AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ದೃಶ್ಯಗಳಲ್ಲೇ ಮಿಂಚುತ್ತಿದ್ದಾರೆ ಕೃತಿ ಶೆಟ್ಟಿ; ವೈರಲ್​ ಆಗುತ್ತಿವೆ ಫೋಟೋಗಳು

‘ಶ್ಯಾಮ್​ ಸಿಂಗ್​ ರಾಯ್’ ಸಿನಿಮಾದಲ್ಲಿ ನಾನಿ ಹಾಗೂ ಕೃತಿ ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ಡಿಸೆಂಬರ್​ 24ರಂದು ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಕೃತಿ ಶೆಟ್ಟಿ ಹಾಗೂ ನಾನಿ ನಡುವೆ ಲಿಪ್​ಕಿಸ್​ ದೃಶ್ಯಗಳಿವೆ.

ಬೋಲ್ಡ್​ ದೃಶ್ಯಗಳಲ್ಲೇ ಮಿಂಚುತ್ತಿದ್ದಾರೆ ಕೃತಿ ಶೆಟ್ಟಿ; ವೈರಲ್​ ಆಗುತ್ತಿವೆ ಫೋಟೋಗಳು
ಕೃತಿ ಶೆಟ್ಟಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jan 04, 2022 | 4:11 PM

Share

ನಟಿ ಕೃತಿ ಶೆಟ್ಟಿ (Krithi Shetty) ಟಾಲಿವುಡ್​ನ ಬೇಡಿಕೆಯ ನಟಿ. ಸಿನಿಮಾದ ಪಾತ್ರ ಏನನ್ನು ಕೇಳುತ್ತದೆಯೋ ಅದನ್ನು ಮಾಡೋಕೆ ಅವರು ಸದಾ ಸಿದ್ಧರಿರುತ್ತಾರೆ. ‘ಉಪ್ಪೇನ’ (Uppena) ಸಿನಿಮಾ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅವರು ನಿರ್ವಹಿಸಿದ್ದ ಬೇಬಮ್ಮ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಕೃತಿ ಸುದ್ದಿಯಲ್ಲಿದ್ದಾರೆ. ಪ್ರತಿ ಸಿನಿಮಾದಲ್ಲೂ ಬೋಲ್ಡ್​ ದೃಶ್ಯಗಳಲ್ಲಿ ಕೃತಿ ನಟಿಸುತ್ತಿದ್ದಾರೆ. ಇದು ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

‘ಶ್ಯಾಮ್​ ಸಿಂಗ​ ರಾಯ್’ ಸಿನಿಮಾದಲ್ಲಿ ನಾನಿ ಹಾಗೂ ಕೃತಿ ಶೆಟ್ಟಿ ನಟಿಸಿದ್ದಾರೆ. ಈ ಸಿನಿಮಾ ಡಿಸೆಂಬರ್​ 24ರಂದು ರಿಲೀಸ್​ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಈ ಚಿತ್ರದಲ್ಲಿ ಕೃತಿ ಶೆಟ್ಟಿ ಹಾಗೂ ನಾನಿ ನಡುವೆ ಲಿಪ್​ಕಿಸ್​ ದೃಶ್ಯಗಳಿವೆ. ಈ ದೃಶ್ಯದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈಗ ಮತ್ತೊಂದು ಸಿನಿಮಾದಲ್ಲಿ ಕೃತಿ ಬೋಲ್ಡ್​ ಪಾತ್ರ​ ಮಾಡಿದ್ದಾರೆ.

ಸುಧೀರ್​ ಬಾಬು ನಟನೆಯ ‘ಆ ಅಮ್ಮಾಯಿ ಗುರಿಂಚಿ ಮೀಕು ಚೆಪ್ಪಾಲಿ’ ಸಿನಿಮಾಗೆ ಕೃತಿ ಶೆಟ್ಟಿ ನಾಯಕಿ. ಈ ಸಿನಿಮಾದಲ್ಲಿಯೂ ಅವರು ಇಂಟಿಮೇಟ್​ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದರ ಫೋಟೋಗಳು ಈಗ ಸಾಕಷ್ಟು ವೈರಲ್​ ಆಗಿದೆ.

‘ಬಂಗರ್ರಾಜು’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಯಾವ ಅವತಾರ ತಾಳಬಹುದು ಎನ್ನುವ ಕುತೂಹಲ ಪ್ರೇಕ್ಷಕರದ್ದಾಗಿತ್ತು. ಇದಕ್ಕೆ ಇತ್ತೀಚೆಗೆ ಉತ್ತರ ಸಿಕ್ಕಿತ್ತು. ನಾಗ ಚೈತನ್ಯ ಅವರು ಕೃತಿ ಅವರ ಹೊಸ ಲುಕ್​ ಅನಾವರಣ ಮಾಡಿದ್ದರು. ಈ ಲುಕ್​ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಕೃತಿ ಅವರು ‘ಬಂಗರ್ರಾಜು’ ಚಿತ್ರದಲ್ಲಿ ನಾಗಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಲುಕ್​ನಲ್ಲಿ ಕೃತಿ ಅವರು ಹಸಿರು ಬಣ್ಣದ ಸೀರೆ ತೊಟ್ಟಿದ್ದರು. ಕೊರಳಿಗೆ ಗುಲಾಬಿ ಹೂವಿನ ಹಾರ ಹಾಕಿಕೊಂಡಿದ್ದರು. ಕೈಯಲ್ಲಿ ಕನ್ನಡಕ ಹಿಡಿದಿದ್ದರು.

ಇದನ್ನೂ ಓದಿ: ನಾನಿ ಜತೆ ಲಿಪ್ ಕಿಸ್​​​ ಮಾಡಿ ಸುದ್ದಿಯಾದ ಕೃತಿ ಶೆಟ್ಟಿ; ಶಾಕ್​ ಆದ ಅಭಿಮಾನಿಗಳು

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ