AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃತಿ ಶೆಟ್ಟಿಗೆ ರಶ್ಮಿಕಾ ಮಂದಣ್ಣ ರೀತಿ ಆಗುವ ಕನಸು; ದೊಡ್ಡ ಹೀರೋಗಳಿಂದ ಬಂದ ಉತ್ತರದಿಂದ ನಿರಾಸೆ?

ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳಲು ಕೃತಿ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಇನ್ನು ಅವರು ನಟನೆಯಲ್ಲಿ ಸಂಪೂರ್ಣವಾಗಿ ಪಳಗಿಲ್ಲ. ಇದರಿಂದ ದೊಡ್ಡ ಹೀರೋಗಳು ಎರಡು ಬಾರಿ ಆಲೋಚಿಸುವಂತೆ ಆಗಿದೆ. ‘

ಕೃತಿ ಶೆಟ್ಟಿಗೆ ರಶ್ಮಿಕಾ ಮಂದಣ್ಣ ರೀತಿ ಆಗುವ ಕನಸು; ದೊಡ್ಡ ಹೀರೋಗಳಿಂದ ಬಂದ ಉತ್ತರದಿಂದ ನಿರಾಸೆ?
ರಶ್ಮಿಕಾ-ಕೃತಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 07, 2022 | 3:58 PM

Share

ನಟಿ ಕೃತಿ ಶೆಟ್ಟಿ (Krithi Shetty) ಅವರು ದಕ್ಷಿಣ ಭಾರತದ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ. ‘ಉಪ್ಪೇನಾ’ ಸಿನಿಮಾದಿಂದ (Uppena Movie) ದೊಡ್ಡ ಹಿಟ್ ಪಡೆದ ಅವರ ಕೈಯಲ್ಲಿ ಈಗ ಹಲವು ಸಿನಿಮಾಗಳಿವೆ. ಆದರೆ, ದೊಡ್ಡ ದೊಡ್ಡ ಸ್ಟಾರ್​ ನಟರ ಜತೆ ತೆರೆಹಂಚಿಕೊಳ್ಳುವ ಅವಕಾಶ ಅವರಿಗೆ ಒದಗಿ ಬಂದಿಲ್ಲ. ರಶ್ಮಿಕಾ ಮಂದಣ್ಣ (Rashmika Mandanna) ಟಾಲಿವುಡ್​ಗೆ ಕಾಲಿಟ್ಟ ಕೆಲವೇ ವರ್ಷಗಳಲ್ಲಿ ಸ್ಟಾರ್​ ಹೀರೋಗಳ ಜತೆ ತೆರೆ ಹಂಚಿಕೊಂಡರು. ಕೃತಿ ಶೆಟ್ಟಿಗೂ ಹೀಗೊಂದು ಆಸೆ ಇದೆ. ಆದರೆ, ಈ ಆಸೆ ಸದ್ಯಕ್ಕೆ ಈಡೇರುವ ಲಕ್ಷಣ ಗೋಚರವಾಗುತ್ತಿಲ್ಲ. ಕೆಲ ಸ್ಟಾರ್​ಗಳು ನೀಡಿದ ಉತ್ತರವೂ ಅವರಿಗೆ ಶಾಕ್​ ನೀಡಿದೆ ಎನ್ನಲಾಗುತ್ತಿದೆ.

ಕೃತಿ ಶೆಟ್ಟಿ ನಟನೆಯ ‘ಶ್ಯಾಮ್​ ಸಿಂಗ ರಾಯ್​’ ಚಿತ್ರದಿಂದ ಕೃತಿ ಖ್ಯಾತಿ ಹೆಚ್ಚಿದೆ. ಅವರು ನಾಗ ಚೈತನ್ಯ ನಟನೆಯ ‘ಬಂಗಾರ್ರಾಜು’ ಚಿತ್ರದಲ್ಲಿ ಬಣ್ಣ ಹಚ್ಚಿದ್ದರು. ಈ ಸಿನಿಮಾ ತಕ್ಕ ಮಟ್ಟಿಗೆ ಗೆಲುವು ಕಂಡಿತು. ಆದರೆ, ಅವರ ವೃತ್ತಿ ಜೀವನದಲ್ಲಿ ಈ ಸಿನಿಮಾಗಳು ದೊಡ್ಡ ಬದಲಾವಣೆ ತಂದಿಲ್ಲ. ಹೀಗಾಗಿ, ತಮ್ಮ ಮ್ಯಾನೇಜರ್​ಗೆ ಕೃತಿ ಒತ್ತಡ ಹೇರುತ್ತಿದ್ದಾರೆ. ದೊಡ್ಡ ಸ್ಟಾರ್​ ಸಿನಿಮಾಗಳನ್ನು ತರುವಂತೆ ಕೃತಿ ಅವರು ಸೂಚನೆ ನೀಡಿದ್ದಾರೆ. ಆದರೆ, ಹೀರೋಗಳು ಇದಕ್ಕೆ ಅಷ್ಟಾಗಿ ಆಸಕ್ತಿ ತೋರಿಲ್ಲ.

ಗ್ಲಾಮರ್​ ಲುಕ್​ನಲ್ಲಿ ಕಾಣಿಸಿಕೊಳ್ಳಲು ಕೃತಿ ಅಷ್ಟಾಗಿ ಆಸಕ್ತಿ ತೋರುತ್ತಿಲ್ಲ. ಇನ್ನು ಅವರು ನಟನೆಯಲ್ಲಿ ಸಂಪೂರ್ಣವಾಗಿ ಪಳಗಿಲ್ಲ. ಇದರಿಂದ ದೊಡ್ಡ ಹೀರೋಗಳು ಎರಡು ಬಾರಿ ಆಲೋಚಿಸುವಂತೆ ಆಗಿದೆ. ‘ಕೃತಿಗೆ ಸಂಪೂರ್ಣ ಗ್ಲಾಮರ್ ಲುಕ್ ತೊಡಲು ಸೂಚಿಸಿ’ ಎಂದು ಕೆಲ ನಟರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ಅವರು ಸದ್ಯದ ಮಟ್ಟಿಗಂತೂ ರೆಡಿ ಇಲ್ಲ. ಒಳ್ಳೆಯ ಪಾತ್ರ ಸಿಕ್ಕರೆ ಮಾತ್ರ ನಟಿಸುವ ಆಲೋಚನೆಯಲ್ಲಿ ಅವರಿದ್ದಾರೆ.

ಇದನ್ನೂ ಓದಿ
Image
‘ನಾನು ಮತ್ತು ನನ್ನವನು’; ಸ್ವಿಮ್ಮಿಂಗ್​ಪೂಲ್​ನಲ್ಲಿ ವಿಕ್ಕಿಯನ್ನು ತಬ್ಬಿ ಫೋಟೋ ಹಂಚಿಕೊಂಡ ಕತ್ರಿನಾ
Image
Rashmika Mandanna: ರಶ್ಮಿಕಾ ಮಂದಣ್ಣ ರಿಜೆಕ್ಟ್ ಮಾಡಿದ್ದ ಈ ಸಿನಿಮಾಗಳು ಸೋತಿದ್ದು ಹಾಗೀಗಲ್ಲ
Image
Krithi Shetty: ‘ಲವ್ ಯು ಆಲ್’ ಎಂದು ಅಭಿಮಾನಿಗಳಿಗೆ ಪ್ರೀತಿ ತೋರಿದ ಕೃತಿ ಶೆಟ್ಟಿ; ಕರಾವಳಿ ಬೆಡಗಿಯ ಸಂತಸಕ್ಕೆ ಏನು ಕಾರಣ?
Image
ಏಪ್ರಿಲ್ 3ಕ್ಕಾಗಿ ಕಾದಿದ್ದಾರೆ ಕೃತಿ ಶೆಟ್ಟಿ; ಇದಕ್ಕಿದೆ ಮಹತ್ವದ ಕಾರಣ

ಗ್ಲಾಮರ್ ಲುಕ್​ನಲ್ಲಿ ಕಾಣಿಸಿಕೊಳ್ಳಲು ರೆಡಿ ಇಲ್ಲದಿದ್ದರೆ ಕೀರ್ತಿ ಸುರೇಶ್ ರೀತಿಯಲ್ಲಿ ನಟನೆ ತೋರುವಂತೆ ಕೆಲ ಹೀರೋಗಳು ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ. ಆದರೆ, ನಟನೆ ಎನ್ನುವುದು ಏಕಾಏಕಿ ಬರುವಂತಹದ್ದಲ್ಲ. ಹೀಗಾಗಿ, ಕೃತಿ ದೊಡ್ಡ ಹೀರೋಗಳ ಜತೆ ನಟಿಸಲು ಇನ್ನಷ್ಟು ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!