AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಿಂದ ಬರುತ್ತಿದ್ದಂತೆ ಕಾರು ಖರೀದಿಸಿದ ಅಜಿತ್; ನೀವಂದುಕೊಂಡಷ್ಟು ದುಬಾರಿ ಅಲ್ಲ

ಕಾಲಿವುಡ್ ನಟ ಅಜಿತ್ ಕುಮಾರ್ ದುಬೈನಿಂದ ಚೆನ್ನೈಗೆ ಮರಳಿದ್ದಾರೆ. ಇತ್ತೀಚೆಗೆ ಯುದ್ಧದ ಪರಿಸ್ಥಿತಿಯಿಂದಾಗಿ ದುಬೈನಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಜಿತ್, ವಾಪಸ್ ಬಂದ ನಂತರ ಸಾಯಿಬಾಬ ದೇವಸ್ಥಾನಕ್ಕೆ ಭೇಟಿ ನೀಡಿದರು. ಇದಾದ ಬಳಿಕ ಅವರು 24 ಲಕ್ಷ ರೂಪಾಯಿ ಮೌಲ್ಯದ ಹೊಸ ಮಹೀಂದ್ರಾ BE6 ಎಲೆಕ್ಟ್ರಿಕ್ ಕಾರು ಖರೀದಿಸಿದ್ದಾರೆ.

ದುಬೈನಿಂದ ಬರುತ್ತಿದ್ದಂತೆ ಕಾರು ಖರೀದಿಸಿದ ಅಜಿತ್; ನೀವಂದುಕೊಂಡಷ್ಟು ದುಬಾರಿ ಅಲ್ಲ
ಅಜಿತ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Mar 14, 2026 | 3:25 PM

Share

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರು ರೇಸ್​​ಗಾಗಿ ದುಬೈನಲ್ಲಿ ಇದ್ದರು. ಆದ್ರೆ, ಅಮೆರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧ ರೀತಿಯ ಪರಿಸ್ಥಿತಿಯಿಂದ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟಾಗಿತ್ತು. ಈ ಕಾರಣದಿಂದ ಅಜಿತ್ ಅವರು ದುಬೈನಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ಈಗ ಅವರು ಚೆನ್ನೈಗೆ ಮರಳಿದ್ದಾರೆ. ಇಲ್ಲಿಗೆ ಆಗಮಿಸುತ್ತಿದ್ದಂತೆ ಅವರು 24 ಲಕ್ಷ ರೂಪಾಯಿ ಕಾರು ಖರೀದಿ ಮಾಡಿದ್ದಾರೆ.

ಅಜಿತ್ ಅವರು ಚೆನ್ನೈಗೆ ಮರಳಿದ ಬಳಿಕ ಸಾಯಿ ಬಾಬ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಸಾಯಿ ಬಾಬಾ ಮಂದಿರದವರೇ ಈ ವಿಡಿಯೋನ ಹಂಚಿಕೊಂಡಿದ್ದರು. ಬಿಗಿ ಭದ್ರತೆ ಜೊತೆ ಅಜಿತ್ ಅವರು ದೇವಸ್ಥಾನಕ್ಕೆ ತೆರಳಿದ್ದರು. ಆ ಬಳಿಕ ಅವರು ಚೆನ್ನೈಗೆ ಮರಳಿದ್ದಾರೆ ಎನ್ನಲಾಗಿದೆ.

ಅವರು ಮಹಿಂದ್ರ ಕಂಪನಿಯ ಬಿಇ6 ಕಾರನ್ನು ಖರೀದಿ ಮಾಡಿದ್ದಾರೆ. ಮಹಿಂದ್ರಾ ಎಲೆಕ್ಟ್ರಿಕ್ ಈ ವಿಷಯವನ್ನು ರಿವೀಲ್ ಮಾಡಿದೆ. ಕಂಪನಿಯ ವೆಬ್​ಸೈಟ್ ಪ್ರಕಾರ ಅಜಿತ್ ಖರೀದಿಸಿದ ಕಾರಿನ ಬೆಲೆ 24 ಲಕ್ಷ ರೂಪಾಯಿ. ಅವರು ಟ್ಯಾಂಗೋ ರೆಡ್ ಬಣ್ಣದ ಕಾರು ಇದಾಗಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಇದನ್ನೂ ಓದಿ: ‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್

ಅಜಿತ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ಸ್ಪೋರ್ಟ್ಸ್​ ಬಗ್ಗೆಯೂ ಆಸಕ್ತಿ ಇದೆ. ಅವರ ಬಳಿ ಫೇರಾರಿ ಸೇರಿದಂತೆ ಸಾಕಷ್ಟು ದುಬಾರಿ ಕಾರುಗಳು ಇವೆ. ಆದಾಗ್ಯೂ ಅವರು ಮಹಿಂದ್ರಾ ಕಾರನ್ನು ಆಯ್ಕೆ ಮಾಡಿಕೊಂಡಿದ್ದು ಸಾಕಷ್ಟು ಖುಷಿ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:56 pm, Sat, 14 March 26

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ