AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಹಣ ಕೇಳಿದ್ದಕ್ಕೆ ಕೊಲೆ ಯತ್ನ; ಮಲಯಾಳಂ ನಟನ ಬಂಧನ

ವಿನೀತ್ ಅವರಿಗೆ ಈಗ 45 ವರ್ಷ ವಯಸ್ಸು. ಅವರು ಮಲಯಾಳಂ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗುರುತಿಸಿಕೊಂಡಿದ್ದಾರೆ.

ಕೊಟ್ಟ ಹಣ ಕೇಳಿದ್ದಕ್ಕೆ ಕೊಲೆ ಯತ್ನ; ಮಲಯಾಳಂ ನಟನ ಬಂಧನ
ವಿನೀತ್
TV9 Web
| Edited By: |

Updated on: Jul 27, 2022 | 3:07 PM

Share

ಮಲಯಾಳಂ ನಟ ವಿನೀತ್ ಥಟ್ಟಿಲ್ (Vineeth Thattil ) ಅವರು ಸುದ್ದಿಯಲ್ಲಿದ್ದಾರೆ. ಆಳಪ್ಪುಳದ ಅಲೆಕ್ಸ್​ ಹೆಸರಿನ ವ್ಯಕ್ತಿಯನ್ನು  ಕೊಲೆ ಮಾಡಲು ವಿನೀತ್ ಪ್ರಯತ್ನಿಸಿದ್ದರು. ಹೀಗಾಗಿ ಅವರನ್ನು ಬಂಧಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ವ್ಯಕ್ತಿಯು ವಿನೀತ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪೃಥ್ವಿರಾಜ್​ ಸುಕುಮಾರನ್​ ನಟನೆಯ ‘ಅಯ್ಯಪ್ಪನುಂ ಕೋಶಿಯುಂ’ (Ayyappanum Koshiyum) ಚಿತ್ರದಲ್ಲಿ ವಿನೀತ್ ನಟಿಸಿದ್ದರು.

ವಿನೀತ್ ಅವರಿಗೆ ಈಗ 45 ವರ್ಷ ವಯಸ್ಸು. ಅವರು ಮಲಯಾಳಂ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ಗುರುತಿಸಿಕೊಂಡಿದ್ದಾರೆ. ಅಲೆಕ್ಸ್ ಎಂಬ ವ್ಯಕ್ತಿಯ ಮೇಲೆ ಜುಲೈ 24ರಂದು ವಿನೀತ್ ಹಲ್ಲೆ ಮಾಡಿದ್ದರು. ಹಲ್ಲೆಯ ತೀವ್ರತೆಗೆ ವಿನೀತ್ ಆಸ್ಪತ್ರೆಗೆ ದಾಖಲಾಗಿದ್ದರು. ಭಾರತೀಯ ದಂಡ ಸಂಹಿತೆ 308ರ ಅಡಿಯಲ್ಲಿ ವಿನೀತ್ ವಿರುದ್ಧ ಕೇಸ್ ದಾಖಲಾಗಿದೆ.

‘ಅಲೆಕ್ಸ್ ಅವರು ದೂರು ದಾಖಲು ಮಾಡಿದ್ದಾರೆ. ಅವರ ದೂರನ್ನು ಆಧರಿಸಿ ವಿನೀತ್ ಅವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ಬಂಧಿಸಿದ್ದೇವೆ. ವಿನೀತ್ ಅವರು ಅಲೆಕ್ಸ್​​ಗೆ ಸ್ವಲ್ಪ ಹಣ ನೀಡಬೇಕಿತ್ತು. ಈ ಹಣವನ್ನು ಕೊಡುವಂತೆ ಅಲೆಕ್ಸ್ ಅವರು ವಿನೀತ್​ಗೆ ಕೇಳಿದ್ದರು. ಈ ವೇಳೆ ವಿನೀತ್ ಹಲ್ಲೆ ನಡೆಸಿದ್ದಾರೆ. ವಿನೀತ್ ಅವರನ್ನು ಶೀಘ್ರವೇ ಕೋರ್ಟ್​ ಎದುರು ಹಾಜರುಪಡಿಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ‘ಭೀಮ್ಲಾ ನಾಯಕ್​’​ ಚಿತ್ರ ನೋಡಿ ಕುಣಿದು ಕುಪ್ಪಳಿಸಿದ ಪವನ್​ ಕಲ್ಯಾಣ್ ಫ್ಯಾನ್ಸ್​

ವಿನೀತ್ ಅವರು ಚಿತ್ರರಂಗಕ್ಕೆ ಕಾಲಿಟ್ಟು ಕೆಲವು ವರ್ಷಗಳು ಕಳೆದಿವೆ. ಅವರ ಮೊದಲ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರ 2020ರಲ್ಲಿ ತೆರೆಗೆ ಬಂತು. ಪೃಥ್ವಿರಾಜ್ ಸುಕುಮಾರನ್​ ಹಾಗೂ ಬಿಜು ಮೆನನ್ ಈ ಸಿನಿಮಾದಲ್ಲಿ ಮುಖ್ಯಭೂಮಿಕೆಯಲ್ಲಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ವಿನೀತ್ ಕೂಡ ನಟಿಸಿದ್ದರು. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಹೆಸರು ಬಂತು. ಆದರೆ, ಈಗ ಅವರು ಮಾಡಿಕೊಂಡಿರುವ ಎಡವಟ್ಟಿನಿಂದ ವೃತ್ತಿ ಜೀವನಕ್ಕೆ ಕಪ್ಪುಚುಕ್ಕೆ ಬಿದ್ದಿದೆ. ಹಲವು ಆಫರ್​ಗಳು ಅವರ ಕೈತಪ್ಪುವ ಸಾಧ್ಯತೆ ಇದೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ