ್ಕೆ ಅವರ ಕಡೆಯಿಂದ ಊಟ ನೀಡಲಾಗುತ್ತಿದೆ. ಕಿರಣ್​ ರಾಜ್​ ಕೆಲಸಕ್ಕೆ ಎಲ್ಲಾ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Kiran Raj: ಕೊರೊನಾ ಸಂಕಷ್ಟದಲ್ಲಿ ಪ್ರತಿದಿನ ಸಾವಿರ ಜನರಿಗೆ ಊಟ ಹಾಕುತ್ತಿರುವ ‘ಕನ್ನಡತಿ’ ಕಿರಣ್ ರಾಜ್

ನಟ ಚಂದು ಗೌಡ ಮತ್ತು ಕಿರಣ್​ ರಾಜ್ ಮನೆಗೆ ಬಂತು ಐಷಾರಾಮಿ ಕಾರು!

Published On - 5:39 pm, Fri, 14 May 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ