ಜಯಂ ರವಿ ವಿಚ್ಛೇದನ: 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ನಟ

2009ರಲ್ಲಿ ಜಯಂ ರವಿ ಮತ್ತು ಆರತಿ ಅವರು ಮದುವೆ ಆಗಿದ್ದರು. 15 ವರ್ಷಗಳಿಂದ ಸಂಸಾರ ಮಾಡಿಕೊಂಡಿದ್ದ ಅವರಿಬ್ಬರು ಈಗ ಡಿವೋರ್ಸ್​ ಪಡೆದಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಜಯಂ ರವಿ ಅವರು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಈ ಸಮಯದಲ್ಲಿ ತಮ್ಮ ಖಾಸಗಿತನವನ್ನು ಗೌರವಿಸಿ ಎಂದು ಎಲ್ಲರಲ್ಲೂ ಅವರು ಮನವಿ ಮಾಡಿಕೊಂಡಿದ್ದಾರೆ.

ಜಯಂ ರವಿ ವಿಚ್ಛೇದನ: 15 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ನಟ
ಜಯಂ ರವಿ, ಆರತಿ
Follow us
|

Updated on: Sep 09, 2024 | 3:13 PM

ತಮಿಳಿನ ಖ್ಯಾತ ನಟ ಜಯಂ ರವಿ ಅವರು ಡಿವೋರ್ಸ್​ ಪಡೆದುಕೊಂಡಿದ್ದಾರೆ. ಪತ್ನಿ ಆರತಿ ಜೊತೆಗಿನ ಸಂಸಾರಕ್ಕೆ ಅವರು ಅಂತ್ಯ ಹಾಡಿದ್ದಾರೆ. ಜಯಂ ರವಿ ಮತ್ತು ಆರತಿ ನಡುವಿನ ದಾಂಪತ್ಯ ಜೀವನಕ್ಕೆ ಪೂರ್ಣ ವಿರಾಮ ಬಿದ್ದಿದೆ. 15 ವರ್ಷಗಳ ಹಿಂದೆ ಜಯಂ ರವಿ ಮತ್ತು ಆರತಿ ಅವರು ಮದುವೆ ಆಗಿದ್ದರು. ಈ ಜೋಡಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಇಷ್ಟು ವರ್ಷಗಳ ಬಳಿಕ ರವಿ ಮತ್ತು ಆರತಿ ಅವರು ಡಿವೋರ್ಸ್​ ಪಡೆದಿದ್ದು ಅವರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ವಿಚ್ಛೇದನದ ಸುದ್ದಿಯನ್ನು ಜಯಂ ರವಿ ತಿಳಿಸಿದ್ದಾರೆ.

‘ಹಲವು ಅಧ್ಯಾಯಗಳನ್ನು ಹೊಂದಿದ ಪಯಣವೇ ಜೀವನ. ಎಲ್ಲ ಅಧ್ಯಾಯಕ್ಕೂ ಅದರದ್ದೇ ಆದ ಅವಕಾಶ ಮತ್ತು ಸವಾಲುಗಳು ಇವೆ. ನೀವು ನನ್ನ ತೆರೆ ಮೇಲಿನ ಮತ್ತು ತೆರೆ ಹಿಂದಿನ ಜೀವನವನ್ನು ಗಮನಿಸುತ್ತಾ ಬಂದಿದ್ದೀರಿ. ನಾನು ಯಾವಾಗಲೂ ಅಭಿಮಾನಿಗಳು ಮತ್ತು ಮಾಧ್ಯಮದವರ ಜೊತೆ ಪಾರದರ್ಶಕವಾಗಿ ನಡೆದುಕೊಳ್ಳಲು ಪ್ರಯತ್ನಿಸಿದ್ದೇನೆ. ಇಂದು ನಾನು ಭಾರವಾದ ಮನಸ್ಸಿನಿಂದ ವೈಯಕ್ತಿಕ ಜೀವನದ ಈ ವಿಷಯ ತಿಳಿಸುತ್ತಿದ್ದೇನೆ’ ಎಂದು ಜಯಂ ರವಿ ಅವರು ತಮ್ಮ ಬರಹ ಆರಂಭಿಸಿದ್ದಾರೆ.

‘ಸಾಕಷ್ಟು ಯೋಚಿಸಿದ ಬಳಿಕ ಆರತಿ ಜೊತೆ ವಿಚ್ಛೇದನ ಪಡೆಯಲು ನಿರ್ಧರಿಸಿದೆ. ಇದು ಅವಸರದಲ್ಲಿ ತೆಗೆದುಕೊಂಡ ನಿರ್ಧಾರ ಎಲ್ಲ. ಎಲ್ಲರ ಒಳಿತಿಗಾಗಿ ಈ ನಿರ್ಧಾರ. ಈ ಕಷ್ಟದ ಸಂದರ್ಭದಲ್ಲಿ ನನ್ನ ಮತ್ತು ನನ್ನ ಕುಟುಂಬದವರ ಖಾಸಗಿತನವನ್ನು ಗೌರವಿಸಬೇಕು ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಈ ವಿಚಾರದಲ್ಲಿ ಯಾವುದೇ ಗಾಸಿಪ್​, ವದಂತಿ, ಊಹಾಪೋಹ, ಆರೋಪ ಮಾಡಬೇಡಿ. ಇದು ಖಾಸಗಿಯಾಗಿಯೇ ಇರಲಿ’ ಎಂದು ಜಯಂ ರವಿ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: 22 ವರ್ಷದ ಹಿಂದೆ ಡಿವೋರ್ಸ್​ ನೀಡಿದ ಮೊದಲ ಪತ್ನಿ ಜತೆ ಈಗ ಆಮಿರ್ ಖಾನ್ ಪಾರ್ಟಿ

‘ಅಭಿಮಾನಿಗಳಿಗೆ ಮನರಂಜನೆ ನೀಡುವುದೇ ನನ್ನ ಮೊದಲ ಆದ್ಯತೆ ಆಗಿರುತ್ತದೆ. ನಾನು ಎಂದೆಂದಿಗೂ ನಿಮ್ಮ ಜಯಂ ರವಿ ಆಗಿರುತ್ತೇನೆ. ನಿಮ್ಮ ಬೆಂಬಲವೇ ನನಗೆ ಸರ್ವಸ್ವ. ಈ ಎಲ್ಲ ವರ್ಷಗಳಲ್ಲಿ ನೀವು ನನಗೆ ನೀಡಿದ ಪ್ರೀತಿಗೆ ಚಿರಋಣಿ. ಅರ್ಥ ಮಾಡಿಕೊಂಡು ಬೆಂಬಲ ಮುಂದುವರಿಸಿದ್ದಕ್ಕೆ ಧನ್ಯವಾದಗಳು’ ಎಂದು ಜಯಂ ರವಿ ಅವರು ಬರಹ ಪೂರ್ಣಗೊಳಿಸಿದ್ದಾರೆ.

ಹಲವಾರು ಸಿನಿಮಾಗಳಲ್ಲಿ ನಟಿಸಿ ಜಯಂ ರವಿ ಅವರು ಫೇಮಸ್​ ಆಗಿದ್ದಾರೆ. ಕಾಲಿವುಡ್​ನಲ್ಲಿ ಬ್ಯುಸಿ ನಟನಾಗಿ ಅವರು ಸಕ್ರಿಯರಾಗಿದ್ದಾರೆ. ಆರತಿ ಜೊತೆ ಅವರು 2009ರಲ್ಲಿ ಮದುವೆ ಆಗಿದ್ದರು. ಇಂದು (ಸೆಪ್ಟೆಂಬರ್​ 9) ಅವರು ತಮ್ಮ ವಿಚ್ಛೇದನವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ