AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಿ ಜತೆ ಲಿಪ್ ಕಿಸ್​​​ ಮಾಡಿ ಸುದ್ದಿಯಾದ ಕೃತಿ ಶೆಟ್ಟಿ; ಶಾಕ್​ ಆದ ಅಭಿಮಾನಿಗಳು

 ‘ಶ್ಯಾಮ್​ ಸಿಂಗ್​ ರಾಯ್’ ಸಿನಿಮಾದ ಕಥೆ ಕೋಲ್ಕತ್ತಾದಲ್ಲಿ ನಡೆಯಲಿದೆ. ‘ದೇವದಾಸಿ’ ಪದ್ಧತಿ ವಿರುದ್ಧ ನಡೆದ ಹೋರಾಟದ ಕಥೆಯನ್ನು ಈ ಸಿನಿಮಾ ಹೇಳಲಿದೆ. ನಾನಿ ಅವರು ಶ್ಯಾಮ್​ ಸಿಂಗ್​ ಆಗಿ ಕಾಣಿಸಿಕೊಂಡಿದ್ದಾರೆ.

ನಾನಿ ಜತೆ ಲಿಪ್ ಕಿಸ್​​​ ಮಾಡಿ ಸುದ್ದಿಯಾದ ಕೃತಿ ಶೆಟ್ಟಿ; ಶಾಕ್​ ಆದ ಅಭಿಮಾನಿಗಳು
ಕೃತಿ-ನಾನಿ
TV9 Web
| Edited By: |

Updated on: Nov 18, 2021 | 9:56 PM

Share

ನಟಿ ಕೃತಿ ಶೆಟ್ಟಿ (Krithi Shetty) ಟಾಲಿವುಡ್​ನ ಬೇಡಿಕೆಯ ನಟಿ. ಸಿನಿಮಾದ ಪಾತ್ರ ಏನನ್ನು ಕೇಳುತ್ತದೆಯೋ ಅದನ್ನು ಮಾಡೋಕೆ ಅವರು ಸದಾ ಸಿದ್ಧರಿರುತ್ತಾರೆ. ‘ಉಪ್ಪೇನಾ’ (Uppena) ಸಿನಿಮಾ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡರು. ಈ ಸಿನಿಮಾ ತೆರೆಕಂಡ ನಂತರದಲ್ಲಿ ಅವರ ಅಭಿಮಾನಿ ಬಳಗ ಹಿರಿದಾಗಿದೆ. ಅವರು ನಿರ್ವಹಿಸಿದ್ದ ಬೇಬಮ್ಮ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಕೃತಿ ಮತ್ತೆ ಸುದ್ದಿಯಲ್ಲಿದ್ದಾರೆ. ಅವರ ನಟನೆಯ ‘ಶ್ಯಾಮ್​ ಸಿಂಗ್​ ರಾಯ್’ ಚಿತ್ರದ ಟೀಸರ್​ ರಿಲೀಸ್​ ಆಗಿದೆ. ಈ ಟೀಸರ್​ನಲ್ಲಿ ಕೃತಿ ಲಿಪ್​ ಕಿಸ್​ ಮಾಡಿದ್ದಾರೆ.

‘ಶ್ಯಾಮ್​ ಸಿಂಗ್​ ರಾಯ್’ ಸಿನಿಮಾದ ಕಥೆ ಕೋಲ್ಕತ್ತಾದಲ್ಲಿ ನಡೆಯಲಿದೆ. ‘ದೇವದಾಸಿ’ ಪದ್ಧತಿ ವಿರುದ್ಧ ನಡೆದ ಹೋರಾಟದ ಕಥೆಯನ್ನು ಈ ಸಿನಿಮಾ ಹೇಳಲಿದೆ. ನಾನಿ ಅವರು ಶ್ಯಾಮ್​ ಸಿಂಗ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ನೇರವಾಗಿ ಡಿಸೆಂಬರ್​ 24ರಂದು ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರದ ಟೀಸರ್​ ಇಂದು ರಿಲೀಸ್​ ಆಗಿದ್ದು, ಕೃತಿ ಶೆಟ್ಟಿ ಅವರು ನಾನಿಗೆ ತುಟಿಯ ಮೇಲೆ ಮುತ್ತಿಟ್ಟಿದ್ದಾರೆ. ಸದ್ಯ, ಟೀಸರ್​ನ ಈ ಭಾಗ ಸಾಕಷ್ಟು ವೈರಲ್​ ಆಗುತ್ತಿದೆ.

‘ಬಂಗರಾಜು’ ಪೋಸ್ಟರ್​ ರಿಲೀಸ್​

‘ಬಂಗರಾಜು’ ಸಿನಿಮಾದಲ್ಲಿ ಕೃತಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅವರು ಯಾವ ಅವತಾರ ತಾಳಬಹುದು ಎನ್ನುವ ಕುತೂಹಲ ಪ್ರೇಕ್ಷಕರದ್ದಾಗಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ನಾಗ ಚೈತನ್ಯ ಅವರು ಕೃತಿ ಅವರ ಹೊಸ ಲುಕ್​ ಅನಾವರಣ ಮಾಡಿದ್ದಾರೆ. ಇದು ಪ್ರೇಕ್ಷಕರಿಗೆ ಇಷ್ಟವಾಗಿದೆ. ಅಷ್ಟೇ ಅಲ್ಲ, ಕೃತಿ ಸೌಂದರ್ಯ ಎಲ್ಲರ ಗಮನ ಸೆಳೆದಿದೆ.

ಕೃತಿ ಅವರು ‘ಬಂಗರಾಜು’ ಚಿತ್ರದಲ್ಲಿ ನಾಗಲಕ್ಷ್ಮೀ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಪಾತ್ರವನ್ನು ನಾಗ ಚೈತನ್ಯ ಅನಾವರಣ ಮಾಡಿದ್ದಾರೆ. ಕೃತಿ ಅವರು ಹಸಿರು ಬಣ್ಣದ ಸೀರೆ ತೊಟ್ಟಿದ್ದಾರೆ. ಕತ್ತಿಗೆ ಗುಲಾಬಿ ಹೂವಿನ ಹಾರ ಹಾಕಿಕೊಂಡಿದ್ದಾರೆ. ಕೈಯಲ್ಲಿ ಕನ್ನಡಕ ಹಿಡಿದಿದ್ದಾರೆ. ಕಿವಿಗೆ ದೊಡ್ಡದಾದ ಕಿವಿಯೋಲೆ ಹಾಕಿದ್ದಾರೆ. ಅವರ ಲುಕ್​ ನೋಡಿ ಪ್ರೇಕ್ಷಕರು ಮನ ಸೋತಿದ್ದಾರೆ.

ಇದನ್ನೂ ಓದಿ: ಕೃತಿ ಶೆಟ್ಟಿ ಬೆಂಬಲಕ್ಕೆ ನಿಂತ ನಾಗ ಚೈತನ್ಯ; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ