AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಿ ಜತೆ ಲಿಪ್ ಕಿಸ್​​​ ಮಾಡಿ ಸುದ್ದಿಯಾದ ಕೃತಿ ಶೆಟ್ಟಿ; ಶಾಕ್​ ಆದ ಅಭಿಮಾನಿಗಳು

 ‘ಶ್ಯಾಮ್​ ಸಿಂಗ್​ ರಾಯ್’ ಸಿನಿಮಾದ ಕಥೆ ಕೋಲ್ಕತ್ತಾದಲ್ಲಿ ನಡೆಯಲಿದೆ. ‘ದೇವದಾಸಿ’ ಪದ್ಧತಿ ವಿರುದ್ಧ ನಡೆದ ಹೋರಾಟದ ಕಥೆಯನ್ನು ಈ ಸಿನಿಮಾ ಹೇಳಲಿದೆ. ನಾನಿ ಅವರು ಶ್ಯಾಮ್​ ಸಿಂಗ್​ ಆಗಿ ಕಾಣಿಸಿಕೊಂಡಿದ್ದಾರೆ.

ನಾನಿ ಜತೆ ಲಿಪ್ ಕಿಸ್​​​ ಮಾಡಿ ಸುದ್ದಿಯಾದ ಕೃತಿ ಶೆಟ್ಟಿ; ಶಾಕ್​ ಆದ ಅಭಿಮಾನಿಗಳು
ಕೃತಿ-ನಾನಿ
TV9 Web
| Edited By: |

Updated on: Nov 18, 2021 | 9:56 PM

Share

ನಟಿ ಕೃತಿ ಶೆಟ್ಟಿ (Krithi Shetty) ಟಾಲಿವುಡ್​ನ ಬೇಡಿಕೆಯ ನಟಿ. ಸಿನಿಮಾದ ಪಾತ್ರ ಏನನ್ನು ಕೇಳುತ್ತದೆಯೋ ಅದನ್ನು ಮಾಡೋಕೆ ಅವರು ಸದಾ ಸಿದ್ಧರಿರುತ್ತಾರೆ. ‘ಉಪ್ಪೇನಾ’ (Uppena) ಸಿನಿಮಾ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅವರು ನಿರ್ವಹಿಸಿದ್ದ ಬೇಬಮ್ಮ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಕೃತಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ನಟನೆಯ ‘ಶ್ಯಾಮ್​ ಸಿಂಗ್​ ರಾಯ್’ ಚಿತ್ರದ ಟೀಸರ್​ ರಿಲೀಸ್​ ಆಗಿದೆ. ಈ ಟೀಸರ್​ನಲ್ಲಿ ಕೃತಿ ಲಿಪ್​ ಕಿಸ್​ ಮಾಡಿದ್ದಾರೆ.

‘ಶ್ಯಾಮ್​ ಸಿಂಗ್​ ರಾಯ್’ ಸಿನಿಮಾದ ಕಥೆ ಕೋಲ್ಕತ್ತಾದಲ್ಲಿ ನಡೆಯಲಿದೆ. ‘ದೇವದಾಸಿ’ ಪದ್ಧತಿ ವಿರುದ್ಧ ನಡೆದ ಹೋರಾಟದ ಕಥೆಯನ್ನು ಈ ಸಿನಿಮಾ ಹೇಳಲಿದೆ. ನಾನಿ ಅವರು ಶ್ಯಾಮ್​ ಸಿಂಗ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ನೇರವಾಗಿ ಡಿಸೆಂಬರ್​ 24ರಂದು ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದ್ದು, ಕೃತಿ ಶೆಟ್ಟಿ ಅವರು ನಾನಿಗೆ ತುಟಿಯ ಮೇಲೆ ಮುತ್ತಿಟ್ಟಿದ್ದಾರೆ. ಸದ್ಯ, ಟೀಸರ್​ನ ಈ ಭಾಗ ಸಾಕಷ್ಟು ವೈರಲ್​ ಆಗುತ್ತಿದೆ.

‘ಬಂಗರಾಜು’ ಪೋಸ್ಟರ್​ ರಿಲೀಸ್​

‘ಬಂಗರಾಜು’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಯಾವ ಅವತಾರ ತಾಳಬಹುದು ಎನ್ನುವ ಕುತೂಹಲ ಪ್ರೇಕ್ಷಕರದ್ದಾಗಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ನಾಗ ಚೈತನ್ಯ ಅವರು ಕೃತಿ ಅವರ ಹೊಸ ಲುಕ್​ ಅನಾವರಣ ಮಾಡಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ. ಅಷ್ಟೇ ಅಲ್ಲ, ಕೃತಿ ಸೌಂದರ್ಯ ಎಲ್ಲರ ಗಮನ ಸೆಳೆದಿದೆ.

ಕೃತಿ ಅವರು ‘ಬಂಗರಾಜು’ ಚಿತ್ರದಲ್ಲಿ ನಾಗಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರವನ್ನು ನಾಗ ಚೈತನ್ಯ ಅನಾವರಣ ಮಾಡಿದ್ದಾರೆ. ಕೃತಿ ಅವರು ಹಸಿರು ಬಣ್ಣದ ಸೀರೆ ತೊಟ್ಟಿದ್ದಾರೆ. ಕತ್ತಿಗೆ ಗುಲಾಬಿ ಹೂವಿನ ಹಾರ ಹಾಕಿಕೊಂಡಿದ್ದಾರೆ. ಕೈಯಲ್ಲಿ ಕನ್ನಡಕ ಹಿಡಿದಿದ್ದಾರೆ. ಕಿವಿಗೆ ದೊಡ್ಡದಾದ ಕಿವಿಯೋಲೆ ಹಾಕಿದ್ದಾರೆ. ಅವರ ಲುಕ್​ ನೋಡಿ ಪ್ರೇಕ್ಷಕರು ಮನ ಸೋತಿದ್ದಾರೆ.

ಇದನ್ನೂ ಓದಿ: ಕೃತಿ ಶೆಟ್ಟಿ ಬೆಂಬಲಕ್ಕೆ ನಿಂತ ನಾಗ ಚೈತನ್ಯ; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ