AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾದಿಂದ ಅರ್ಧಕ್ಕೆ ಹೊರ ನಡೆದ ರಶ್ಮಿಕಾ ಮಂದಣ್ಣ; ಕಾರಣ ತಿಳಿಯುವ ಮೊದಲೇ ಹೊಸ ನಾಯಕಿಯ ಆಯ್ಕೆ

ಈಗ ಸಿನಿಮಾದಿಂದ ರಶ್ಮಿಕಾ ಹೊರ ನಡೆದಿದ್ದಾರೆ. ಈ ವಿಚಾರವನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಆದರೆ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಅನ್ನೋದು ಗಾಸಿಪ್​ ಮಂದಿಯ ನಂಬಿಕೆ.

ಸಿನಿಮಾದಿಂದ ಅರ್ಧಕ್ಕೆ ಹೊರ ನಡೆದ ರಶ್ಮಿಕಾ ಮಂದಣ್ಣ; ಕಾರಣ ತಿಳಿಯುವ ಮೊದಲೇ ಹೊಸ ನಾಯಕಿಯ ಆಯ್ಕೆ
ರಶ್ಮಿಕಾ-ಕೃತಿ
ರಾಜೇಶ್ ದುಗ್ಗುಮನೆ
|

Updated on: Jul 14, 2023 | 6:30 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಖ್ಯಾತಿ ಹೆಚ್ಚುತ್ತಿದೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರು ಒಪ್ಪಿಕೊಂಡ ಸಿನಿಮಾದಿಂದ ಹೊರ ನಡೆದಿದ್ದು ಬಹಳವೇ ಕಡಿಮೆ. ಈಗ ಆ ರೀತಿಯ ಪರಿಸ್ಥಿತಿ ಬಂದೊದಗಿದೆ. ವೆಂಕಿ ಕುಡುಮುಲ ನಿರ್ದೇಶನದ ಚಿತ್ರದಲ್ಲಿ ರಶ್ಮಿಕಾ ಅವರು ನಿತಿನ್​ಗೆ ಜೊತೆಯಾಗಿ ನಟಿಸಬೇಕಿತ್ತು. ಆದರೆ, ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಸಿನಿಮಾದಿಂದ ಹೊರ ಬಂದಿದ್ದಾರೆ ಎನ್ನಲಾಗುತ್ತಿದೆ. ಈ ಜಾಗಕ್ಕೆ ದಕ್ಷಿಣದ ಖ್ಯಾತ ನಟಿಯ ಎಂಟ್ರಿ ಆಗಿದೆ ಅನ್ನೋದು ವಿಶೇಷ.

ರಶ್ಮಿಕಾ ಮಂದಣ್ಣ ಅವರು ಟಾಲಿವುಡ್​​ಗೆ ಎಂಟ್ರಿಕೊಟ್ಟಿದ್ದು ‘ಚಲೋ’ ಸಿನಿಮಾ ಮೂಲಕ. ಈ ಚಿತ್ರವನ್ನು ವೆಂಕಿ ಕುಡುಮುಲ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಯಶಸ್ಸು ಕಂಡಿತು. ಅದೇ ರೀತಿ ‘ಭೀಷ್ಮ’ ಸಿನಿಮಾ ಕೂಡ ಗೆದ್ದಿತ್ತು. ವೆಂಕಿ ನಿರ್ದೇಶನದ, ರಶ್ಮಿಕಾ-ನಿತಿನ್ ನಟನೆಯ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ನಿತಿನ್, ವೆಂಕಿ ಹಾಗೂ ರಶ್ಮಿಕಾ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬರುವುದರಲ್ಲಿತ್ತು. #VNRTrio ಎಂದು ಈ ಚಿತ್ರಕ್ಕೆ ತಾತ್ಕಾಲಿಕ ಶೀರ್ಷಿಕೆ ಇಡಲಾಗಿತ್ತು. ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡಲು ಮುಂದೆ ಬಂದಿತ್ತು.

ಈಗ ಸಿನಿಮಾದಿಂದ ರಶ್ಮಿಕಾ ಹೊರ ನಡೆದಿದ್ದಾರೆ. ಈ ವಿಚಾರವನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಆದರೆ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಅನ್ನೋದು ಗಾಸಿಪ್​ ಮಂದಿಯ ನಂಬಿಕೆ. ಅಚ್ಚರಿ ಎಂದರೆ, ಈಗ ಹೊಸ ನಾಯಕಿಯ ಆಯ್ಕೆಯೂ ಶುರುವಾಗಿದೆ.

ಕರಾವಳಿ ಬೆಡಗಿ ಕೃತಿ ಶೆಟ್ಟಿಗೆ ಈ ಆಫರ್ ನೀಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ವೆಂಕಿ ಅವರು ಕೃತಿ ಅವರನ್ನು ಭೇಟಿ ಮಾಡಿದ್ದು, ಶೀಘ್ರವೇ ಎಲ್ಲವೂ ಫೈನಲ್ ಆಗಲಿದೆ ಎನ್ನಲಾಗುತ್ತಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಈ ಮೊದಲು ನಿತಿನ್ ಹಾಗೂ ಕೃತಿ ಒಟ್ಟಾಗಿ ನಟಿಸಿದ್ದರು ಅನ್ನೋದು ವಿಶೇಷ.

ಇದನ್ನೂ ಓದಿ: ಹೊಸ ತೆಲುಗು ಸಿನಿಮಾದ ಅವಕಾಶ ಕಳೆದುಕೊಂಡರೆ ರಶ್ಮಿಕಾ? ಸೋಷಿಯಲ್ ಮೀಡಿಯಾ ಪೋಸ್ಟ್ ಯಾಕಾಗಿ?

ಒಂದೇ ಬಾರಿಗೆ ಇಷ್ಟು ಚಿತ್ರಗಳಿಗೆ ಡೇಟ್ಸ್ ಅಡ್ಜೆಸ್ಟ್ ಮಾಡಲು ಸಾಧ್ಯವಾಗದ ಕಾರಣ ರಶ್ಮಿಕಾ ನಿರ್ಮಾಪಕರ ಬಳಿ ಮಾತನಾಡಿ ಸಿನಿಮಾದಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ. ರಶ್ಮಿಕಾ ಹೊರನಡೆದಿರುವುದು ನಿತಿನ್ ಚಿತ್ರಕ್ಕೆ ನಿಜಕ್ಕೂ ದೊಡ್ಡ ನಷ್ಟ. ಏಕೆಂದರೆ ರಶ್ಮಿಕಾ ಇರುವ ಕಾರಣಕ್ಕೆ ಸಿನಿಮಾಗೆ ಪ್ಯಾನ್ ಇಂಡಿಯಾ ಕ್ರೇಜ್ ಸೃಷ್ಟಿ ಆಗಿತ್ತು. ಈ ಕಾರಣದಿಂದಲೇ ರಶ್ಮಿಕಾ ಬದಲಿಗೆ ಕೃತಿ ಶೆಟ್ಟಿ ಆಯ್ಕೆ ಮಾಡಿರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!