AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Krisham Raju: ಪ್ರಭಾಸ್ ದೊಡ್ಡಪ್ಪ, ಟಾಲಿವುಡ್​ನ​ ರೆಬೆಲ್​ಸ್ಟಾರ್ ಕೃಷ್ಣಂರಾಜು ನಿಧನ

‘ಗೋಪಿಕೃಷ್ಣ ಮೋವೀಸ್’ ಲಾಂಛನದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಹಲವು ಬಾರಿ ಫಿಲ್ಂಫೇರ್ ಮತ್ತು ನಂದಿ ಪ್ರಶಸ್ತಿಗಳು ಕೃಷ್ಣರಾಜು ಅವರಿಗೆ ಸಂದಿವೆ.

Krisham Raju: ಪ್ರಭಾಸ್ ದೊಡ್ಡಪ್ಪ, ಟಾಲಿವುಡ್​ನ​ ರೆಬೆಲ್​ಸ್ಟಾರ್ ಕೃಷ್ಣಂರಾಜು ನಿಧನ
ತೆಲುಗು ನಟ ಕೃಷ್ಣಂರಾಜು
TV9 Web
| Edited By: |

Updated on:Sep 11, 2022 | 10:12 AM

Share

ಹೈದರಾಬಾದ್​: ತೆಲುಗು ಸಿನಿಮಾ ರಂಗದ ರೆಬೆಲ್ ಸ್ಟಾರ್ ಎಂದೇ ಖ್ಯಾತರಾಗಿದ್ದ ಉಪ್ಪಲಪತ್ತಿ ವೆಂಕಟ ಕೃಷ್ಣಂರಾಜು (83) (Krishnam Raju) ಭಾನುವಾರ ನಸುಕಿನ 3:25ಕ್ಕೆ ತಮ್ಮ ನಿವಾಸದಲ್ಲಿ ನಿಧನರಾದರು. ನಟ, ಪತ್ರಕರ್ತ, ಛಾಯಾಗ್ರಾಹಕರಾಗಿ ಕೃಷ್ಣಂರಾಜು ಜನಪ್ರಿಯರಾಗಿದ್ದರು. ಪತ್ನಿ, ಮೂವರು ಪುತ್ರಿಯರು, ಅಪಾರ ಸ್ನೇಹಿತರು ಹಾಗೂ ಬಂಧುಗಳನ್ನು ಅವರು ಅಗಲಿದ್ದಾರೆ. ‘ಬಾಹುಬಲಿ’ ಖ್ಯಾತಿಯ ಪ್ರಭಾಸ್ (Prabhas) ಸಹ ಕೃಷ್ಣಂರಾಜು ಅವರ ಹತ್ತಿರದ ಸಂಬಂಧಿ. ಕೃಷ್ಣಂರಾಜು ಅವರು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ, ಗ್ರಾಹಕ ಸೇವೆಗಳು, ಆಹಾರ ಮತ್ತು ಪಡಿತರ ವಿತರಣೆ, ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲಟೂರು ಗ್ರಾಮದಲ್ಲಿ 1940ರಲ್ಲಿ ಕೃಷ್ಣಂರಾಜು ಜನಿಸಿದರು. 1966ರಲ್ಲಿ ‘ಚಿಲಕ ಗೋರಿಂಕಾ’ ಚಿತ್ರದಲ್ಲಿ ಮೊದಲ ಬಾರಿಗೆ ಬಣ್ಣಹಚ್ಚಿದ್ದರು. ನಂತರ ಹಲವು ಚಿತ್ರಗಳಲ್ಲಿ ಖಳನಾಯಕನಾಗಿ ಅಭಿನಯಿಸಿದರು. ನಂತರದ ದಿನಗಳಲ್ಲಿ ನಾಯಕನಟನಾಗಿ ಅಪಾರ ಜನಪ್ರಿಯ ಪಡೆದುಕೊಂಡರು. ಯುವಜನರ ಆಶೋತ್ತರಗಳಿಗೆ ಸ್ಪಂದಿಸುವ, ಸಿಡುಕು ಸ್ವಭಾವದ ವ್ಯಕ್ತಿಯಾಗಿ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಸುಮಾರು 183 ಚಿತ್ರಗಳಲ್ಲಿ ನಟಿಸಿದ್ದ ಕೃಷ್ಣಂರಾಜು ಅವರು ಕೊನೆಯ ಚಿತ್ರ ‘ರಾಧೇ ಶ್ಯಾಮ್’. ಇವರ ಹತ್ತಿರದ ಸಂಬಂಧಿ ಪ್ರಭಾಸ್ ಈ ಚಿತ್ರದ ನಾಯಕರಾಗಿದ್ದರು.

‘ಗೋಪಿಕೃಷ್ಣ ಮೂವೀಸ್’ ಲಾಂಛನದಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಹಲವು ಬಾರಿ ಫಿಲ್ಂಫೇರ್ ಮತ್ತು ನಂದಿ ಪ್ರಶಸ್ತಿಗಳು ಕೃಷ್ಣರಾಜು ಅವರಿಗೆ ಸಂದಿವೆ. ತಂಡ್ರ ಪಾಪಾರಾಯುಡು, ಭಕ್ತ ಕಣ್ಣಪ್ಪ, ಬೊಬ್ಬಿಲಿ ಬ್ರಹ್ಮಣ್ಣ, ಬಾವ ಬಾವಮರ್ದಿ, ಧರ್ಮಾತ್ಮುಡು, ಜೀವನ ತರಂಗಾಲು ಕೃಷ್ಣವೇಣಿ ಸೇರಿದಂತೆ ಕೃಷ್ಣಂರಾಜು ಅಭಿನಯದ ಹಲವು ಸಿನಿಮಾನಗಳು ಮನೆಮಾತಾಗಿದ್ದವು.

ಗಣ್ಯರು, ಅಭಿಮಾನಿಗಳ ಸಂತಾಪ

ಕೃಷ್ಣಂರಾಜು ನಿಧನಕ್ಕೆ ಹಲವು ಸಿನಿ ನಟರು, ಗಣ್ಯರು ಮತ್ತು ಅಭಿಮಾನಿಗಳು ಟ್ವೀಟ್ ಮೂಲಕ ತಮ್ಮ ಸಂತಾಪ ಸಂದೇಶ ಹಂಚಿಕೊಂಡಿದ್ದಾರೆ.

ತೆಲುಗಿನಲ್ಲಿ ಸುದ್ದಿ ಓದಲು ಲಿಂಕ್: విలన్, సపోర్టింగ్ రోల్స్‌లో నటించి మెప్పించిన కృష్ణం రాజు

Published On - 8:39 am, Sun, 11 September 22

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ