AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ, ನಾಗಾರ್ಜುನ ಬಗ್ಗೆ ಅಶ್ಲೀಲ ಹೇಳಿಕೆ ನೀಡಿ ವಿವಾದ ಎಬ್ಬಿಸಿದ ಸಚಿವೆ ಕೊಂಡ ಸುರೇಖಾ

ಮಾವ-ಸೊಸೆಯ ಬಗ್ಗೆ ಸಚಿವೆ ಕೊಂಡ ಸುರೇಖಾ ಅವರು ಕೀಳು ಮಟ್ಟದ ಹೇಳಿಕೆ ನೀಡಿದ್ದು, ಭಾರಿ ವಿವಾದಕ್ಕೆ ಕಾರಣ ಆಗಿದೆ. ಸಮಂತಾ ರುತ್​ ಪ್ರಭು ಬಗ್ಗೆ ಸುರೇಖಾ ನೀಡಿದ ಹೇಳಿಕೆಯನ್ನು ಅಕ್ಕಿನೇನಿ ನಾಗಾರ್ಜುನ ಅವರು ತೀವ್ರವಾಗಿ ಖಂಡಿಸಿದ್ದಾರೆ. ಅಕ್ಕಿನೇನಿ ಕುಟುಂಬದ ಅಭಿಮಾನಿಗಳು ಕೂಡ ಸುರೇಖಾ ಅವರಿಗೆ ಛೀಮಾರಿ ಹಾಕುತ್ತಿದ್ದಾರೆ.

ಸಮಂತಾ, ನಾಗಾರ್ಜುನ ಬಗ್ಗೆ ಅಶ್ಲೀಲ ಹೇಳಿಕೆ ನೀಡಿ ವಿವಾದ ಎಬ್ಬಿಸಿದ ಸಚಿವೆ ಕೊಂಡ ಸುರೇಖಾ
ಕೊಂಡ ಸುರೇಖಾ, ಸಮಂತಾ, ನಾಗಾರ್ಜುನ
ಮದನ್​ ಕುಮಾರ್​
|

Updated on: Oct 02, 2024 | 8:34 PM

Share

ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಅವರು ಶಾಕಿಂಗ್​ ಹೇಳಿಕೆ ನೀಡಿದ್ದಾರೆ. ಸಮಂತಾ ರುತ್​ ಪ್ರಭು, ನಾಗಾರ್ಜುನ ಮತ್ತು ನಾಗ ಚೈತನ್ಯ ಅವರ ಬಗ್ಗೆ ತೀರಾ ಅಸಭ್ಯ ರೀತಿಯಲ್ಲಿ ಅವರು ಮಾತನಾಡಿದ್ದಾರೆ. ಸಾರ್ವಜನಿಕವಾಗಿ ಕೊಂಡ ಸುರೇಖಾ ಆಡಿರುವ ಮಾತುಗಳಿಗೆ ಎಲ್ಲರಿಂದ ತೀವ್ರ ವಿರೋಧ್ಯ ವ್ಯಕ್ತವಾಗುತ್ತಿದೆ. ಕೆ.ಟಿ. ರಾಮ ರಾವ್​ ಅವರನ್ನು ವಿರೋಧಿಸುವ ಭರದದಲ್ಲಿ ಸುರೇಖಾ ಅವರು ಇಲ್ಲಸಲ್ಲದ ವಿಚಾರಗಳನ್ನು ಎಳೆದು ತಂದಿದ್ದಾರೆ. ನಾಗ ಚೈತನ್ಯ ಮತ್ತು ಸಮಂತಾ ವಿಚ್ಛೇದನ ಪಡೆಯಲು ಕೆ.ಟಿ. ರಾಮ ರಾವ್​ ಕಾರಣ ಎಂದು ಸುರೇಖಾ ಹೇಳಿದ್ದಾರೆ.

‘ಎನ್ ಕನ್ವೆನ್ಷನ್​ನ ಒಡೆಯಬಾರದು ಎಂದರೆ ಸಮಂತಾನ ನನ್ನ ಬಳಿ ಕಳಿಸಿ ಅಂತ ನಾಗಾರ್ಜುನಗೆ ಕೆ.ಟಿ. ರಾಮ ರಾವ್ ಹೇಳಿದ್ದರು. ಕೆ.ಟಿ. ರಾಮ ರಾವ್ ಬಳಿ ಹೋಗು ಅಂತ ಸಮಂತಾಗೆ ನಾಗಾರ್ಜನ ಒತ್ತಾಯ ಮಾಡಿದರು. ಆದರೆ ಸಮಂತಾ ಒಪ್ಪಿಕೊಳ್ಳಲಿಲ್ಲ. ಒಪ್ಪದಿದ್ದರೆ ಮನೆ ಬಿಟ್ಟುಹೋಗು ಅಂತ ನಾಗಾರ್ಜುನ ಹೇಳಿದರು. ಅದಕ್ಕಾಗಿ ನಾಗ ಚೈತನ್ಯಗೆ ಸಮಂತಾ ಡಿವೋರ್ಸ್​ ನೀಡಿದರು’ ಎಂದು ಕೊಂಡ ಸುರೇಖಾ ಹೇಳಿದ್ದಾರೆ.

ಕೊಂಡ ಸುರೇಖಾ ಹೇಳಿದ ಈ ಮಾತಿನಿಂದ ನಾಗಾರ್ಜುನ ಅವರು ಗರಂ ಆಗಿದ್ದಾರೆ. ‘ಗೌರವಾನ್ವಿತ ಸಚಿವೆ ಕೊಂಡ ಸುರೇಖಾ ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ನಿಮ್ಮ ವಿರೋಧಿಗಳನ್ನು ಟೀಕಿಸಲು, ರಾಜಕೀಯದಿಂದ ದೂರ ಇರುವ ಸಿನಿಮಾ ತಾರೆಯರನ್ನು ಬಳಸಿಕೊಳ್ಳಬೇಡಿ. ಇನ್ನೊಬ್ಬರ ಖಾಸಗಿತನವನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ಮಹಿಳೆಯಾಗಿ ನಮ್ಮ ಕುಟುಂಬದ ಮೇಲೆ ನೀವು ಮಾಡಿದ ಆರೋಪಗಳು ಸಂಪೂರ್ಣ ತಪ್ಪು. ಕೂಡಲೇ ನಿಮ್ಮ ಹೇಳಿಕೆ ವಾಪಸ್ಸು ಪಡೆದುಕೊಳ್ಳಿ ಅಂತ ಮನವಿ ಮಾಡುತ್ತೇನೆ’ ಎಂದು ನಾಗಾರ್ಜುನ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ‘ಹೇಮಾ ಸಮಿತಿ ರೀತಿ ಟಾಲಿವುಡ್​ನಲ್ಲೂ ವರದಿ ಪ್ರಕಟವಾಗಲಿ’: ಸಮಂತಾ ಒತ್ತಾಯ

ಸುರೇಖಾ ನೀಡಿದ ಹೇಳಿಕೆಯಿಂದ ಎಲ್ಲರಿಗೂ ಶಾಕ್ ಆಗಿದೆ. ಇಷ್ಟು ದಿನ ಕಳೆದರೂ ಸಮಂತಾ ಮತ್ತು ನಾಗ ಚೈತನ್ಯ ಅವರ ವಿಚ್ಛೇದನಕ್ಕೆ ಕಾರಣ ಏನು ಎಂಬುದು ಬಹಿರಂಗ ಆಗಿಲ್ಲ. ಆ ಬಗ್ಗೆ ತಿಳಿದುಕೊಳ್ಳಲು ಜನರಿಗೆ ಕುತೂಹಲ ಇದೆ. ಈ ನಡುವೆ ಕೊಂಡ ಸುರೇಖಾ ಅವರು ಇಂಥ ಹೇಳಿಕೆ ನೀಡಿದ್ದರಿಂದ ಅಕ್ಕಿನೇನಿ ಕುಟುಂಬಕ್ಕೆ ಅವಮಾನ ಮಾಡಿದಂತಾಗಿದೆ. ಈ ಬಗ್ಗೆ ನಾಗ ಚೈತನ್ಯ, ಸಮಂತಾ ಮತ್ತು ಕೆ.ಟಿ. ರಾಮ ರಾವ್​ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು