AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ಕರುನಾಡಿನಲ್ಲಿ ‘ಕೆಆರ್​ಜಿ ಸ್ಟುಡಿಯೋಸ್​’ ಸಂಸ್ಥೆಯ ಪಾಲಾಯ್ತು ‘ಆದಿಪುರುಷ್​’ ಸಿನಿಮಾ ವಿತರಣೆ ಹಕ್ಕು

KRG Studios: ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್’ ಚಿತ್ರ ಜೂನ್ 16ರಂದು ಬಿಡುಗಡೆ ಆಗಲಿದೆ. ಕರ್ನಾಟಕದಲ್ಲಿ ಈ ಸಿನಿಮಾದ ವಿತರಣೆ ಹಕ್ಕುಗಳನ್ನು ‘ಕೆಆರ್​ಜಿ ಸ್ಟುಡಿಯೋಸ್​’ ಸಂಸ್ಥೆ ಪಡೆದುಕೊಂಡಿದೆ.

Adipurush: ಕರುನಾಡಿನಲ್ಲಿ ‘ಕೆಆರ್​ಜಿ ಸ್ಟುಡಿಯೋಸ್​’ ಸಂಸ್ಥೆಯ ಪಾಲಾಯ್ತು ‘ಆದಿಪುರುಷ್​’ ಸಿನಿಮಾ ವಿತರಣೆ ಹಕ್ಕು
ಪ್ರಭಾಸ್​
Follow us
ಮದನ್​ ಕುಮಾರ್​
|

Updated on: Jun 10, 2023 | 3:42 PM

ಬಹುನಿರೀಕ್ಷಿತ ‘ಆದಿಪುರುಷ್​’ (Adipurush) ಸಿನಿಮಾದ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಉಳಿದುಕೊಂಡಿವೆ. ಈ ಸಿನಿಮಾವನ್ನು ವಿಶ್ವಾದ್ಯಂತ ಬಿಡುಗಡೆ ಮಾಡಲಾಗುತ್ತಿದೆ. ಪ್ರಭಾಸ್​ ಅಭಿನಯದ ಈ ಚಿತ್ರದ ಬಗ್ಗೆ ಕರುನಾಡಿನಲ್ಲಿಯೂ ಕ್ರೇಜ್​ ಹೆಚ್ಚಾಗಿದೆ. ಕರ್ನಾಟಕದಲ್ಲಿ ‘ಆದಿಪುರುಷ್​’ ಸಿನಿಮಾದ ವಿತರಣೆ ಹಕ್ಕುಗಳು ‘ಕೆಆರ್​ಜಿ ಸ್ಟುಡಿಯೋಸ್​’ (KRG Studios) ಸಂಸ್ಥೆಯ ಪಾಲಾಗಿದೆ. ‘ನಮಗೆ ಆದಿಪುರುಷ್ ಚಿತ್ರದ ಕರ್ನಾಟಕದ ವಿತರಣೆ ಸಿಕ್ಕಿರುವುದು ಬಹಳ ಹೆಮ್ಮೆಯ ಸಂಗತಿ’ ಎಂದು ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಕಾರ್ಯಕಾರಿ ನಿರ್ಮಾಪಕ ಮತ್ತು ಕೆ.ಆರ್.ಜಿ. ಸ್ಟುಡಿಯೋಸ್ ಸಂಸ್ಥೆಯ ಸಂಸ್ಥಾಪಕರಾದ ಕಾರ್ತಿಕ್ ಗೌಡ (Karthik Gowda) ಸಂತಸ ವ್ಯಕ್ತಪಡಿಸಿದ್ದಾರೆ. ‘ನಮ್ಮ ಪೌರಾಣಿಕ ಮಹಾಕಾವ್ಯವಾದ ರಾಮಾಯಣದಲ್ಲಿ ಇರುವ ಸಾರವನ್ನು ಇಟ್ಟುಕೊಂಡು ಇಂದಿನ ಕಾಲಘಟ್ಟಕ್ಕೆ ಮತ್ತು ಇಂದಿನ ಪೀಳಿಗೆಗೆ ಅನುಗುಣವಾಗಿ ಆದಿಪುರುಷ್ ಚಿತ್ರವನ್ನು ಮಾಡಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಆದಿಪುರುಷ್’ ಚಿತ್ರ ಜೂನ್ 16ರಂದು ತೆಲುಗು, ಹಿಂದಿ, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ವಿದೇಶದಲ್ಲೂ ಅದ್ದೂರಿಯಾಗಿ ತೆರೆಕಾಣಲಿದೆ. ಈ ಚಿತ್ರವು ಪ್ರಭಾಸ್ ಮತ್ತು ಯು.ವಿ. ಕ್ರಿಯೇಷನ್ಸ್ ಜೊತೆಗಿನ ‘ಕೆ.ಆರ್.ಜಿ ಸ್ಟುಡಿಯೋಸ್’ ಒಡನಾಟಕ್ಕೆ ಸಾಕ್ಷಿಯಾಗಲಿದೆ. ಟಿ. ಸೀರೀಸ್ ಮತ್ತು ರೆಟ್ರೋಫಿಲ್ಸ್ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಓಂ ರಾವತ್ ಅವರು ನಿರ್ದೇಶನ ಮಾಡಿದ್ದಾರೆ.

3ಡಿ ವರ್ಷನ್​ನಲ್ಲಿ ತೆರೆಕಾಣುತ್ತಿರುವುದರಿಂದ ‘ಆದಿಪುರುಷ್’ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಸೆನ್ಸಾರ್​ ಮಂಡಳಿಯಲ್ಲಿ ಈ ಸಿನಿಮಾಗೆ ‘ಯು’ ಪ್ರಮಾಣ ಪತ್ರ ಸಿಕ್ಕಿದೆ. ಅಂದರೆ, ವಯಸ್ಸಿನ ಮಿತಿ ಇಲ್ಲದೇ ಯಾರು ಬೇಕಿದ್ದರೂ ಈ ಸಿನಿಮಾವನ್ನು ನೋಡಬಹುದು. ಫ್ಯಾಮಿಲಿ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಸೆಳೆಯಲು ‘ಯು’ ಪ್ರಮಾಣಪತ್ರ ಬಹಳ ಮುಖ್ಯ ಆಗುತ್ತದೆ. ಇನ್ನು ಈ ಸಿನಿಮಾದ ಅವಧಿ ಬರೋಬ್ಬರಿ 3 ಗಂಟೆ ಇದೆ ಎಂಬುದು ಗಮನಿಸಬೇಕಾದ ಅಂಶ.

ಇದನ್ನೂ ಓದಿ: Adipurush Movie: ರಾಮನ ಮೀಸೆ ವಿಚಾರಕ್ಕೆ ಸ್ಪಷ್ಟನೆ ನೀಡಿದ ‘ಆದಿಪುರುಷ್’ ನಿರ್ಮಾಪಕ

‘ಆದಿಪುರುಷ್​’ ಚಿತ್ರದ ಹಿಂದಿ ಅವತರಣಿಕೆಯ ಸೆನ್ಸಾರ್​ ಸರ್ಟಿಫಿಕೇಟ್​ ಲಭ್ಯವಾಗಿದೆ. ಇದರಲ್ಲಿ ಚಿತ್ರದ ಅವಧಿ ಬಗ್ಗೆ ಮಾಹಿತಿ ಇದೆ. ಆ ಪ್ರಕಾರ, ಈ ಸಿನಿಮಾದ ಅವಧಿ ಬರೋಬ್ಬರು 2 ಗಂಟೆ 59 ನಿಮಿಷಗಳು. ಅಂದರೆ, 3 ಗಂಟೆಗೆ ಒಂದು ನಿಮಿಷ ಮಾತ್ರ ಬಾಕಿ. ಮಧ್ಯಂತರದ ಸಮಯವನ್ನೂ ಸೇರಿಸಿದರೆ ಈ ಸಿನಿಮಾದ ಪ್ರದರ್ಶನಕ್ಕೆ 3 ಗಂಟೆ 15 ನಿಮಿಷ ಬೇಕು. ಇದು ಪ್ರೇಕ್ಷಕರ ತಾಳ್ಮೆ ಪರೀಕ್ಷಿಸಬಹುದು. ಕೆಲವೊಮ್ಮೆ ಇದರಿಂದ ಸಿನಿಮಾಗೆ ಹಿನ್ನಡೆ ಆಗಲೂಬಹುದು. ಹಾಗಂತ ಯಾವುದನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. 3 ಗಂಟೆ ಅವಧಿ ಇರುವ ಸಿನಿಮಾಗಳು ಸೂಪರ್​ ಹಿಟ್​ ಉದಾಹರಣೆ ಕೂಡ ಇದೆ.

ಇದನ್ನೂ ಓದಿ: Ranbir Kapoor: ಬಡ ಮಕ್ಕಳಿಗಾಗಿ ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ ಉಚಿತವಾಗಿ ನೀಡಲು ಮುಂದಾದ ನಟ ರಣಬೀರ್​ ಕಪೂರ್​

‘ಆದಿಪುರುಷ್​’ ಚಿತ್ರದಲ್ಲಿ ಪ್ರಭಾಸ್ ಅವರು ರಾಮನಾಗಿ ನಟಿಸಿದ್ದು, ಸೀತೆ ಪಾತ್ರಕ್ಕೆ ಕೃತಿ ಸನೋನ್​ ಬಣ್ಣ ಹಚ್ಚಿದ್ದಾರೆ. ಲಕ್ಷ್ಮಣನಾಗಿ ಸನ್ನಿ ಸಿಂಗ್​ ಅಭಿನಯಿಸಿದ್ದಾರೆ. ರಾವಣನ ಪಾತ್ರವನ್ನು ಸೈಫ್​ ಅಲಿ ಖಾನ್​ ಮಾಡಿದ್ದಾರೆ. ಆಂಜನೇಯನ ಪಾತ್ರದಲ್ಲಿ ದೇವದತ್ತ ನಾಗೆ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ದಿನ ಈ ಸಿನಿಮಾ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ಎಲ್ಲರ ಮನದಲ್ಲೂ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?