AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃತಿ ಶೆಟ್ಟಿ ಬೆಂಬಲಕ್ಕೆ ನಿಂತ ನಾಗ ಚೈತನ್ಯ; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

‘ಬಂಗರಾಜು’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಯಾವ ಅವತಾರ ತಾಳಬಹುದು ಎನ್ನುವ ಕುತೂಹಲ ಪ್ರೇಕ್ಷಕರದ್ದಾಗಿತ್ತು.

ಕೃತಿ ಶೆಟ್ಟಿ ಬೆಂಬಲಕ್ಕೆ ನಿಂತ ನಾಗ ಚೈತನ್ಯ; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ಕೃತಿ ಶೆಟ್ಟಿ
TV9 Web
| Edited By: |

Updated on:Nov 18, 2021 | 4:06 PM

Share

‘ಉಪ್ಪೇನಾ’ (Uppena) ಸಿನಿಮಾ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡವರು ನಟಿ ಕೃತಿ ಶೆಟ್ಟಿ (Krithi Shetty). ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅವರು ನಿರ್ವಹಿಸಿದ್ದ ಬೇಬಮ್ಮ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಹೀರೋಯಿನ್​ ಆಗಿ ಕಾಣಿಸಿಕೊಂಡ ಮೊದಲ ಸಿನಿಮಾ ಹಿಟ್​ ಆದ ನಂತರದಲ್ಲಿ ಸಾಲುಸಾಲು ಆಫರ್​ಗಳು ಬರೋದು ಸಾಮಾನ್ಯ. ಅದೇ ರೀತಿ, ಕೃತಿ ಶೆಟ್ಟಿಗೆ ಹಲವು ಸಿನಿಮಾ ಆಫರ್​ಗಳು ಬಂದಿವೆ. ಸದ್ಯ, ಅವರ ಕೈಯಲ್ಲಿ ಬರೋಬ್ಬರಿ ಐದು ಚಿತ್ರಗಳಿವೆ. ಕೇವಲ 18ನೇ ವಯಸ್ಸಿನಲ್ಲಿ ಸ್ಟಾರ್​ ನಟಿ ಆಗಿದ್ದಾರೆ ಕೃತಿ. ಅವರ ಖ್ಯಾತಿ ನಿತ್ಯ ಹೆಚ್ಚುತ್ತಲೇ ಇದೆ. ಈಗ ನಾಗ ಚೈತನ್ಯ ಅವರು ಕೃತಿಗೆ ಬೆಂಬಲ ನೀಡಿದ್ದಾರೆ. ಈ ವಿಚಾರ ಅವರಿಗೆ ಖುಷಿ ನೀಡಿದೆ. ಅಷ್ಟಕ್ಕೂ ಏನಿದು ಸಮಾಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಬಂಗರಾಜು’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಯಾವ ಅವತಾರ ತಾಳಬಹುದು ಎನ್ನುವ ಕುತೂಹಲ ಪ್ರೇಕ್ಷಕರದ್ದಾಗಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ನಾಗ ಚೈತನ್ಯ ಅವರು ಕೃತಿ ಅವರ ಹೊಸ ಲುಕ್​ ಅನಾವರಣ ಮಾಡಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ. ಅಷ್ಟೇ ಅಲ್ಲ, ಕೃತಿ ಸೌಂದರ್ಯ ಎಲ್ಲರ ಗಮನ ಸೆಳೆದಿದೆ.

ಕೃತಿ ಅವರು ‘ಬಂಗರಾಜು’ ಚಿತ್ರದಲ್ಲಿ ನಾಗಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರವನ್ನು ನಾಗ ಚೈತನ್ಯ ಅನಾವರಣ ಮಾಡಿದ್ದಾರೆ. ಕೃತಿ ಅವರು ಹಸಿರು ಬಣ್ಣದ ಸೀರೆ ತೊಟ್ಟಿದ್ದಾರೆ. ಕತ್ತಿಗೆ ಗುಲಾಬಿ ಹೂವಿನ ಹಾರ ಹಾಕಿಕೊಂಡಿದ್ದಾರೆ. ಕೈಯಲ್ಲಿ ಕನ್ನಡಕ ಹಿಡಿದಿದ್ದಾರೆ. ಕಿವಿಗೆ ದೊಡ್ಡದಾದ ಕಿವಿಯೋಲೆ ಹಾಕಿದ್ದಾರೆ. ಅವರ ಲುಕ್​ ನೋಡಿ ಪ್ರೇಕ್ಷಕರು ಮನ ಸೋತಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ನಾಗ ಚೈತನ್ಯ, ‘ನಾಗಲಕ್ಷ್ಮೀ ಆಗಿ ಕೃತಿ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಫಸ್ಟ್​ ಲುಕ್​ ಇಲ್ಲಿದೆ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಕೃತಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಾಗ ಚೈತನ್ಯ ಅವರೇ ನಾಗಲಕ್ಷ್ಮೀಯನ್ನು ಪರಿಚಯಿಸಿದ್ದಕ್ಕೆ ಧನ್ಯವಾದ. ಈ ಪಾತ್ರ ಸಾಕಷ್ಟು ಖುಷಿ ನೀಡಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

‘ಬಂಗರಾಜು’ ಸಿನಿಮಾವನ್ನು ಕಲ್ಯಾಣ್​ ಕೃಷ್ಣ ಅವರು ನಿರ್ದೆಶನ ಮಾಡುತ್ತಿದ್ದಾರೆ.  ಅವರಿಗೆ ಈ ಮೊದಲು ಮೂರು ಸಿನಿಮಾಗಳನ್ನು ನಿರ್ದೇಶನ ಮಾಡಿದ ಅನುಭವ ಇದೆ. ಅನ್ನಪೂರ್ಣ ಸ್ಟುಡಿಯೋಸ್​ ಹಾಗೂ ಜೀ ಸ್ಟುಡಿಯೋಸ್​ ಬ್ಯಾನರ್​ ಅಡಿಯಲ್ಲಿ ಸಿನಿಮಾ ನಿರ್ಮಾಣ ಆಗುತ್ತಿದೆ. ಶೀಘ್ರವೇ ಸಿನಿಮಾ ಶೂಟಿಂಗ್​ ಪೂರ್ಣಗೊಳಿಸುವ ಆಲೋಚನೆಯಲ್ಲಿ ಚಿತ್ರತಂಡ ಇದೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣಗೆ ಪೈಪೋಟಿ ನೀಡಲು ಬಂದಿರುವ ಕನ್ನಡತಿ ಕೃತಿ ಶೆಟ್ಟಿಗೆ ಪರಭಾಷೆಯಲ್ಲಿ ಫುಲ್​ ಡಿಮ್ಯಾಂಡ್​​

Published On - 1:48 pm, Thu, 18 November 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?