AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಾನವಾಗಿ ಟಾಲಿವುಡ್​ ತೊರೆಯುತ್ತಿದ್ದಾರೆ ಕೃತಿ ಶೆಟ್ಟಿ, ಕೀರ್ತಿಸುರೇಶ್?

ಕೃತಿ ಶೆಟ್ಟಿ-ಕೀರ್ತಿ ಸುರೇಶ್ ನಿಧಾನವಾಗಿ ಟಾಲಿವುಡ್ ತೊರೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುವ ಮಾತು ಜೋರಾಗಿದೆ.

ನಿಧಾನವಾಗಿ ಟಾಲಿವುಡ್​ ತೊರೆಯುತ್ತಿದ್ದಾರೆ ಕೃತಿ ಶೆಟ್ಟಿ, ಕೀರ್ತಿಸುರೇಶ್?
ಕೀರ್ತಿ-ಕೃತಿ
ರಾಜೇಶ್ ದುಗ್ಗುಮನೆ
|

Updated on:Jul 05, 2023 | 8:32 AM

Share

ಕೀರ್ತಿ ಸುರೇಶ್ ಹಾಗೂ ಕೃತಿ ಶೆಟ್ಟಿ (Krithi Shetty) ಹೆಚ್ಚು ಗುರುತಿಸಿಕೊಂಡಿದ್ದು ಟಾಲಿವುಡ್ ಮೂಲಕ. ಕೀರ್ತಿ ಸುರೇಶ್ (Keerthy Suresh) ಅವರು ಮಲಯಾಳಂ ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದ್ದರೂ ಅವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟಿದ್ದು ಟಾಲಿವುಡ್ ಚಿತ್ರರಂಗ. ಕೃತಿ ಶೆಟ್ಟಿ ಕೂಡ ಅಷ್ಟೇ. ತೆಲುಗಿನಲ್ಲಿ ನಾಯಕಿ ಆಗಿ ಮಿಂಚಿದರು. ಈಗ ಇಬ್ಬರೂ ಹೀರೋಯಿನ್​ಗಳು ನಿಧಾನವಾಗಿ ಟಾಲಿವುಡ್ ತೊರೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನುವ ಮಾತು ಜೋರಾಗಿದೆ. ಅವರ ಇತ್ತೀಚಿನ ನಡೆ ಈ ರೀತಿಯ ಅನುಮಾನ ಹುಟ್ಟುಹಾಕಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

2016ರಲ್ಲಿ ರಿಲೀಸ್ ಆದ ತೆಲುಗಿನ ‘ನೇನು ಶೈಲಜಾ’ ಸಿನಿಮಾದಲ್ಲಿ ನಟಿಸಿ ಕೀರ್ತಿ ಸುರೇಶ್ ಫೇಮಸ್ ಆದರು. ಅವರ ನಟನೆಯ ‘ಮಹಾನಟಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ನಟನೆಗೆ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಕೂಡ ಲಭಿಸಿದೆ. ಕಳೆದ ವರ್ಷ ರಿಲೀಸ್ ಆದ ‘ಸರ್ಕಾರು ವಾರಿ ಪಾಟ’ ಸಿನಿಮಾ ಕೂಡ ಗೆದ್ದು ಬೀಗಿದೆ. ಕೀರ್ತಿ ಸುರೇಶ್​ಗೆ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಆದರೆ, ಇತ್ತೀಚೆಗೆ ಅವರ ಗಮನ ತಮಿಳು ಚಿತ್ರರಂಗದತ್ತ ವಾಲುತ್ತಿದೆ. ಅವರು ಹೆಚ್ಚು ಹೆಚ್ಚು ತಮಿಳು ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಸದ್ಯ ಅವರ ಕೈಯಲ್ಲಿ ನಾಲ್ಕು ತಮಿಳು ಸಿನಿಮಾ ಹಾಗೂ ಒಂದು ತೆಲುಗು ಸಿನಿಮಾ ಇದೆ.

ಇನ್ನು ಕೃತಿ ಶೆಟ್ಟಿ ಅವರಿಗೆ ಜನಪ್ರಿಯತೆ ತಂದುಕೊಟ್ಟಿದ್ದು ‘ಉಪ್ಪೇನಾ’ ಸಿನಿಮಾ. ತೆಲುಗಿನಲ್ಲಿ ರಿಲೀಸ್ ಆದ ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಅವರ ಅದೃಷ್ಟ ಬದಲಾಯಿತು. ‘ಶ್ಯಾಮ ಸಿಂಘ ರಾಯ್’ ಚಿತ್ರ ಅವರ ಬದುಕು ಬದಲಾಯಿಸಿತು. ಸದ್ಯ ಅವರ ಗಮನ ಮಲಯಾಳಂ ಹಾಗೂ ತಮಿಳು ಚಿತ್ರರಂಗದ ಮೇಲಿದೆ.

ಇದನ್ನೂ ಓದಿ: ಹೊಸ ಚಿತ್ರಗಳೊಟ್ಟಿಗೆ ಬಂದ ಕರ್ನಾಟಕ ಮೂಲದ ಪರಭಾಷಾ ನಟಿ ಕೃತಿ ಶೆಟ್ಟಿ

ರಶ್ಮಿಕಾ ಮಂದಣ್ಣ ಅವರಿಗೆ ಕನ್ನಡದಲ್ಲಿ ಬೇಡಿಕೆ ಇರುವಾಗಲೇ ಟಾಲಿವುಡ್​ಗೆ ಹೋದರು. ಈಗ ಅವರು ಕನ್ನಡ ಚಿತ್ರರಂಗವನ್ನು ಸಂಪೂರ್ಣವಾಗಿ ತೊರೆದಿದ್ದಾರೆ. ಇದೇ ರೀತಿ ಇವರುಗಳು ಕೂಡ ಟಾಲಿವುಡ್ ತೊರೆಯಬಹುದು ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಅವರು ಓಪನ್ ಆಗಿ ಮಾತನಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Wed, 5 July 23

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?