AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾದಿಂದ ಅರ್ಧಕ್ಕೆ ಹೊರ ನಡೆದ ರಶ್ಮಿಕಾ ಮಂದಣ್ಣ; ಕಾರಣ ತಿಳಿಯುವ ಮೊದಲೇ ಹೊಸ ನಾಯಕಿಯ ಆಯ್ಕೆ

ಈಗ ಸಿನಿಮಾದಿಂದ ರಶ್ಮಿಕಾ ಹೊರ ನಡೆದಿದ್ದಾರೆ. ಈ ವಿಚಾರವನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಆದರೆ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಅನ್ನೋದು ಗಾಸಿಪ್​ ಮಂದಿಯ ನಂಬಿಕೆ.

ಸಿನಿಮಾದಿಂದ ಅರ್ಧಕ್ಕೆ ಹೊರ ನಡೆದ ರಶ್ಮಿಕಾ ಮಂದಣ್ಣ; ಕಾರಣ ತಿಳಿಯುವ ಮೊದಲೇ ಹೊಸ ನಾಯಕಿಯ ಆಯ್ಕೆ
ರಶ್ಮಿಕಾ-ಕೃತಿ
ರಾಜೇಶ್ ದುಗ್ಗುಮನೆ
|

Updated on: Jul 14, 2023 | 6:30 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಖ್ಯಾತಿ ಹೆಚ್ಚುತ್ತಿದೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರು ಒಪ್ಪಿಕೊಂಡ ಸಿನಿಮಾದಿಂದ ಹೊರ ನಡೆದಿದ್ದು ಬಹಳವೇ ಕಡಿಮೆ. ಈಗ ಆ ರೀತಿಯ ಪರಿಸ್ಥಿತಿ ಬಂದೊದಗಿದೆ. ವೆಂಕಿ ಕುಡುಮುಲ ನಿರ್ದೇಶನದ ಚಿತ್ರದಲ್ಲಿ ರಶ್ಮಿಕಾ ಅವರು ನಿತಿನ್​ಗೆ ಜೊತೆಯಾಗಿ ನಟಿಸಬೇಕಿತ್ತು. ಆದರೆ, ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಅವರು ಸಿನಿಮಾದಿಂದ ಹೊರ ಬಂದಿದ್ದಾರೆ ಎನ್ನಲಾಗುತ್ತಿದೆ. ಈ ಜಾಗಕ್ಕೆ ದಕ್ಷಿಣದ ಖ್ಯಾತ ನಟಿಯ ಎಂಟ್ರಿ ಆಗಿದೆ ಅನ್ನೋದು ವಿಶೇಷ.

ರಶ್ಮಿಕಾ ಮಂದಣ್ಣ ಅವರು ಟಾಲಿವುಡ್​​ಗೆ ಎಂಟ್ರಿಕೊಟ್ಟಿದ್ದು ‘ಚಲೋ’ ಸಿನಿಮಾ ಮೂಲಕ. ಈ ಚಿತ್ರವನ್ನು ವೆಂಕಿ ಕುಡುಮುಲ ನಿರ್ದೇಶನ ಮಾಡಿದ್ದರು. ಈ ಸಿನಿಮಾ ಯಶಸ್ಸು ಕಂಡಿತು. ಅದೇ ರೀತಿ ‘ಭೀಷ್ಮ’ ಸಿನಿಮಾ ಕೂಡ ಗೆದ್ದಿತ್ತು. ವೆಂಕಿ ನಿರ್ದೇಶನದ, ರಶ್ಮಿಕಾ-ನಿತಿನ್ ನಟನೆಯ ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ನಿತಿನ್, ವೆಂಕಿ ಹಾಗೂ ರಶ್ಮಿಕಾ ಕಾಂಬಿನೇಷನ್​ನಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬರುವುದರಲ್ಲಿತ್ತು. #VNRTrio ಎಂದು ಈ ಚಿತ್ರಕ್ಕೆ ತಾತ್ಕಾಲಿಕ ಶೀರ್ಷಿಕೆ ಇಡಲಾಗಿತ್ತು. ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡಲು ಮುಂದೆ ಬಂದಿತ್ತು.

ಈಗ ಸಿನಿಮಾದಿಂದ ರಶ್ಮಿಕಾ ಹೊರ ನಡೆದಿದ್ದಾರೆ. ಈ ವಿಚಾರವನ್ನು ಯಾರೂ ಅಧಿಕೃತವಾಗಿ ಒಪ್ಪಿಕೊಂಡಿಲ್ಲ. ಆದರೆ, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ ಅನ್ನೋದು ಗಾಸಿಪ್​ ಮಂದಿಯ ನಂಬಿಕೆ. ಅಚ್ಚರಿ ಎಂದರೆ, ಈಗ ಹೊಸ ನಾಯಕಿಯ ಆಯ್ಕೆಯೂ ಶುರುವಾಗಿದೆ.

ಕರಾವಳಿ ಬೆಡಗಿ ಕೃತಿ ಶೆಟ್ಟಿಗೆ ಈ ಆಫರ್ ನೀಡಲಾಗಿದೆ ಎನ್ನುವ ಸುದ್ದಿ ಹರಿದಾಡಿದೆ. ವೆಂಕಿ ಅವರು ಕೃತಿ ಅವರನ್ನು ಭೇಟಿ ಮಾಡಿದ್ದು, ಶೀಘ್ರವೇ ಎಲ್ಲವೂ ಫೈನಲ್ ಆಗಲಿದೆ ಎನ್ನಲಾಗುತ್ತಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಈ ಮೊದಲು ನಿತಿನ್ ಹಾಗೂ ಕೃತಿ ಒಟ್ಟಾಗಿ ನಟಿಸಿದ್ದರು ಅನ್ನೋದು ವಿಶೇಷ.

ಇದನ್ನೂ ಓದಿ: ಹೊಸ ತೆಲುಗು ಸಿನಿಮಾದ ಅವಕಾಶ ಕಳೆದುಕೊಂಡರೆ ರಶ್ಮಿಕಾ? ಸೋಷಿಯಲ್ ಮೀಡಿಯಾ ಪೋಸ್ಟ್ ಯಾಕಾಗಿ?

ಒಂದೇ ಬಾರಿಗೆ ಇಷ್ಟು ಚಿತ್ರಗಳಿಗೆ ಡೇಟ್ಸ್ ಅಡ್ಜೆಸ್ಟ್ ಮಾಡಲು ಸಾಧ್ಯವಾಗದ ಕಾರಣ ರಶ್ಮಿಕಾ ನಿರ್ಮಾಪಕರ ಬಳಿ ಮಾತನಾಡಿ ಸಿನಿಮಾದಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ. ರಶ್ಮಿಕಾ ಹೊರನಡೆದಿರುವುದು ನಿತಿನ್ ಚಿತ್ರಕ್ಕೆ ನಿಜಕ್ಕೂ ದೊಡ್ಡ ನಷ್ಟ. ಏಕೆಂದರೆ ರಶ್ಮಿಕಾ ಇರುವ ಕಾರಣಕ್ಕೆ ಸಿನಿಮಾಗೆ ಪ್ಯಾನ್ ಇಂಡಿಯಾ ಕ್ರೇಜ್ ಸೃಷ್ಟಿ ಆಗಿತ್ತು. ಈ ಕಾರಣದಿಂದಲೇ ರಶ್ಮಿಕಾ ಬದಲಿಗೆ ಕೃತಿ ಶೆಟ್ಟಿ ಆಯ್ಕೆ ಮಾಡಿರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ