AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಕಾಗಿದ್ದ ಕೃತಿ ಶೆಟ್ಟಿಗೆ ಒಲಿದು ಬಂದ ಅದೃಷ್ಟ, ಒಟ್ಟಿಗೆ ಡಬಲ್ ಧಮಾಕ

Krithi Shetty: ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ ನಟನೆಯ ಕೆಲ ತೆಲುಗು ಸಿನಿಮಾಗಳು ಒಂದರ ಹಿಂದೊಂದು ಫ್ಲಾಪ್ ಆಗಿದ್ದವು. ಈಗ ಮತ್ತೊಂದು ಹೊಸ ತೆಲುಗು ಸಿನಿಮಾ ಕೃತಿ ಒಪ್ಪಿಕೊಂಡಿದ್ದಾರೆ.

ಮಂಕಾಗಿದ್ದ ಕೃತಿ ಶೆಟ್ಟಿಗೆ ಒಲಿದು ಬಂದ ಅದೃಷ್ಟ, ಒಟ್ಟಿಗೆ ಡಬಲ್ ಧಮಾಕ
ಮಂಜುನಾಥ ಸಿ.
|

Updated on:Feb 11, 2024 | 10:15 PM

Share

ಮಂಗಳೂರು ಮೂಲದ ಚೆಲುವೆ ಕೃತಿ ಶೆಟ್ಟಿ (Krithi Shetty) ಕಡಿಮೆ ಅವಧಿಯಲ್ಲಿ ಬೇಡಿಕೆಯ ನಟಿಯಾದರು ಆದರೆ ಅಷ್ಟೇ ವೇಗವಾಗಿ ಬೇಡಿಕೆ ಕಳೆದುಕೊಂಡಿದ್ದರು ಸಹ. ಕೋವಿಡ್ ಸಮಯದಲ್ಲಿ ಬಿಡುಗಡೆ ಆದ ‘ಉಪ್ಪೆನ’ ಸಿನಿಮಾ ಮೂಲಕ ನಾಯಕಿಯಾದ ಕೃತಿ ಶೆಟ್ಟಿ, ಮೊದಲ ಸಿನಿಮಾದಲ್ಲಿಯೇ ತಮ್ಮ ನಟನೆ ಹಾಗೂ ಸೌಂದರ್ಯದಿಂದ ಜನಪ್ರಿಯತೆ ಗಳಿಸಿದರು. ಆರಂಭದಲ್ಲಿ ಒಂದರ ಹಿಂದೊಂದು ಒಳ್ಳೆಯ ಸಿನಿಮಾ ಅವಕಾಶಗಳನ್ನು ಬಾಚಿಕೊಂಡ ಕೃತಿ ಶೆಟ್ಟಿ ಇತ್ತೀಚೆಗೆ ತುಸು ಮಂಕಾಗಿದ್ದರು. ಆದರೆ ಈಗ ಒಮ್ಮೆಲೆ ಇಬ್ಬರು ಸ್ಟಾರ್ ನಟರೊಟ್ಟಿಗೆ ನಟಿಸುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಕೃತಿ ಶೆಟ್ಟಿಗೆ ಆರಂಭದಲ್ಲಿ ಒಳ್ಳೆಯ ಯಶಸ್ಸು ಸಿಕ್ಕಿತಾದರೂ ಎರಡು-ಮೂರು ಸಿನಿಮಾಗಳ ಬಳಿಕ ಕೃತಿ ಶೆಟ್ಟಿ ನಟಿಸಿದ ಸಿನಿಮಾಗಳು ಸಾಲು-ಸಾಲಾಗಿ ಸೋಲಲು ಆರಂಭಿಸಿದವು. ಕೃತಿ ನಟಿಸಿದ ‘ಬಂಗಾರ್ರಾಜು’, ‘ಮಚ್ಚೆರ್ಲ ನಿಯೋಜಕವರ್ಗಂ’, ‘ಆ ಅಮ್ಮಾಯಿ ಗುರಿಂಚಿ ಮೀಕು ಚಪ್ಪಾಲಿ’, ‘ಕಸ್ಟಡಿ’ ಸಿನಿಮಾಗಳು ಫ್ಲಾಪ್ ಎನಿಸಿಕೊಂಡರು. ‘ಕಸ್ಟಡಿ’ ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆ ಇಡಲಾಗಿತ್ತು, ಆದರೂ ಸಹ ಸಿನಿಮಾ ಸೋತಿತು. ‘ಕಸ್ಟಡಿ’ ಸೋಲಿನ ಬಳಿಕ ತೆಲುಗು ಚಿತ್ರರಂಗದಿಂದ ಅವಕಾಶಗಳೇ ಬರುವುದು ನಿಂತು ಬಿಟ್ಟಿತು ಕೃತಿ ಶೆಟ್ಟಿಗೆ.

ಇದನ್ನೂ ಓದಿ:ನವರಾತ್ರಿ, ದುರ್ಗಾ ಪೂಜೆಗೆ ಕೃತಿ ಶೆಟ್ಟಿ ಶುಭಾಶಯ ತಿಳಿಸಿದ್ದು ಹೀಗೆ

ಅದಾದ ಬಳಿಕ ಕೃತಿ ಶೆಟ್ಟಿ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು, ಬಳಿಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ನೀಡಿದರು. ಮಲಯಾಳಂನಲ್ಲಿ ‘ಅಜಯಂಟೆ ರಂಡಂ ಮೋಷನಮ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ಕಾರ್ತಿ ಜೊತೆಗೊಂದು ತಮಿಳು ಸಿನಿಮಾ ಸಹ ಒಪ್ಪಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ಶರವಣ ಅವರ ಮುಂದಿನ ತೆಲುಗು ಸಿನಿಮಾಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ. ಅದರ ಜೊತೆಗೆ ತಮಿಳಿನಲ್ಲಿ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದು, ಜಯಂ ರವಿ ಅವರ ಮುಂದಿನ ಸಿನಿಮಾಕ್ಕೆ ಕೃತಿ ಶೆಟ್ಟಿ ನಾಯಕಿಯಾಗಲಿದ್ದಾರೆ.

ಕೃತಿ ಶೆಟ್ಟಿ ಮೂಲತಃ ಮಂಗಳೂರಿನವರು. ಆದರೆ ಬೆಳೆದಿದ್ದೆಲ್ಲ ಮುಂಬೈನಲ್ಲಿ. ಎಳವೆಯಿಂದಲೇ ಹಲವು ಜಾಹೀರಾತುಗಳಲ್ಲಿ ಕೃತಿ ಶೆಟ್ಟಿ ನಟಿಸಿದ್ದಾರೆ. ಹೃತಿಕ್ ರೋಷನ್ ನಟನೆಯ ‘ಸೂಪರ್ 30’ ಸಿನಿಮಾದ ಸಣ್ಣ ಪಾತ್ರವೊಂದರಲ್ಲಿ ಕೃತಿ ಶೆಟ್ಟಿ ಕಾಣಿಸಿಕೊಂಡಿದ್ದರು. ಅದಾದ ಬಳಿಕ ಬುಚ್ಚಿಬಾಬು ಸನಾ ನಿರ್ದೇಶನದ ‘ಉಪ್ಪೆನ’ ಸಿನಿಮಾದಲ್ಲಿ ನಾಯಕಿಯಾದರು ಕೃತಿ ಶೆಟ್ಟಿ. ಆ ಸಿನಿಮಾ ಸೂಪರ್-ಡೂಪರ್ ಹಿಟ್ ಆಯ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:03 pm, Sun, 11 February 24

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್